Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 29 ಮಾರ್ಚ್ 2022 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹೊಸದಾಗಿ ಆರಂಭಿಸಿದ್ದ ಉದ್ಯಮದಲ್ಲಿ ಏರುಪೇರುಗಳಾದೀತು. ಆತ್ಮವಿಶ್ವಾಸದಿಂದ ಮುಂದುವರಿಯುವುದು ಮುಖ್ಯ. ವಿದ್ಯಾರ್ಥಿಗಳಿಗೆ ಕಠಿಣ ಪರೀಕ್ಷೆಗಳು ಎದುರಾಗಲಿವೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಹೊಸದಾಗಿ ಹೂಡಿಕೆ ಮಾಡುವ ವಿಚಾರವಾಗಿ ಮನೆಯಲ್ಲಿ ಚರ್ಚೆಗಳಾದೀತು. ಮಾತಿನ ಮೇಲೆ ನಿಗಾ ಇರಲಿ. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ನಿಮ್ಮ ಕೆಲಸ ಕಾರ್ಯಗಳಲ್ಲಿ ಪ್ರಗತಿ ಕಂಡುಬರಲಿದೆ. ಕೌಟುಂಬಿಕವಾಗಿ ನೆಮ್ಮದಿಯ ದಿನಗಳಾಗಿವೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ತೊಂದರೆಯಾದೀತು.

ಕರ್ಕಟಕ: ದೇಹಕ್ಕೆ ಪರಿಶ್ರಮವಾದರೂ ನೀವು ಮಾಡುವ ಕೆಲಸಗಳಿಂದ ಮನಸ್ಸಿಗೆ ಸಂತೋಷ, ನೆಮ್ಮದಿ ಸಿಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಕಷ್ಟದ ಸಮಯದಲ್ಲಿ ನೆರೆಹೊರೆಯವರ ಸಹಾಯ ಸಿಗಲಿದೆ.

ಸಿಂಹ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಕ್ರೀಡಾ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ವೃತ್ತಿರಂಗದಲ್ಲಿ ಉನ್ನತ ಸ್ಥಾನ ಮಾನದ ಯೋಗದ ಜೊತೆಗೆ ಹೊಸ ಜವಾಬ್ಧಾರಿಗಳೂ ಹೆಗಲಿಗೇರಲಿವೆ. ಅನ್ಯರ ಕಷ್ಟಗಳಿಗೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರುವುದು.

ತುಲಾ: ಹೆಚ್ಚಿನ ಧನಾರ್ಜನೆಗಾಗಿ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವೈಯಕ್ತಿಕ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಕಾರ್ಯರಂಗದಲ್ಲಿ ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ.

ವೃಶ್ಚಿಕ: ಮನಸ್ಸಿಗೆ ಉಲ್ಲಾಸ ಕೊಡುವ ಕೆಲಸಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.

ಧನು: ಮನಸ್ಸಿಗೆ ಅತೀವವಾಗಿ ಕಾಡುವ ವಿಚಾರಗಳಿಗೆ ಪರಿಹಾರ ಕಂಡುಕೊಳ್ಳಲೆತ್ನಿಸುವಿರಿ. ನಿಮ್ಮ ಕೆಲಸ ಕಾರ್ಯಗಳಲ್ಲಿ ಸಂಗಾತಿಯ ಸಹಕಾರವಿರಲಿದೆ. ಹಣಕಾಸಿನ ವಿಚಾರದಲ್ಲಿ ಹಿಡಿತವಿರಲಿ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಮಕರ: ಹೊಸದಾಗಿ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದರೆ ಶುಭ ಫಲಗಳು ದೊರೆಯಲಿವೆ. ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಮಕ್ಕಳಿಂದ ಸಂತೋಷದ ವಾರ್ತೆ ಆಲಿಸಲಿದ್ದೀರಿ.

ಕುಂಭ: ಅನಿರೀಕ್ಷಿತವಾಗಿ ದೇಹಾರೋಗ್ಯದ ಸಮಸ್ಯೆ ಕಂಡುಬಂದು ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿಯಾದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಒದಗಿಬರುವುದು. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.

ಮೀನ: ಅರ್ಧಕ್ಕೇ ನಿಂತ ಕೆಲಸಗಳಿಗೆ ಮರು ಚಾಲನೆ ನೀಡಲಿದ್ದೀರಿ. ಹಣಕಾಸಿನ ಹರಿವು ಉತ್ತಮವಾಗಿರಲಿದ್ದು, ಸರಿಯಾದ ಲೆಕ್ಕಾಚಾರ ಹಾಕುವುದು ಅಗತ್ಯ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ