ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 30 ಮಾರ್ಚ್ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷಗಳು ಬೇಡ. ವಿಶೇಷವಾದ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದೀರಿ. ನಿಮ್ಮ ಪ್ರೀತಿ ಪಾತ್ರರು ನಿಮ್ಮನ್ನು ಅವಗಣಿಸುತ್ತಾರೆಂಬ ಕೀಳರಿಮೆ ಕಾಡೀತು. ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆಗಾಗಿ ನೀವು ಪಡುತ್ತಿದ್ದ ಪ್ರಯತ್ನಕ್ಕೆ ಫಲ ಸಿಗಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉನ್ನತ ಅವಕಾಶಗಳು ದೊರೆಯಲಿವೆ. ಅನ್ಯರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ.

ಮಿಥುನ: ಸಾಂಸಾರಿಕವಾಗಿ ಅನಗತ್ಯ ಚರ್ಚೆಗೆ ಆಸ್ಪದ ಕೊಡಬೇಡಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ಹಣಕಾಸಿನ ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ನಿಮ್ಮ ವ್ಯವಹಾರ ಚತರುತೆಯಿಂದ ಯಶಸ್ಸು ನಿಮ್ಮದಾಗಲಿದೆ. ದೇಹಾರೋಗ್ಯದ ವಿಚಾರದಲ್ಲಿ ಕಾಳಜಿಯಿರಲಿ. ಮನಸ್ಸಿಗೆ ಹತ್ತಿರವಾದವರ ಬಳಿ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ. ಮಹಿಳೆಯರಿಗೆ ಉನ್ನತಿಯ ಯೋಗ.

ಸಿಂಹ: ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲ ಪ್ರಯತ್ನಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಹಳೆಯ ಸ್ನೇಹಿತರ ಪುನರ್ಮಿಲನ ಸಾಧ್ಯತೆ. ಕಳೆದು ಹೋದ ವಸ್ತುವಿಗಾಗಿ ಹುಡುಕಾಟ ನಡೆಸಲಿದ್ದೀರಿ. ತಾಳ್ಮೆಯಿರಲಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಪರಸ್ಪರ ಸಹಕಾರ ಕಂಡುಬರಲಿದೆ. ಮನೆಗೆ ನೆಂಟರಿಷ್ಟರ ಭೇಟಿ ಸಾಧ್ಯತೆ. ಅಧಿಕ ಧನಾರ್ಜನೆಗಾಗಿ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ.

ತುಲಾ: ನಿಮ್ಮ ಸಾಂಸಾರಿಕ ಗುಟ್ಟುಗಳು ನಿಮ್ಮಲ್ಲಿಯೇ ಇರಲಿ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಮನಸ್ಸು ಹಾತೊರೆಯಲಿದೆ. ಮಕ್ಕಳಿಂದ ಸಂತೋಷ ಪ್ರಾಪ್ತಿಯಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ವೃಶ್ಚಿಕ: ದೇವತಾ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಮಕ್ಕಳ ಮೇಲೆ ನೀವು ಇಟ್ಟಿರುವ ಭರವಸೆ ಹುಸಿಯಾಗದು. ಆದಾಯಕ್ಕೆ ತಕ್ಕಂತೆ ಖರ್ಚೂ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿ ಕಂಡುಬರುವುದು.

ಧನು: ಯಾವುದೇ ವಿಚಾರವನ್ನು ಅತಿಯಾಗಿ ಮನಸ್ಸಿಗೆ ಹಚ್ಚಿಕೊಂಡು ಕೊರಗುತ್ತಾ ಕೂರಬೇಡಿ. ಆತ್ಮೀಯರು ನೀಡುವ ಸಲಹೆಗಳನ್ನು ಪಾಲಿಸುವುದು ಉತ್ತಮ. ಸಂಗಾತಿಯ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಮಕರ: ಉದ್ಯೋಗ ನಿಮಿತ್ತ ಪರವೂರಿಗೆ ಸಂಚರಿಸುವ ಅವಕಾಶಗಳು ಒದಗಿಬರಲಿದೆ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರುವುದು. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಪಾಲುದಾರಿಕಾ ವ್ಯವಹಾರದಲ್ಲಿ ಹೆಚ್ಚಿನ ಪ್ರಗತಿ ಕಂಡುಬರಲಿದೆ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ. ಬಂಧು ಬಳಗದವರಿಂದ ಉತ್ತಮ ಸಹಕಾರ ಕಂಡುಬರಲಿದೆ. ಅನಗತ್ಯ ಚಿಂತೆ ಬೇಡ.

ಮೀನ: ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾದೀತು. ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಲಾಭವಾಗಲಿದೆ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಬುಧವಾರ ಗಣೇಶನ ಅನುಗ್ರಹಕ್ಕೆ ಈ ಸ್ತೋತ್ರ ಓದಿ

ವೈಕುಂಠ ಏಕಾದಶಿ ದಿನವಾದ ಇಂದು ಮಹಾವಿಷ್ಣುವಿನ ಈ ಮಂತ್ರವನ್ನು ತಪ್ಪದೇ ಪಠಿಸಿ

ವಿವಾಹ, ಸಂತಾನಕ್ಕೆ ಅಡ್ಡಿಯಾಗುತ್ತಿದ್ದರೆ ಸುಬ್ರಹ್ಮಣ್ಯನ ಈ ಸ್ತೋತ್ರ ಓದಿ

ನಾಳೆ ವೈಕುಂಠ ಏಕಾದಶಿ, ಹೀಗಿರಲಿ ಪೂಜಾ ವಿಧಾನ

ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರ ಓದಿ

ಮುಂದಿನ ಸುದ್ದಿ
Show comments