Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 2 ಏಪ್ರಿಲ್ 2022 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕೌಟುಂಬಿಕವಾಗಿ ಇಲ್ಲಸಲ್ಲದ ಕಿರಿ ಕಿರಿಗಳನ್ನು ಮರೆತು ಸಂತೋಷವಾಗಿ ಕಾಲಕಳೆಯಿರಿ. ನಿಮ್ಮ ಬಗ್ಗೆ ದೋಷಾರೋಪಣೆ ಮಾಡುವವರ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಷಭ: ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಮನೆಗೆ ನೆಂಟರಿಷ್ಟರ ಆಗಮನವಾಗಲಿದೆ. ಹೊಸ ವಸ್ತ್ರ, ಭೋಜನ ಮಾಡುವ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಕೆಟ್ಟೀತು.

ಮಿಥುನ: ಹೊಸ ಕೆಲಸಗಳನ್ನು ಆರಂಭಿಸಲು ಇದು ಸಕಾಲ. ಹಠ, ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕೇ ಸಿಗುತ್ತದೆ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ.

ಕರ್ಕಟಕ: ಗುರುಹಿರಿಯರ ಸಲಹೆಗಳನ್ನು ಪಾಲಿಸುವುದರಿಂದ ಕೆಲಸದಲ್ಲಿ ಮುನ್ನಡೆ ಕಂಡುಬರಲಿದೆ. ದೈಹಿಕವಾಗಿ ಶ್ರಮದಾಯಕ ಕೆಲಸಗಳು ಕಂಡುಬರಲಿದೆ. ವಿಶೇಷವಾದ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದೀರಿ. ಚಿಂತೆ ಬೇಡ.

ಸಿಂಹ: ಸಾಂಸಾರಿಕವಾಗಿ ಸುಖ ಸಮೃದ್ಧಿಯ ದಿನಗಳಿವು. ಸಂಗಾತಿಯ ಸಂತೋಷಕ್ಕಾಗಿ ಕೆಲವೊಂದು ತ್ಯಾಗ ಮಾಡಲಿದ್ದೀರಿ. ಉದ್ಯೋಗ ವ್ಯವಹಾರದಲ್ಲಿ ಉನ್ನತಿಯ ಯೋಗ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.

ಕನ್ಯಾ: ಕೌಟುಂಬಿಕ ವಿಚಾರದಲ್ಲಿ ತಾಳ್ಮೆ, ಸಹನೆ ಅಗತ್ಯ. ಬಹುದಿನಗಳ ನಂತರ ಪ್ರೀತಿ ಪಾತ್ರರೊಂದಿಗೆ ದಿನ ಕಳೆಯುವ ಯೋಗ. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ಸಹೋದರ ಸಮಾನರ ಪ್ರೀತಿಗೆ ಪಾತ್ರರಾಗಲಿದ್ದೀರಿ.

ತುಲಾ: ಬೇರೆಯವರ ಕಷ್ಟಕ್ಕೆ ಸ್ಪಂದಿಸುವ ನಿಮ್ಮ ಗುಣ ಕೆಲವೊಮ್ಮೆ ತೊಂದರೆಯಾಗಿ ಕಾಡಬಹುದು. ಎಚ್ಚರಿಕೆಯಿಂದ ವ್ಯವಹರಿಸಿ. ನಿಮ್ಮ ಕೆಲಸ ಕಾರ್ಯಗಳಲ್ಲಿ ಕುಟುಂಬದವರ ಸಹಕಾರವಿರಲಿದೆ. ಅನಗತ್ಯ ಚಿಂತೆ ಬೇಡ.

ವೃಶ್ಚಿಕ: ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ನೆಂಟರಿಷ್ಟರ ಭೇಟಿಯಾಗಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಧನು: ಮಕ್ಕಳ ವಿಚಾರದಲ್ಲಿ ಅನಗತ್ಯ ಮೂಗು ತೂರಿಸಲು ಹೋಗಿ ಗೋಜಲು ಮಾಡಿಕೊಳ್ಳಬೇಡಿ. ನೆರೆಹೊರೆಯವರೊಂದಿಗೆ ನೀರಿನ ವಿಚಾರಕ್ಕೆ ಸಂಘರ್ಷಗಳಾದೀತು. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ತಾಳ್ಮೆಯಿರಲಿ.

ಮಕರ: ಸರಕಾರಿ ಉದ್ಯೋಗಿಗಳಿಗೆ ಬಿಡುವಿನ ದಿನದ ಖುಷಿ ಸಿಗಲಿದೆ. ಹೊಸ ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಪರರಿಗೆ ಸಹಾಯ ಮಾಡುವ ಮೊದಲು ಪೂರ್ವಾಪರ ತಿಳಿದುಕೊಳ್ಳಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಅರ್ಧಕ್ಕೇ ನಿಂತ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಇದು ಸಕಾಲ. ಹೊಸದಾಗಿ ಮದುವೆಯಾಗಿದ್ದ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ದಿನದಂತ್ಯಕ್ಕೆ ನೆಮ್ಮದಿ.

ಮೀನ: ಕೆಲಸ ಕಾರ್ಯಗಳಲ್ಲಿ ಉನ್ನತಿಯ ಯೋಗ. ನಿಮ್ಮ ನಡೆ ನುಡಿಗಳಿಂದ ಇತರರನ್ನು ಆಕರ್ಷಿಸಲಿದ್ದೀರಿ. ವಾಹನ ಸಂಚಾರದಲ್ಲಿ ಜಾಗರೂಕತೆ ಅಗತ್ಯ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳನ್ನು ಬದಿಗಿಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ