Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 8 ಏಪ್ರಿಲ್ 2022 (08:29 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹೊಸದಾಗಿ ಹುಟ್ಟಿಕೊಂಡ ಯೋಚನೆಗಳಿಗೆ ಸ್ಪಷ್ಟ ರೂಪ ನೀಡಲಿದ್ದೀರಿ. ಸಂಗಾತಿಯೊಂದಿಗೆ ಚರ್ಚಿಸಿ ಮುನ್ನಡೆಯುವುದು ಉತ್ತಮ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ. ಋಣಾತ್ಮಕ ಚಿಂತನೆಗಳು ಕಾಡೀತು.

ವೃಷಭ: ಬಹಳ ದಿನಗಳ ನಂತರ ಬಂಧುಮಿತ್ರರನ್ನು ಭೇಟಿಯಾಗುವ ಯೋಗ ನಿಮ್ಮದಾಗಲಿದೆ. ಆತ್ಮೀಯರೊಂದಿಗೆ ಮನಸ್ಸಿನ ಮಾತು ಹಂಚಿಕೊಳ್ಳಲಿದ್ಧೀರಿ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಲಿದ್ದಾರೆ.

ಮಿಥುನ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ನೀವು ನಿರೀಕ್ಷಿಸಿದ ರೀತಿಯಲ್ಲಿ ಕೆಲಸ ಕಾರ್ಯಗಳಲ್ಲಿ ಪ್ರಗತಿ ಕಂಡುಬರುವುದು. ವೈಯಕ್ತಿಕ ವಿಚಾರಗಳಲ್ಲಿ ಮೂರನೆಯವರ ಪ್ರವೇಶಕ್ಕೆ ಅವಕಾಶ ಕೊಡಬೇಡಿ.

ಕರ್ಕಟಕ: ಭವಿಷ್ಯದ ದೃಷ್ಟಿಯಿಂದ ಕೆಲವೊಂದು ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ಹೊಸದಾಗಿ ಹುಟ್ಟಿಕೊಳ್ಳುವ ಸಂಬಂಧಗಳಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ನಿಮ್ಮ ವಿಚಾರಧಾರೆಗಳಿಗೆ ಮಹತ್ವ ಸಿಗಲಿದೆ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದಿರಿ.

ಕನ್ಯಾ: ನಿಮ್ಮ ಉದಾರ ಗುಣವೇ ನಿಮಗೆ ಕೆಲವೊಮ್ಮೆ ಮುಳುವಾದೀತು. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಯೋಜನೆಗಳು ಮೇಲಧಿಕಾರಿಗಳ ಗಮನ ಸೆಳೆಯಲಿದೆ. ಸ್ವಯಂ ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆಯಿದ್ದರೂ ಹಿತಶತ್ರುಗಳ ಕಾಟ ಕಂಡುಬಂದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ನೂತನ ಕೆಲಸಕ್ಕೆ ಕೈಹಾಕಿದ್ದರೆ ಸಫಲತೆ ಕಂಡುಬರಲಿದೆ. ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಗುರುಹಿರಿಯರೊಂದಿಗೆ ಚರ್ಚಿಸಿ ಮುನ್ನಡೆಯಿರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ.

ಧನು: ನೆರೆಹೊರೆಯವರು ನಿಮ್ಮ ಗುಟ್ಟು ತಿಳಿದುಕೊಳ್ಳಲು ಪ್ರಯತ್ನಿಸಲಿದ್ದಾರೆ. ವೃತ್ತಿರಂಗದಲ್ಲಿ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಮುನ್ನಡೆ ಕಂಡುಬರುವುದು. ಮಕ್ಕಳಿಗೆ ಸಂತೋಷದ ಕ್ಷಣಗಳು ಎದುರಾಗಲಿವೆ.

ಮಕರ: ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗವಿದೆ. ಆರ್ಥಿಕವಾಗಿ ಸಬಲರಾಗಲಿದ್ದೀರಿ. ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ ಕಂಡುಬಂದೀತು. ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಬೇಕಾದೀತು, ಎಚ್ಚರಿಕೆಯಿರಲಿ.

ಕುಂಭ: ಬಹಳ ದಿನಗಳಿಂದ ಮಾಡಬೇಕೆಂದುಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಕಟ್ಟಡ-ಕಾಮಗಾರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗರೂಕತೆ ಅಗತ್ಯ. ತಾಳ್ಮೆಯಿರಲಿ.

ಮೀನ: ಕುಟುಂಬಕ್ಕೆ ಸಂಬಂಧಿಸಿದ ವಿಚಾರಗಳನ್ನು ಸೂಕ್ಷ್ಮವಾಗಿ ನಿಭಾಯಿಸಬೇಕಾದ ಅಗತ್ಯವಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ