Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 9 ಏಪ್ರಿಲ್ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಏರುಪೇರುಗಳು ಸಾಮಾನ್ಯ. ಕೌಟುಂಬಿಕವಾಗಿ ಸರಿಯಾದ ನಿರ್ಧಾರ ಕೈಗೊಳ್ಳುವಾಗ ಗೊಂದಲಗಳು ಎದುರಾದೀತು. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.

ವೃಷಭ: ವೃತ್ತಿರಂಗದಲ್ಲಿ ಉನ್ನತ ಸ್ಥಾನಮಾನಕ್ಕಾಗಿ ನಿಮ್ಮ ಪ್ರಯತ್ನ ನಡೆಸಲಿದ್ದೀರಿ. ಕುಲದೇವರ ಪ್ರಾರ್ಥನೆ ನಡೆಸಿ ಮುನ್ನಡೆದರೆ ಉತ್ತಮ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಬೆಳಗಿನ ಜಾವ ಕಂಡ ಸ್ವಪ್ನ ನಿಮ್ಮನ್ನು ಚಿಂತೆಗೀಡು ಮಾಡಲಿದೆ. ಆಪ್ತರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ. ಇಷ್ಟಮಿತ್ರರೊಂದಿಗೆ ಇಷ್ಟಭೋಜನ ಮಾಡುವ ಯೋಗ. ತಾಳ್ಮೆಯಿರಲಿ.

ಕರ್ಕಟಕ: ಅತಿಯಾದ ಧಾರಾಳಿತನದಿಂದ ಆರ್ಥಿಕ ಸಮಸ್ಯೆ ಕಂಡುಬಂದೀತು. ಮಕ್ಕಳ ವಿಚಾರದಲ್ಲಿ ವಿಶೇಷ ಕಾಳಜಿ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ಮಹಿಳೆಯರಿಂದ ನಿಮಗೆ ಇಂದು ಅನುಕೂಲವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಯಶಸ್ಸು ಕಂಡುಬರುವುದು. ಸಂಪತ್ತು ವೃದ್ಧಿಗೆ ಪ್ರಯತ್ನ ನಡೆಸಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಅನಗತ್ಯ ಚಿಂತೆ ಬೇಡ.

ಕನ್ಯಾ: ಹೊಸಬಗೆಯ ಚಿಂತನೆಗಳು ನಿಮ್ಮ ಉತ್ಸಾಹ ಹೆಚ್ಚಿಸಲಿವೆ. ಕಾರ್ಯಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸವಿದ್ದರೂ ನಿಮ್ಮ ಪ್ರಾಮುಖ್ಯತೆ ಎಲ್ಲರ ಗಮನಕ್ಕೆ ಬರಲಿದೆ. ಮಕ್ಕಳ ವಿಚಾರದಲ್ಲಿ ಪೋಷಕರ ನಡುವೆ ಚರ್ಚೆಗಳಾದೀತು. ತಾಳ್ಮೆಯಿರಲಿ.

ತುಲಾ: ಜಲೋತ್ಪನ್ನಗಳ ಕೆಲಸ ಮಾಡುವವರಿಗೆ ಮುನ್ನಡೆ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ಸಹಕರಿಸಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ನಾನಾ ರೀತಿಯ ವಿಚಾರಗಳು ಮನಸ್ಸಿಗೆ ಕಾಡಿ ಗೊಂದಲವೆನಿಸಲಿದೆ. ಸಂಗಾತಿಯ ಸಮಯೋಚಿತ ಸಲಹೆ ಉಪಯೋಗಕ್ಕೆ ಬರಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದುಂದು ವೆಚ್ಚಕ್ಕೆ ಕಡಿವಾಣವಿರಲಿ.

ಧನು: ಅನಗತ್ಯ ವಿಚಾರಗಳಿಂದ ಮನಸ್ಸಿನ ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನವಾಗುವ ಸಾಧ‍್ಯತೆಯಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ಮಕರ: ನಿಮ್ಮಿಂದ ಹಿಂದೆ ಸಹಾಯ ಪಡೆದವರಿಂದ ನಿಮಗೆ ಉಪಯೋಗವಾಗಲಿದೆ. ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಹಿರಿಯರೊಂದಿಗೆ ತಾಳ್ಮೆಯಿಂದ ವರ್ತಿಸಿ. ಚಿಂತೆ ಬೇಡ.

ಕುಂಭ: ಯಾರದ್ದೋ ಬಲವಂತಕ್ಕೆ ಮಣಿದು ನಿಮ್ಮ ನಿರ್ಧಾರಗಳನ್ನು ಬದಲಾಯಿಸಬೇಡಿ. ಹೊಸ ಕೆಲಸಕ್ಕೆ ಕೈ ಹಾಕಲು ಇದು ಸಕಾಲ. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗ. ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ.

ಮೀನ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರಲಿದೆ. ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದರಿಂದ ಸಂಭಾವ್ಯ ಅಪಾಯ ತಪ್ಪಲಿದೆ. ಶುಭ ಮಂಗಲ ಕಾರ್ಯಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರು ಗ್ರಹ ದೋಷ ನಿವಾರಣೆಗೆ ಏನು ಮಾಡಬೇಕು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಕ್ಕಳಿಗೆ ವಿದ್ಯೆ ತಲೆಗೆ ಹತ್ತದಿರಲು ಯಾವ ದೋಷ ಕಾರಣ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಮುಂಭಾಗದಲ್ಲಿ ಈ ಕೆಲವು ಗಿಡಗಳಿದ್ದರೆ ದರಿದ್ರ ತಪ್ಪಿದ್ದಲ್ಲ

ಮುಂದಿನ ಸುದ್ದಿ
Show comments