Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 13 ಏಪ್ರಿಲ್ 2022 (08:25 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸರಕಾರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಧಾರ್ಮಿಕ ಕಾರ್ಯಗಳ ನಿಮಿತ್ತ ದೂರ ಸಂಚಾರ ಮಾಡಬೇಕಾದೀತು. ಸಂಗಾತಿಯೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ತಕ್ಕ ಫಲಿತಾಂಶ ಬರಲಿದೆ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ಅಡಚಣೆ ಕಂಡುಬಂದೀತು. ಮಕ್ಕಳ ನಿಮಿತ್ತ ಖರ್ಚು ವೆಚ್ಚಗಳಾಗಲಿವೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಹಿರಿಯರೊಂದಿಗೆ ತಾಳ್ಮೆಯಿಂದ ವರ್ತಿಸಿ.

ಮಿಥುನ: ಹೊಸದಾಗಿ ಕೈ ಹಾಕಲಿರುವ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬರಲಿದೆ. ಮಕ್ಕಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಇನ್ನಷ್ಟು ಪ್ರಯತ್ನದ ಅಗತ್ಯವಿದೆ. ದಿನದಂತ್ಯಕ್ಕೆ ಸಂತೋಷದ ಸುದ್ದಿ ಕೇಳಿಬರಲಿದೆ.

ಕರ್ಕಟಕ: ನಿಮ್ಮ ಸದೃಢ ಭವಿಷ್ಯಕ್ಕಾಗಿ ಕೆಲವೊಂದು ಯೋಜನೆಗಳನ್ನು ಹಾಕಿಕೊಳ್ಳಬೇಕಾಗುತ್ತದೆ.  ಪಾಲುದಾರಿಕೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರುವುದು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.

ಸಿಂಹ: ಗುರುಹಿರಿಯರ ಸಲಹೆ ಪಡೆದು ಯಾವುದೇ ಕೆಲಸಕ್ಕೆ ಕೈ ಹಾಕುವುದು ಉತ್ತಮ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗುವುದು. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ.

ಕನ್ಯಾ: ಅಧಿಕ ಓಡಾಟದಿಂದ ದೇಹಾಯಾಸವಾದೀತು. ಪಾಲುದಾರಿಕೆ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳಲು ಇದು ಸಕಾಲ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.

ತುಲಾ: ಅಧ್ಯಯನದಲ್ಲಿ ಹೆಚ್ಚಿನ ಆಸಕ್ತಿ ಕಂಡುಬರಲಿದೆ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬಂದೀತು. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ಸಫಲತೆ ಕಂಡುಬರಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ಹೊಸ ಜನರ ಭೇಟಿಯಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಅನುಕೂಲವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ಬಂಧು ಮಿತ್ರರ ಸಮಾಗಮದಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ಸಂದರ್ಭೋಚಿತವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಮನೆಗೆ ನೆಂಟರಿಷ್ಟರ ಭೇಟಿ ಸಾಧ‍್ಯತೆ. ಸಾಂಸಾರಿಕವಾಗಿ ಮಧ್ಯಮ ಸುಖ.

ಮಕರ: ವೃತ್ತಿರಂಗದಲ್ಲಿ ಅಡೆತಡೆಗಳಿದ್ದರೂ ಮುನ್ನಡೆ ಕಂಡುಬರುವುದು. ಉದ್ಯೋಗದ ಬಗ್ಗೆ ಚಿಂತೆ ಕಾಡೀತು. ಸಂಗಾತಿಯೊಂದಿಗೆ ಮನಸ್ಸಿನ ಮಾತು ಹಂಚಿಕೊಳ್ಳಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರಲಿದೆ. ಧನ ಸಂಪತ್ತಿನ ವೃದ್ಧಿಗಾಗಿ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಭೂ ಸಂಬಂಧ ವ್ಯಾಜ್ಯಗಳು ನಿವಾರಣೆಯಾದೀತು. ದಿನದಂತ್ಯಕ್ಕೆ ನೆಮ್ಮದಿ.

ಮೀನ: ಅಧಿಕ ಕಾರ್ಯದೊತ್ತಡದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಕುಟುಂಬದವರ ಪ್ರೋತ್ಸಾಹದಿಂದಾಗಿ ಹೊಸ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಉತ್ಸಾಹ ಕಂಡುಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ವಿದ್ಯೆ ತಲೆಗೆ ಹತ್ತದಿರಲು ಯಾವ ದೋಷ ಕಾರಣ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಮುಂಭಾಗದಲ್ಲಿ ಈ ಕೆಲವು ಗಿಡಗಳಿದ್ದರೆ ದರಿದ್ರ ತಪ್ಪಿದ್ದಲ್ಲ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ದೇವಿ ಚಂದ್ರಘಂಟಾ ಮಂತ್ರ ಓದುವುದರಿಂದ ನಿಮಗೆ ಈ ಫಲಗಳು ಸಿಗುತ್ತವೆ

ಮುಂದಿನ ಸುದ್ದಿ
Show comments