Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 14 ಏಪ್ರಿಲ್ 2022 (08:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ದೇಹಾರೋಗ್ಯದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ವೃಷಭ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿದೆ. ನಿಮ್ಮ ನಡೆನುಡಿಗಳಲ್ಲಿ ಸ್ಪಷ್ಟತೆಯಿರಲಿ. ಧನಸಂಪತ್ತು ವೃದ್ಧಿಗೆ ಯೋಜನೆ ರೂಪಿಸಲಿದ್ದೀರಿ. ಸಹೋದ್ಯೋಗಿಗಳ ಸಹಕಾರದಿಂದ ಮುನ್ನಡೆ ಕಂಡುಬರುವುದು.

ಮಿಥುನ: ವೃತ್ತಿರಂಗದಲ್ಲಿ ಕ್ರಿಯಾತ್ಮಕ ಚಟುವಟಿಕೆಗಳಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.

ಕರ್ಕಟಕ: ನಿಮ್ಮ ಬಹುದಿನಗಳ ಕನಸು ನನಸು ಮಾಡಲು ಪ್ರಯತ್ನ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಮುನ್ನಡೆ ಕಂಡುಬರುವುದು. ಸರಕಾರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ. ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ. ಇಷ್ಟಭೋಜನ ಮಾಡುವ ಯೋಗ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ನಿಮ್ಮ ಕೆಲಸ ಕಾರ್ಯಗಳಿಗೆ ಕುಟುಂಬ ಸದಸ್ಯರ ಸಹಕಾರ ಕಂಡುಬರಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಹಣಕಾಸಿನ ವಿಚಾರದಲ್ಲಿ ಜಾಗರೂಕತೆ ಅಗತ್ಯ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ತುಲಾ: ಸರಕಾರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಸಾಮರ್ಥ್ಯಕ್ಕೆ ಮೀರಿದ ಕೆಲಸ ಮಾಡಲು ಹೋಗಿ ದೇಹಾಯಾಸವಾದೀತು. ಸಂಗಾತಿಯ ಬೇಡಿಕೆ ಪೂರೈಸಲು ಮುಂದಾಗಲಿದ್ದೀರಿ. ತಾಳ್ಮೆಯಿರಲಿ.

ವೃಶ್ಚಿಕ: ಏನೋ ಮಾಡಲು ಹೋಗಿ ಇನ್ನೇನೋ ಆಗುವ ಸಂದರ್ಭ ಎದುರಾದೀತು. ಮಾತಿನ ಮೇಲೆ ನಿಗಾ ಇರಲಿ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಗೆ ಪ್ರಯತ್ನಿಸುವಿರಿ. ಇಷ್ಟದೇವರ ಪ್ರಾರ್ಥನೆ ಮಾಡಿದರೆ ಉತ್ತಮ.

ಧನು: ಸರಕಾರಿ ಉದ್ಯೋಗಿಗಳಿಗೆ ಬಿಡುವಿನ ದಿನದ ಖುಷಿ ಸಿಗಲಿದೆ. ಗುರುಹಿರಿಯರ ಸಹಕಾರದಿಂದ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬರಲಿದೆ. ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ತಾಳ್ಮೆಯಿರಲಿ.

ಮಕರ: ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಸವಾಲುಗಳು ಎದುರಾದೀತು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಮುಖ್ಯ. ನಿಮ್ಮ ವಾಕ್ಚತುರತೆಯಿಂದ ಇತರರ ಗಮನ ಸೆಳೆಯಲಿದ್ದೀರಿ.

ಕುಂಭ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ನಿಮ್ಮ ಬಗ್ಗೆ ಇತರರಲ್ಲಿ  ಸದಭಿಪ್ರಾಯ ಮೂಡಲಿದೆ. ಬಂಧು ಮಿತ್ರರ ಪ್ರೀತಿಗೆ ಭಾಜನರಾಗಲಿದ್ದೀರಿ. ಮನೆಯಲ್ಲಿ ಶಾಂತಿ ಸಮಾಧಾನವಿರಲಿದೆ. ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಅನಗತ್ಯ ಚಿಂತೆ ಬೇಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣೇಶನ ದೇಹದ ಪ್ರತಿಯೊಂದು ಅವಯವಕ್ಕೂ ಅರ್ಥವಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗೌರಿ ಹಬ್ಬಕ್ಕೆ ಬಾಗಿನ ಕೊಡುವಾಗ ಈ ನಿಯಮ ಪಾಲಿಸಬೇಕು

ಲಕ್ಷ್ಮೀ ದೇವಿಯು ಸದಾ ಮಹಾವಿಷ್ಣುವಿನ ಪಾದದ ಬಳಿಯೇ ಇರುತ್ತಾಳೆ ಯಾಕೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments