ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 15 ಏಪ್ರಿಲ್ 2022 (08:05 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಬಯಸಿದ ರೀತಿಯಲ್ಲಿ ಕಾರ್ಯಗಳು ಸಾಗದೇ ಅಸಮಾಧಾನವಾದೀತು. ಕೌಟುಂಬಿಕವಾಗಿ ತಾಳ್ಮೆ, ಸಂಯಮ ಅಗತ್ಯ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ವೃಷಭ: ವಿದ್ಯಾರ್ಥಿಗಳು ಜ್ಞಾನಾರ್ಜನೆಗಾಗಿ ಪರವೂರಿಗೆ ಸಂಚರಿಸುವ ಸಂದರ್ಭ ಎದುರಾದೀತು. ಗೃಹಿಣಿಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಹಿರಿಯರ ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಿಥುನ: ವೈಯಕ್ತಿಕ ಕಷ್ಟಗಳ ಪರಿಹಾರಕ್ಕಾಗಿ ಆಪ್ತರ ಮೊರೆ ಹೋಗಲಿದ್ದೀರಿ. ಕೌಟುಂಬಿಕವಾಗಿ ಪರಸ್ಪರ ಸಹಕಾರ ನೆಮ್ಮದಿ ಕಂಡುಬರಲಿದೆ. ಆರ್ಥಿಕವಾಗಿ ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ವೃತ್ತಿರಂಗದಲ್ಲಿ ನಿಮ್ಮ ಸ್ಥಾನ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಿದ್ದೀರಿ. ಕ್ರಿಯಾತ್ಮಕ ಕೆಲಸಗಳಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ವ್ಯಾಪಾರಿಗಳು, ಸ್ವಯಂ ವೃತ್ತಿಯವರಿಗೆ ಲಾಭವಾಗಲಿದೆ. ಅನಗತ್ಯ ಚಿಂತೆ ಬೇಡ.

ಸಿಂಹ: ರಾಜಕೀಯ ರಂಗದಲ್ಲಿರುವರಿಗೆ ಅಪವಾದದ ಭೀತಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟಭೋಜನ ಮಾಡಲಿದ್ದೀರಿ. ನೆರೆಹೊರೆಯವರೊಂದಿಗೆ ತಾಳ್ಮೆ, ಸಂಯಮದಿಂದ ವರ್ತಿಸಿದರೆ ಉತ್ತಮ.

ಕನ್ಯಾ: ಕೌಟುಂಬಿಕವಾಗಿ ಸಂಬಂಧ ವೃದ್ಧಿಗೆ ಹೆಚ್ಚು ಒತ್ತು ನೀಡಲಿದ್ದೀರಿ. ವಿಶೇಷ ವ್ಯಕ್ತಿಗಳ ಭೇಟಿಯಾಗಲಿದ್ದೀರಿ. ಹೊಸದಾಗಿ ವೃತ್ತಿ ಜೀವನ ಆರಂಭಿಸಿದವರಿಗೆ ಉನ್ನತಿಯ ಯೋಗವಿದೆ. ಹಳೆಯ ಮಿತ್ರರನ್ನು ಭೇಟಿಯಾಗಲಿದ್ದೀರಿ.

ತುಲಾ: ಕೈ ಹಿಡಿದ ಕೆಲಸಗಳಲ್ಲಿ ಯಶಸ್ವಿಯಾಗಬೇಕಾದರೆ ಕುಲದೇವರ ಪ್ರಾರ್ಥನೆ ನಡೆಸಿ ಮುನ್ನಡೆಯಬೇಕು. ಅತಿಯಾದ ವಿಶ್ವಾಸವೂ ಕೆಲವೊಮ್ಮೆ ಮುಳುವಾಗುವ ಸಾಧ‍್ಯತೆಯಿದೆ. ಪ್ರೀತಿ ಪಾತ್ರರ ಭೇಟಿಯಾಗಲಿದ್ದು, ಸಂತೋಷವಾಗಲಿದೆ.

ವೃಶ್ಚಿಕ: ಬಹಳ ದಿನಗಳ ನಂತರ ಇಷ್ಟವ್ಯಕ್ತಿಗಳ ಭೇಟಿಯಾಗಲಿದ್ದು, ಮನಸ್ಸಿಗೆ ಸಂತೋಷವಾಗುವುದು. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ.

ಧನು: ಮಾತಿನ ಮೇಲೆ ಹಿಡಿತವಿಲ್ಲದೇ ಹೋದರೆ ಸಂಬಂಧ ಹಾಳಾದೀತು. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ಯೋಗವಿದೆ. ಆದರೆ ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ. ವ್ಯಾಪಾರಿಗಳಿಗೆ ನಷ್ಟದ ಭೀತಿ ಎದುರಾದೀತು.

ಮಕರ: ಉದ್ಯೋಗ, ವ್ಯವಾಹರದಲ್ಲಿ ಪ್ರಗತಿ ಕಂಡುಬರಲಿದೆ. ಕಟ್ಟಡ ಕಾಮಗಾರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.

ಕುಂಭ: ನಿಮ್ಮ ಸಂದರ್ಭೋಚಿತ ನಡೆಯಿಂದ ಅಪಮಾನ ತಪ್ಪಲಿದೆ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಮೀನ: ಭೂಮಿ, ಕಟ್ಟಡ ಇತ್ಯಾದಿ ಸಂಬಂಧಪಟ್ಟ ವ್ಯವಹಾರಗಳಲ್ಲಿ ಅಡೆತಡೆಗಳು ಕಂಡುಬಂದೀತು. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡದಂತೆ ಎಚ್ಚರಿಕೆ ವಹಿಸಿ. ಪಾಲುದಾರಿಕೆ ವ್ಯವಹಾರದಲ್ಲಿ ಎಚ್ಚರಿಕೆಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ನಿವಾರಣೆಗೆ ಈ ಕಿರು ಮಂತ್ರ ಸಾಕು

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಮುಂದಿನ ಸುದ್ದಿ
Show comments