Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 20 ಏಪ್ರಿಲ್ 2022 (08:22 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವಾಹನ, ಭೂಮಿ ಖರೀದಿ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಸರಕಾರೀ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಕೌಟುಂಬಿಕವಾಗಿ ತಾಳ್ಮೆ, ಸಮಾಧಾನದಿಂದ ಸಮಸ್ಯೆ ಬಗೆಹರಿಸಬೇಕಾಗುತ್ತದೆ.

ವೃಷಭ: ಜವಾಬ್ಧಾರಿಯುತವಾಗಿ ಕೆಲಸ ನಿಭಾಯಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾಗಲಿವೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಬಾರದಂತೆ ಎಚ್ಚರಿಕೆ ವಹಿಸಿ. ಕಾರ್ಯಕ್ಷೇತ್ರದಲ್ಲಿ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ಕೌಟುಂಬಿಕವಾಗಿ ಸಮೃದ್ಧಿ, ನೆಮ್ಮದಿ ಕಂಡುಬರುವುದು. ತಾಳ್ಮೆಯಿರಲಿ.

ಕರ್ಕಟಕ: ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನವಾಗಲಿದ್ದು, ಸಂತೋಷದ ವಾತಾವರಣವಿರಲಿದೆ. ದೈಹಿಕವಾಗಿ ಶ್ರಮದಾಯಕ ಕೆಲಸ ಮಾಡಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಉನ್ನತಿಯ ಯೋಗವಿದೆ.

ಸಿಂಹ: ಮನಸ್ಸಿನಲ್ಲಿ ಅಂದುಕೊಂಡಿದ್ದ ಕೆಲಸವನ್ನು ಪೂರ್ತಿ ಮಾಡುವ ಅವಕಾಶ ನಿಮ್ಮದಾಗಲಿದೆ. ಸಾಂಸಾರಿಕವಾಗಿ ಸುಖ ಸಮೃದ್ಧಿ ಕಂಡುಬರಲಿದೆ. ಆಸ್ತಿ  ವಿಚಾರದಲ್ಲಿ ಸಹೋದರರೊಂದಿಗೆ ಅನಗತ್ಯ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆಯಿರಲಿ.

ಕನ್ಯಾ: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಆಸ್ತಿ ವಿಚಾರದಲ್ಲಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ವಾಹನ ರಿಪೇರಿ ಕೆಲಸಗಳಿಗಾಗಿ ಖರ್ಚು ವೆಚ್ಚಗಳಾದೀತು. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ.

ತುಲಾ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಅಸಹಾಕಾರದಿಂದ ಮನಸ್ಸಿಗೆ ಬೇಸರವಾದೀತು. ಸಂಗಾತಿಯೊಂದಿಗೆ ಮನಸ್ಸಿನ ಮಾತು ಹಂಚಿಕೊಳ್ಳಲಿದ್ದೀರಿ. ಗೃಹ, ಕಟ್ಟಡ ನಿರ್ಮಾಣ ಕಾಮಗಾರಿಗಳಲ್ಲಿ ಪ್ರಗತಿ ಕಂಡುಬರಲಿದೆ.

ವೃಶ್ಚಿಕ: ಸಕಾಲದಲ್ಲಿ ಹಣಕಾಸಿನ ನೆರವು ಬರಲಿದ್ದು, ಸಂಭಾವ್ಯ ಸಮಸ್ಯೆಗಳಿಂದ ದೂರವಾಗಲಿದ್ದೀರಿ. ಕಾರ್ಯರಂಗದಲ್ಲಿ ಹಿತಶತ್ರುಗಳ ಪೀಡೆ ದೂರವಾಗಲಿದೆ. ವಿದ್ಯಾರ್ಥಿಗಳಿಗೆ ಅಧ್ಯಯನ ನಿಮಿತ್ತ ಪರವೂರಿಗೆ ಸಂಚರಿಸಬೇಕಾದೀತು.

ಧನು: ಹೊಸದಾಗಿ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದರೆ ಮುನ್ನಡೆ ಕಂಡುಬರಲಿದೆ. ಮಕ್ಕಳ ಸಂಸಾರದಲ್ಲಿ ಅನಗತ್ಯ ಮೂಗು ತೂರಿಸಲು ಹೋಗಬೇಡಿ. ಮಾತಿನ ಮೇಲೆ ನಿಗಾ ಇರಲಿ. ನೆರೆಹೊರೆಯವರಿಗೆ ಸಹಾಯ ಮಾಡಲಿದ್ದೀರಿ.

ಮಕರ: ನಿಮ್ಮ ಕೆಲವು ಅನಗತ್ಯ ಮಾತುಗಳು ಇತರರ ಮನಸ್ಸಿಗೆ ಬೇಸರವುಂಟು ಮಾಡೀತು. ದೀರ್ಘ ಪ್ರಯಾಣ ಮಾಡಬೇಕಾಗಿ ಬರುತ್ತದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿದರೆ ಉತ್ತಮ.

ಕುಂಭ: ಮಕ್ಕಳಿಗೆ ಸರಿಯಾದ ಸಲಹೆಗಳನ್ನು ಕೊಡಲಿದ್ದೀರಿ. ಆದರೆ ಸಂಗಾತಿಯ ಕೋಪಕ್ಕೆ ಗುರಿಯಾಗಬೇಕಾದ ಸಂದರ್ಭ ಎದುರಾದೀತು. ಆಸ್ತಿ, ವಾಹನಾದಿ ಖರೀದಿ ವಿಚಾರದಲ್ಲಿ ಪರಾಮರ್ಶಿಸುವುದು ಉತ್ತಮ. ತಾಳ್ಮೆಯಿರಲಿ.

ಮೀನ: ಉದ್ಯೋಗ ಸಂಬಂಧವಾದ ಸಮಸ್ಯೆಗಳನ್ನು ಕ್ರಿಯಾತ್ಮಕ ರೀತಿಯಲ್ಲಿ ಪರಿಹರಿಸಿಕೊಳ್ಳಲಿದ್ದೀರಿ. ದೇಹಾರೋಗ್ಯದ ವಿಚಾರದಲ್ಲಿ ನಿರ್ಲ್ಯಕ್ಷ ಮಾಡಬೇಡಿ. ನೆರೆಹೊರೆಯವರೊಂದಿಗೆ ಅನಗತ್ಯ ಸಂಘರ್ಷ ಬೇಡ. ದಿನದಂತ್ಯಕ್ಕೆ ನೆಮ್ಮದಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments