Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 23 ಏಪ್ರಿಲ್ 2022 (06:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹಿರಿಯರಿಂದ ಉತ್ತಮ ಸಲಹೆಗಳು ಕೇಳಿಬರಲಿದೆ. ಅನಗತ್ಯ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಬಹಳ ದಿನಗಳಿಂದ ಬಾಕಿಯಿದ್ದ ಹರಕೆ ತೀರಿಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ದುಂದು ವೆಚ್ಚ ಬೇಡ.

ವೃಷಭ: ಬೇರೆಯವರ ಜೀವನದಲ್ಲಿ ಮೂಗು ತೂರಿಸುವ ಪ್ರಯತ್ನ ಮಾಡಬೇಡಿ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಮಿಥುನ: ಸಾಮಾಜಿಕ ಚಟುವಟಿಕೆಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ದಾನ ಧರ್ಮಾದಿಗಳಲ್ಲಿ ಆಸಕ್ತಿ ಕಂಡುಬರಲಿದೆ. ಪರರ ಹಿತಕ್ಕಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಕಾರ್ಯನಿಮಿತ್ತ ಪ್ರಯಾಣ ಮಾಡಲಿದ್ದೀರಿ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಕಷ್ಟದ ಸಂದರ್ಭದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರ್ಥಿಕವಾಗಿ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಲಿದ್ದೀರಿ.

ಸಿಂಹ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶ ನಿಮಿತ್ತ ಪರವೂರಿಗೆ ಪ್ರಯಾಣ ಮಾಡಬೇಕಾಗಿ ಬಂದೀತು. ವ್ಯಾಪಾರಿಗಳಿಗೆ ಉನ್ನತಿಯ ಯೋಗವಿದೆ. ಆದರೆ ನಯವಂಚಕರಿಂದ ದೂರವಿರುವುದೇ ಉತ್ತಮ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ನಿಮ್ಮ ಮನಸ್ಸಿಗೆ ನೋವಾಗುವಂತಹ ಘಟನೆಗಳಾದೀತು. ಆತ್ಮೀಯರೊಂದಿಗೆ ಕಷ್ಟ ಹಂಚಿಕೊಳ್ಳಲಿದ್ದೀರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವಾಹನ ಖರೀದಿ ಯೋಜನೆ ಕೆಲವು ದಿನ ಮುಂದೂಡುವುದು ಉತ್ತಮ.

ತುಲಾ: ಹಿಂದೆ ಮಾಡಿದ ಒಳ್ಳೆಯ ಕೆಲಸಗಳ ಫಲ ಅನುಭವಿಸಲಿದ್ದೀರಿ. ವಿಶೇಷವಾದ ವ್ಯಕ್ತಿಗಳ ಭೇಟಿಯಾಗಲಿದ್ದು, ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ವಿಚಾರದಲ್ಲಿ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ.

ವೃಶ್ಚಿಕ: ವ್ಯಾಪಾರೀ ವರ್ಗದವರಿಗೆ ಉನ್ನತ ಸ್ಥಾನ ಮಾನದ ಯೋಗ. ಸಾಮಾಜಿಕವಾಗಿ ಕೀರ್ತಿ ಸಂಪಾದಿಸಲಿದ್ದೀರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ.  ಕ್ರಯ-ವಿಕ್ರಯ ವ್ಯವಹಾರಗಳಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು.

ಧನು: ಸತತ ಪ್ರಯತ್ನ ಪಡದೇ ನೀವು ಅಂದುಕೊಂಡಿದ್ದ ಕೆಲಸಗಳು ನೆರವೇರದು. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಸಂಶೋಧನಾ ವೃತ್ತಿಯಲ್ಲಿರುವವರಿಗೆ ಮುನ್ನಡೆ. ದಾನ ಧರ್ಮಾದಿಗಳಲ್ಲಿ ಆಸಕ್ತಿ ಕಂಡುಬರಲಿದೆ.

ಮಕರ: ಬಂಧು ಮಿತ್ರರ ಸಹಕಾರದಿಂದ ನಿಮ್ಮ ಕೆಲಸಗಳಿಗೆ ನೆರವಾಗಲಿದೆ. ಮನೆಯಲ್ಲಿ ಸಂತೋಷ ಕಂಡುಬರಲಿದೆ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಹಿಂಜರಿಕೆಯಿರಲಿ. ಅನಗತ್ಯ ಮಾತುಗಳಿಂದ ಸಂಬಂಧ ಹಾಳು ಮಾಡಿಕೊಳ್ಳಬೇಡಿ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಇದು ಸಕಾಲ. ತಾಳ್ಮೆಯಿರಲಿ.

ಮೀನ: ಸರಕಾರಿ ಉದ್ಯೋಗಿಗಳಿಗೆ ಬಿಡುವು ಸಿಗಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಶುಭ ಕಾರ್ಯಗಳನ್ನು ನೆರವೇರಿಸಲು ಸಿದ್ಧತೆ ನಡೆಸುವಿರಿ. ಸ್ವಯಂ ವೃತ್ತಿಯವರಿಗೆ ಅಭಿವೃದ್ಧಿ ಕಂಡುಬರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Subramanya Mantra: ಸುಬ್ರಹ್ಮಣ್ಯ ಅಷ್ಟೋತ್ತರ ಇಲ್ಲಿದೆ, ಇದನ್ನು ಯಾರು ಓದಬೇಕು ನೋಡಿ

Kaali Mantra: ಶತ್ರು ಭಯವಿದ್ದರೆ ಕಾಳಿಯ ಈ ಸ್ತೋತ್ರವನ್ನು ಓದಿ

ಶ್ರೀದತ್ತಾತ್ರೇಯ ಸ್ತೋತ್ರ ಕನ್ನಡದಲ್ಲಿ, ತಪ್ಪದೇ ಓದಿ

Ram Navami 2025: ಈ ವಿಶೇಷ ದಿನದಂದು ಹೀಗೇ ಮಾಡಿದ್ರೆ ಫಲ ನಿಶ್ಚಿತ

Shani Mantra: ಶನಿ ರಕ್ಷಾಸ್ತವಃ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಇಂದು ಓದಿ

ಮುಂದಿನ ಸುದ್ದಿ
Show comments