ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 25 ಏಪ್ರಿಲ್ 2022 (07:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲ ಸಿಗುವುದು. ಬಹಳ ದಿನಗಳಿಂದ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ದಿನದಂತ್ಯಕ್ಕೆ ನೆಮ್ಮದಿ.

ವೃಷಭ: ವೃತ್ತಿರಂಗದಲ್ಲಿ ಉನ್ನತ ಸ್ಥಾನಕ್ಕಾಗಿ ಅವಿರತ ಪ್ರಯತ್ನ ನಡೆಸಲಿದ್ದೀರಿ. ನಿಮಗೆ ಅಡ್ಡಗಾಲಾಗುತ್ತಿರುವವರಿಂದ ಮುಕ್ತಿ ಪಡೆಯಲಿದ್ದೀರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಉನ್ನತಿಯ ಯೋಗವಿದೆ. ಕಿರು ಸಂಚಾರ ಮಾಡುವಿರಿ.

ಮಿಥುನ: ಆಸ್ತಿ ವಿಚಾರದಲ್ಲಿ ನಿಮ್ಮ ಪರಿಶ್ರಮದಿಂದ ಮುನ್ನಡೆ ಸಿಗಲಿದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಸಾಮಾಜಿಕವಾಗಿ ಜನಮನ್ನಣೆಗೆ ಪಾತ್ರರಾಗಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಕೌಟುಂಬಿಕವಾಗಿ ಸುಖ ಸಮೃದ್ಧಿ ಕಂಡುಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯನೆರವೇರಿಸಲು ಸಿದ್ಧತೆ ನಡೆಸಸಲಿದ್ದೀರಿ. ಮಕ್ಕಳ ಬಹಳ ದಿನಗಳ ಬೇಡಿಕೆ ಪೂರೈಸಲು ಖರ್ಚು ವೆಚ್ಚಗಳಾದೀತು. ತಾಳ್ಮೆಯಿರಲಿ.

ಸಿಂಹ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ವ್ಯಾವಹಾರಿಕವಾಗಿ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ಅನಗತ್ಯ ಚಿಂತೆ ಬೇಡ.

ಕನ್ಯಾ: ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಉದ್ಯೋಗ ಸಂಬಂಧವಾದ ಚಿಂತೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳುವಿರಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ.

ತುಲಾ: ಭೂಮಿ, ಆಸ್ತಿ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬಂದೀತು. ನೆರೆಹೊರೆಯವರ ವಿಶ್ವಾಸ ಸಂಪಾದಿಸಲಿದ್ದೀರಿ. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ನಿಮ್ಮ ಬಹು ದಿನಗಳ ಕನಸು ನನಸು ಮಾಡಿಕೊಳ್ಳಲಿದ್ದೀರಿ. ಅನಿರೀಕ್ಷಿತವಾಗಿ ಧನಾಗಮನವಾಗಲಿದ್ದು, ಅಂದುಕೊಂಡ ಕೆಲಸ ನೆರವೇರಿಸಲಿದ್ದೀರಿ. ದೀರ್ಘ ಪ್ರಯಾಣದಿಂದ ದೇಹಾಯಾಸವಾಗುವ ಸಂಭವ.

ಧನು: ವಾಹನ ಖರೀದಿ ಮಾಡುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಬೇರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಇಷ್ಟ ಭೋಜನ ಮಾಡುವ ಯೋಗ ಕೂಡಿಬರಲಿದೆ.

ಮಕರ: ಕಟ್ಟಡ ಕಾಮಗಾರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಸ್ಥಾನಮಾನ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬಂದೀತು. ಯಂತ್ರೋಪಕರಣಗಳ ಕೆಲಸ ಮಾಡುವವರು ಎಚ್ಚರವಾಗಿರಬೇಕು. ಪಾಲುದಾರಿಕೆ ವ್ಯವಹಾರಗಳಲ್ಲಿ ವಂಚನೆಯಾಗದಂತೆ ಎಚ್ಚರಿಕೆ ವಹಿಸಬೇಕಾಗುತ್ತದೆ.

ಮೀನ: ಮನಸ್ಸಿನಲ್ಲಿರುವ ಯೋಜನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳುವುದು ಉತ್ತಮ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ‍್ಯತೆ. ಸಂತೋಷವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಪವರ್ ಫುಲ್ ಸರಸ್ವತಿ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಮಕರ ಸಂಕ್ರಾಂತಿ ನಾಳೆಯಾ, ನಾಡಿದ್ದಾ.. ಕನ್ ಫ್ಯೂಷನ್ ಬೇಡ ಇಲ್ಲಿ ನೋಡಿ

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಕಾಶೀ ವಿಶ್ವನಾಥನ ಭಕ್ತರಾಗಿದ್ದರೆ ಈ ಸ್ತೋತ್ರ ತಪ್ಪದೇ ಓದಿ

ಶನಿ ದೋಷ ನಿವಾರಣೆಗೆ ದಶರಥ ಕೃತ ಶನಿ ಮಂತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments