ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 26 ಏಪ್ರಿಲ್ 2022 (07:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವೃತ್ತಿರಂಗದಲ್ಲಿ ನಿಮ್ಮ ಸದಾಶಯಗಳು ನೆರವೇರಲಿದೆ. ಆರ್ಥಿಕವಾಗಿ ಹಣಕಾಸಿನ ಯೋಜನೆಗಳನ್ನು ಸರಿಯಾಗಿ ನಿಭಾಯಿಸಿ. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ವ್ಯಾಪಾರಿಗಳಿಗೆ ಮುನ್ನಡೆ ಕಂಡುಬರಲಿದೆ.

ವೃಷಭ: ಸಾಂಸಾರಿಕವಾಗಿ ನಿಮ್ಮ ಕಷ್ಟಗಳಿಗೆ ಆತ್ಮೀಯರ ಸಹಾಯ ಸಿಗಲಿದೆ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಗೆ ಪ್ರಯತ್ನಿಸಲಿದ್ದೀರಿ. ವೈಯಕ್ತಿಕ ಜೀವನದಲ್ಲಿ ಏಳಿಗೆ ಕಂಡುಬರುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಕಾರ್ಯಕ್ಷೇತ್ರದಲ್ಲಿ ನಿಮಗೆ ಅಡೆತಡೆಯಾಗಿದ್ದ ವಿಚಾರಗಳು ನಿವಾರಣೆಯಾಗಲಿವೆ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿಂದಿರಿ. ವ್ಯಾವಹಾರಿಕವಾಗಿ ಮುನ್ನಡೆ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.

ಕರ್ಕಟಕ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರುವುದು. ವ್ಯವಹಾರದಲ್ಲಿ ಅಡ್ಡಿ ಆತಂಕಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಚಿಂತೆ ಬೇಡ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಅಪವಾದದ ಭೀತಿ ಎದುರಾಗಲಿದೆ. ಇನ್ನೊಬ್ಬರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಸರಕಾರಿ ಉದ್ಯೋಗಿಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಹೊಸದಾಗಿ ಮದುವೆಯಾಗಿದ್ದರೆ ಹೊಂದಾಣಿಕೆ ಕಷ್ಟವೆನಿಸಬಹುದು. ತಾಳ್ಮೆ, ಸಂಯಮ ಅಗತ್ಯ. ಹಣಕಾಸಿನ ಹರಿವಿಗೆ ತೊಂದರೆಯಿರದು. ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ ಮಾಡಲಿದ್ದೀರಿ. ಕಾರ್ಯನಿಮಿತ್ತ ಸಂಚಾರ ಮಾಡಬೇಕಾದೀತು.

ತುಲಾ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಕೂಡಿಬರಲಿದೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ.

ವೃಶ್ಚಿಕ: ಬಹಳ ದಿನಗಳಿಂದ ನಿಮಗೆ ಕಾಡುತ್ತಿದ್ದ ಸಮಸ್ಯೆಗಳಿಗೆ ಅಂತ್ಯ ಹಾಡಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಧನು: ಮನಸ್ಸಿನಲ್ಲಿ ಅಂದುಕೊಂಡ ಕೆಲಸಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ವೈಯಕ್ತಿಕವಾಗಿ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ವಿದ್ಯಾರ್ಥಿಗಳಿಗೆ ಏಕಾಗ್ರತೆಗೆ ಭಂಗವಾದೀತು. ಬಹುಜನರ ಸಂಪರ್ಕದಿಂದ ಕಾರ್ಯಸಿದ್ಧಿಯಾಗಲಿದೆ.

ಮಕರ: ಮಾತಾಪಿತೃಗಳಿಂದ ನಿಮ್ಮ ಸಂತೋಷ ವೃದ್ಧಿಯಾಗಲಿದೆ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಯೋಜನೆ ಹೊಳೆಯಲಿದೆ. ಆರ್ಥಿಕವಾಗಿ ಹಣ ಗಳಿಕೆಗೆ ನಾನಾ ಮಾರ್ಗ ಕಂಡುಬರಲಿದೆ. ತಾಳ್ಮೆ, ಸಂಯಮ ಅಗತ್ಯ.

ಕುಂಭ: ದೂರದ ವ್ಯವಹಾರದಲ್ಲಿ ಅನ್ಯರ ಸಹಾಯದಿಂದ ವೃದ್ಧಿ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಕೌಟುಂಬಿಕವಾಗಿ ನಿಮ್ಮ ನಿರ್ಧಾರಗಳಿಗೆ ಮನೆಯವರ ವಿರೋಧ ಎದುರಿಸಬೇಕಾದೀತು.

ಮೀನ: ಕೆಲಸ ಕಾರ್ಯಗಳಲ್ಲಿ ಉತ್ಸಾಹದಿಂದ ತೊಡಗಿಸಿಕೊಳ್ಳಲಿದ್ದೀರಿ. ನಿಮ್ಮ ಮನಸ್ಸಿನ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರುವುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments