Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 27 ಏಪ್ರಿಲ್ 2022 (07:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಿದರೆ ಯಾವುದೇ ಸಮಸ್ಯೆಯಾಗದು. ಪ್ರೀತಿ ಪಾತ್ರರ ಭೇಟಿ ಮನಸ್ಸಿಗೆ ಸಂತೋಷ ಕೊಡಲಿದೆ. ಆದರೆ ಭವಿಷ್ಯದ ಬಗ್ಗೆ ಚಿಂತೆ ಕಾಡೀತು. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ವೃಷಭ: ಉದ್ಯೋಗದಲ್ಲಿ ಅಧಿಕ ಶ್ರಮದಿಂದಾಗಿ ದೇಹಾಯಾಸವಾದೀತು. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ಕಂಡುಬರಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಉನ್ನತಿಯ ಯೋಗವಿದೆ. ದಿನದಂತ್ಯಕ್ಕೆ ನೆಮ್ಮದಿಯಾಗುವುದು.

ಮಿಥುನ: ವೃತ್ತಿರಂಗದಲ್ಲಿ ನಿಮಗೆ ಅಡೆತಡೆಯಾಗಿದ್ದ ವಿಚಾರಗಳು ನಿವಾರಣೆಯಾಗಲಿವೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.

ಕರ್ಕಟಕ: ಸನ್ಮಿತ್ರರ ಸಹವಾಸದಿಂದ ನಿಮ್ಮ ಯೋಚನಾ ಲಹರಿ ಬದಲಾಗಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಸರಕಾರಿ ಕೆಲಸಗಳಲ್ಲಿ ಮುನ್ನಡೆ ಕಂಡುಬಂದೀತು. ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ನಿಮಗೆ ಅನುಕೂಲಕರ ವಾತಾವರಣವಿದ್ದರೂ ತೃಪ್ತಿ ಇರದು. ಮನಸ್ಸಿಗೆ ಋಣಾತ್ಮಕ ಚಿಂತೆಗಳು ಕಾಡದಂತೆ ಎಚ್ಚರಿಕೆ ವಹಿಸಿ. ನೆರೆಹೊರೆಯವರೊಂದಿಗೆ ಸಂಬಂಧ ಸುಧಾರಣೆಯಾಗಲಿದೆ.

ಕನ್ಯಾ: ವ್ಯಾಪಾರೀ ವರ್ಗದವರಿಗೆ ನಂಬಿದ್ದವರಿಂದಲೇ ವಂಚನೆಯಾಗುವ ಸಾ‍ಧ್ಯತೆ. ಸಂಗಾತಿಯ ಸಮಯೋಚಿತ ಸಲಹೆಗಳನ್ನು ಪಾಲಿಸುವುದು ಉತ್ತಮ. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ.

ತುಲಾ: ಹಣಕಾಸಿನ ಖರ್ಚು ವೆಚ್ಚಗಳ ವಿಚಾರದಲ್ಲಿ ಜಾಗರೂಕತೆ ಅಗತ್ಯ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಬೇಕಾದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ವೃಶ್ಚಿಕ: ಅಧಿಕ ಓಡಾಟ, ಕೆಲಸಗಳಿಂದಾದಿ ದೇಹಾಯಾಸವಾಗುವ ಸಾಧ್ಯತೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರಲಿದೆ. ಪ್ರೀತಿ ಪಾತ್ರರ ಸಾಂತ್ವನ ಮನಸ್ಸಿಗೆ ಖುಷಿ ನೀಡಲಿದೆ.

ಧನು: ನಿಮ್ಮ ಕೆಲಸ ಕಾರ್ಯಗಳಲ್ಲಿ ಬೇರೆಯವರ ಹಸ್ತಕ್ಷೇಪ ಬೇಸರವುಂಟು ಮಾಡೀತು. ಮಕ್ಕಳ ಬಗ್ಗೆ ಅನಗತ್ಯ ಚಿಂತೆ ಬೇಡ. ವ್ಯಾವಹಾರಿಕವಾಗಿ ಅಡೆತಡೆಯಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ದೇವರ ಪ್ರಾರ್ಥನೆ ಮಾಡಿ.

ಮಕರ: ನವದಂಪತಿಗಳಿಗೆ ಮಧು ಚಂದ್ರದ ಭಾಗ್ಯ ಒಲಿದು ಬರಲಿದೆ. ನೆರೆಹೊರೆಯವರ ಸಲಹೆಗಳನ್ನು ಅಲಕ್ಷಿಸುವುದು ಬೇಡ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಡಿಮೆಯಾಗಲಿದೆ. ಅನಗತ್ಯ ಚಿಂತೆ ಬೇಡ.

ಕುಂಭ: ಮಾತಿನ ಮೂಲಕವೇ ಇತರರನ್ನು ಮರಳು ಮಾಡಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳು ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದೆ. ವೈದ್ಯಕೀಯ ಕ್ಷೇತ್ರದಲ್ಲಿರುವವರಿಗೆ ಕೆಲಸ ಹೆಚ್ಚಾಗಲಿದೆ.

ಮೀನ: ಅನಿವಾರ್ಯವಾಗಿ ದೂರ ಪ್ರಯಾಣ ರದ್ದು ಮಾಡಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ. ಹಿರಿಯರ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments