ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 29 ಏಪ್ರಿಲ್ 2022 (08:25 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಮಾಡಬೇಕಾದ ಕೆಲಸ ಪೂರ್ತಿಯಾಗದೇ ಮನಸ್ಸಿಗೆ ನೆಮ್ಮದಿಯಿರದು. ಆರ್ಥಿಕವಾಗಿ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಪ್ರೀತಿ ಪಾತ್ರರನ್ನು ಭೇಟಿಯಾಗಲಿದ್ದೀರಿ.

ವೃಷಭ: ನೀವು ಇಷ್ಟಪಡುವ ವ್ಯಕ್ತಿಗಳು ಜೊತೆಗೇ ಇದ್ದರೂ ಋಣಾತ್ಮಕ ಚಿಂತೆಗಳು ಘಾಸಿಗೊಳಿಸಲಿವೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗಲಿದೆ.

ಮಿಥುನ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ನೆರವು ಸಿಗಲಿದೆ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗವಿದೆ. ಬೇರೆಯವರ ಜೀವನದಲ್ಲಿ ಮೂಗು ತೂರಿಸುವ ಅನಗತ್ಯ ಪ್ರಯತ್ನ ಮಾಡಬೇಡಿ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಕರ್ಕಟಕ: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಪಶ್ಚಾತ್ತಾಪ ಪಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಸ್ವಯಂ ವೃತ್ತಿಯವರಿಗೆ ಉನ್ನತಿಯ ಯೋಗವಿದೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಸಿಂಹ: ಸಹೋದ್ಯೋಗಿಗಳ ಕಷ್ಟಕ್ಕೆ ನೆರವಾಗಲಿದ್ದೀರಿ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಉಂಟಾಗಲಿದೆ.  ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ವಿಶೇಷವಾದ ವ್ಯಕ್ತಿಗಳ ಭೇಟಿಯಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಮನಸ್ಸಿನಲ್ಲಿ ವಿಚಾರಗಳನ್ನು ಇತರರೊಂದಿಗೆ ಹಂಚಿಕೊಳ್ಳಲಿದ್ದೀರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದುಂದು ವೆಚ್ಚಕ್ಕೆ ಕಡಿವಾಣವಿರಲಿ.

ತುಲಾ: ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಕೌಟುಂಬಿಕವಾಗಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದು ಉತ್ತಮ. ಮಾತಿನ ಮೇಲೆ ನಿಗಾ ಇರಲಿ. ಕೋರ್ಟು ಕಚೇರಿ ವ್ಯವಹಾರಗಳಿಗೆ ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ಅಂದುಕೊಂಡ ಕೆಲಸ ಪೂರ್ತಿ ಮಾಡಲು ಪ್ರಯತ್ನ ಮಾಡಲಿದ್ದೀರಿ. ನಿಮ್ಮ ವೈಯಕ್ತಿಕ ಕಷ್ಟಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಬೇರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಕಟ್ಟಡ ಕಾಮಗಾರಿ ಕೆಲಸಕ್ಕೆ ವಿಘ್ನಗಳು ಬಂದೀತು. ಕುಲದೇವರ ಪ್ರಾರ್ಥಿಸಿದರೆ ಉತ್ತಮ.

ಮಕರ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಕಾಲ. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗವಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕುಂಭ: ಉದ್ಯೋಗ ಸ್ಥಳದಲ್ಲಿ ಪರರಿಂದ ಸಹಾಯ ನಿರೀಕ್ಷಿಸಬಹುದು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳು ನಿವಾರಣೆಯಾಗಲಿವೆ. ಮಾನಸಿಕವಾಗಿ ನೆಮ್ಮದಿಯಿರುವುದು.

ಮೀನ: ಆಸ್ತಿ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬಂದೀತು. ದೂರದ ಮಿತ್ರರನ್ನು ಭೇಟಿಯಾಗುವ ಯೋಗ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆಯೇ ಹೆಚ್ಚು. ಪಾಲುದಾರಿಕೆ ವ್ಯವಹಾರದಲ್ಲಿ ಲಾಭವಾಗಲಿದೆ. ಅನಗತ್ಯ ಚಿಂತೆ ಬೇಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಶ್ರೀ ವೆಂಕಟೇಶ್ವರ ಪ್ರಪತ್ತಿ ಸ್ತೋತ್ರ

ಸರಸ್ವತಿ ಅಷ್ಟೋತ್ತರ ಶತನಾಮಾವಳಿ

ಮುಂದಿನ ಸುದ್ದಿ
Show comments