Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 7 ಮೇ 2022 (06:20 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಬಿಡುವಿನ ದಿನದ ಖುಷಿ ನಿಮ್ಮದಾಗಲಿದೆ. ಇಷ್ಟಮಿತ್ರರೊಂದಿಗೆ ಪ್ರವಾಸ ಮಾಡುವ ಯೋಗ ನಿಮ್ಮದಾಗಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಆರ್ಥಿಕವಾಗಿ ಹಣಕಾಸಿನ ಯೋಜನೆಗಳನ್ನು ಹಾಕಿಕಕೊಳ್ಳಲಿದ್ದೀರಿ.

ವೃಷಭ: ವ್ಯವಹಾರದಲ್ಲಿ ಲಾಭ ಕಂಡುಬಂದರೂ ಹಿತಶತ್ರುಗಳ ಕಾಟ ಕಂಡುಬಂದೀತು. ಪ್ರೇಮಿಗಳಿಗೆ ಶೀಘ್ರದಲ್ಲೇ ವಿವಾಹ ಯೋಗ ಕಂಡುಬರಲಿದೆ. ನೆರೆಹೊರೆಯವರಿಗೆ ಸಹಾಯ ಮಾಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಉದ್ಯೋಗ, ವ್ಯವಹಾರ ನಿಮಿತ್ತ ಅಧಿಕ ಓಡಾಟ ನಡೆಸಬೇಕಾಗಿ ಬಂದೀತು. ನಿಮ್ಮ ಮನಸ್ಸಿನಲ್ಲಿರುವ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಕ್ರಿಯಾತ್ಮಕ ಕೆಲಸಗಳಿಂದ ಗಮನ ಸೆಳೆಯಲಿದ್ದೀರಿ.

ಕರ್ಕಟಕ: ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿಯಾದೀತು. ಸರಕಾರಿ ಉದ್ಯೋಗಿಗಳಿಗೆ ಬಿಡುವಿನ ದಿನದ ಖುಷಿ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಅಪವಾದದ ಭೀತಿ ಎದುರಾಗಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮುನ್ನಡೆಯಿರಲಿದೆ.

ಕನ್ಯಾ: ವ್ಯಾಪಾರೀ ವರ್ಗದವರಿಗೆ ಅಡೆತಡೆಗಳಿದ್ದರೂ ಅಂತಿಮ ಜಯ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ.

ತುಲಾ: ನಿಮ್ಮ ಮಾತಿನಿಂದಲೇ ಇತರರ ಗಮನ ಸೆಳೆಯಲಿದ್ದೀರಿ. ಕಾರ್ಯರಂಗದಲ್ಲಿ ನಿಮ್ಮ ಮುನ್ನಡೆಯನ್ನು ಯಾರೂ ತಡೆಯಲು ಸಾಧ‍್ಯವಾಗದು. ಭೂಮಿ, ವಾಹನ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ.

ವೃಶ್ಚಿಕ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ಪಡೆಯುವ ಯೋಗ. ನಿಮ್ಮ ಚತರುತೆಯಿಂದ ಸಂಭಾವ್ಯ ಸಮಸ್ಯೆಗಳು ತಪ್ಪೀತು. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ದಿನದಂತ್ಯಕ್ಕೆ ಶುಭವಾಗುವುದು.

ಧನು: ವಿದ್ಯಾರ್ಥಿಗಳಿಗೆ ಪ್ರತಿಭಾ ಪ್ರದರ್ಶನಕ್ಕೆ ಉತ್ತಮ ವೇದಿಕೆ ಸಿಕ್ಕೀತು. ನಿರುದ್ಯೋಗಿಗಳು ಕೈಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳುವುದು ಉತ್ತಮ. ಸ್ವಯಂ ವ್ಯಾಪಾರಿಗಳಿಗೆ  ಆರ್ಥಿಕವಾಗಿ ಲಾಭವಾಗಲಿದೆ.

ಮಕರ: ಇಷ್ಟಾರ್ಥ ಸಿದ್ಧಿಗಾಗಿ ಕುಲದೇವರ ಪ್ರಾರ್ಥನೆ ನಡೆಸಲಿದ್ಧೀರಿ. ಬಹುದಿನಗಳಿಂದ ಬಾಕಿಯಿದ್ದ ಕೆಲಸಗಳನ್ನು ಪೂರ್ತಿ ಮಾಡಲು ಪ್ರಯತ್ನಿಸಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದರೆ ಸುಂದರ ಕ್ಷಣ ಕಳೆಯುವ ಯೋಗ.

ಕುಂಭ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಸರಕಾರಿ ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ. ಆರ್ಥಿಕವಾಗಿ ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ದೇವತಾ ಪ್ರಾರ್ಥನೆ ಮರೆಯದಿರಿ.

ಮೀನ: ನಿಮ್ಮ ಬಗ್ಗೆ ಇನ್ನೊಬ್ಬರಲ್ಲಿ ಸದಭಿಪ್ರಾಯ ಮೂಡಿಸಲು ಪ್ರಯತ್ನ ನಡೆಸುವಿರಿ. ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚಾಗಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹನುಮಾನ್ ಚಾಲೀಸಾ ಓದುವುದರ ಲಾಭಗಳು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ ಈ ಒಂದು ವಸ್ತು ತಂದಿಟ್ಟರೆ ಲಕ್ಷ್ಮಿ ನಿಮ್ಮ ಮನೆಗೆ ಬರುತ್ತಾಳೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರು ಗ್ರಹ ದೋಷ ನಿವಾರಣೆಗೆ ಏನು ಮಾಡಬೇಕು

ಮುಂದಿನ ಸುದ್ದಿ
Show comments