ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 14 ಮೇ 2022 (08:22 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗವಿದೆ. ಹಾಗಿದ್ದರೂ ಮಾನಸಿಕವಾಗಿ ಕೆಲವೊಂದು ಋಣಾತ್ಮಕ ಚಿಂತನೆಗಳು ನಿಮ್ಮನ್ನು ಕುಗ್ಗಿಸೀತು. ಆಪ್ತರೊಂದಿಗೆ ಮನಸ್ಸಿನ ಮಾತು ಹಂಚಿಕೊಳ್ಳಲಿದ್ದೀರಿ. ದೇವರ ಪ್ರಾರ್ಥನೆ ಮಾಡಿ.

ವೃಷಭ: ಒಳ್ಳೆಯ ಕೆಲಸಕ್ಕೆ ಮೊದಲು ಹಲವು ಅಡೆತಡೆಗಳು ತೋರಿಬಂದೀತು. ಅದೆಲ್ಲವನ್ನೂ ಮೀರಿ ನಡೆಯಬೇಕಾದ ಅನಿವಾರ್ಯತೆಯಿದೆ. ಯೋಗ್ಯ ವಯಸ್ಕರು ಸೂಕ್ತ ಸಂಬಂಧಕ್ಕಾಗಿ ಕೆಲವು ದಿನ ಕಾಯುವುದು ಉತ್ತಮ.

ಮಿಥುನ: ಉದ್ಯೋಗ ಬದಲಾವಣೆಗೆ ಪ್ರಯತ್ನಿಸಲಿದ್ದು, ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಲಿದೆ. ಇಷ್ಟ ಭೋಜನ ಮಾಡುವ ಯೋಗವಿದೆ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ. ಕಿರು ಸಂಚಾರ ಮಾಡುವಿರಿ.

ಕರ್ಕಟಕ: ವಿಶೇಷವಾದ ವ್ಯಕ್ತಿಗಳು ನಿಮ್ಮ ಜೀವನಕ್ಕೆ ಹೊಸ ತಿರುವು ನೀಡಲಿದ್ದಾರೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಕೊಂಚ ಹಿನ್ನಡೆಯಾದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ವೃತ್ತಿರಂಗದಲ್ಲಿ ಹೆಚ್ಚಿನ ಅನುಕೂಲಕ್ಕಾಗಿ ಕಠಿಣ ಪ್ರಯತ್ನ ನಡೆಸಬೇಕಾಗುತ್ತದೆ. ವ್ಯವಹಾರದಲ್ಲಿ ಮುನ್ನಡೆಯಿದ್ದರೂ ಹಿತಶತ್ರುಗಳ ಕಾಟ ಕಂಡುಬಂದೀತು. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕೀತು. ಚಿಂತೆ ಬೇಡ.

ಕನ್ಯಾ: ಕೌಟುಂಬಿಕವಾಗಿ ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಸಂಗಾತಿಯೊಂದಿಗೆ ಪರಾಮರ್ಶಿಸಿ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಅನಿವಾರ್ಯತೆ ಇತರರ ಗಮನಕ್ಕೆ ಬರಲಿದೆ. ಕೈಗೊಂಡ ಕೆಲಸಗಳಲ್ಲಿ ಜಯ ಸಿಗಲಿದೆ.

ತುಲಾ: ಕಾರ್ಯಸಿದ್ಧಿಗಾಗಿ ಕುಲದೇವರ ಪ್ರಾರ್ಥನೆ ನಡೆಸಿ ದಿನದಾರಂಭ ಮಾಡಿ. ಸರಕಾರಿ ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ಹೊಸ ವ್ಯಾಪಾರ ಆರಂಭಿಸಲು ಸಕಾಲ.

ವೃಶ್ಚಿಕ: ಪಾಲು ಬಂಡವಾಳ ಹೂಡಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಮನಸ್ಸಿಗೆ ಸಂತೋಷವಾಗಲಿದೆ.

ಧನು: ಕೆಲಸ ಕಾರ್ಯಗಳಲ್ಲಿ ಆರಂಭದಲ್ಲಿ ಉತ್ಸಾಹದಿಂದ ತೊಡಗಿಸಿಕೊಂಡರೂ ಬಳಿಕ ಚಿಂತೆಗಳು ಕಾಡೀತು. ಅನಗತ್ಯವಾಗಿ ಮಾತನಾಡಲು ಹೋಗಿ ಬೇರೆಯವರ ಮನಸ್ಸಿಗೆ ನೋಯಿಸಬೇಡಿ. ತಾಳ್ಮೆಯಿರಲಿ.

ಮಕರ: ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಸವಾಲುಗಳು ಎದುರಾದೀತು. ಕ್ರಿಯಾತ್ಮಕವಾಗಿ ಯೋಚಿಸಬೇಕಾಗುತ್ತದೆ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗವಿದೆ.

ಕುಂಭ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ಬಂಧು ಮಿತ್ರರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.

ಮೀನ: ಬಹಳ ದಿನಗಳಿಂದ ಅಂದುಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲು ಯತ್ನಿಸಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಮಹಿಳೆಯರಿಗೆ ಉನ್ನತಿಯ ಯೋಗ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ನಿವಾರಣೆಗೆ ಈ ಕಿರು ಮಂತ್ರ ಸಾಕು

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಮುಂದಿನ ಸುದ್ದಿ
Show comments