ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 15 ಮೇ 2022 (07:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಬಹುದಿನಗಳ ಕನಸು ಈಡೇರಲಿದೆ. ಇಷ್ಟ ಭೋಜನ ಮಾಡುವ ಯೋಗ ಕೂಡಿಬರಲಿದೆ. ಪಾಲುದಾರಿಕೆ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡಲಿದ್ದೀರಿ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಷಭ: ಉತ್ತಮ ಧನಾರ್ಜನೆಗೆ ನಾನಾ ಅವಕಾಶಗಳು ಕೂಡಿಬರಲಿದೆ. ಸಾಂಸಾರಿಕವಾಗಿ ಸುಂದರ ಕ್ಷಣ ಕಳೆಯುವ ಯೋಗ ನಿಮ್ಮದಾಗಲಿದೆ. ಪ್ರೀತಿ ಪಾತ್ರರ ಕಷ್ಟಕ್ಕೆ ನೆರವಾಗಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಅಭಿವೃದ್ಧಿ ಇರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮಾತಿನ ಮೇಲೆ ಹಿಡಿತವಿರಲಿ. ಕಟ್ಟಡ ಕೆಲಸಗಳಿಗಾಗಿ ಮಾಡಿಕೊಂಡಿದ್ದ ಸಾಲ ಪಾವತಿಯಾಗಲಿದೆ.

ಕರ್ಕಟಕ: ಮನೆಯಲ್ಲಿ ಅನಿರೀಕ್ಷಿತ ನೆಂಟರಿಷ್ಟರ ಆಗಮನವಾಗಲಿದ್ದು, ಸಂತೋಷದ ವಾತಾವರಣವಿರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ಮಹಿಳೆಯರಿಗೆ ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆಯಾದೀತು. ಎಚ್ಚರ.

ಸಿಂಹ: ಯಾವುದೇ ಕೆಲಸಕ್ಕೆ ಕೈ ಹಾಕುವ ಮೊದಲು ಆಪ್ತರೊಂದಿಗೆ ಚರ್ಚಿಸಿ ಮುನ್ನಡೆಯುವುದು ಉತ್ತಮ. ಧನಾರ್ಜನೆಗೆ ನಾನಾ ದಾರಿಗಳು ಕಂಡುಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಕನ್ಯಾ: ಕಾರ್ಯರಂಗದಲ್ಲಿ ನಿಮ್ಮ ಸಫಲತೆಗೆ ಸಹೋದ್ಯೋಗಿಗಳ ಸಹಕಾರ ಕಂಡುಬರಲಿದೆ. ಕೌಟುಂಬಿಕವಾಗಿ ಪರಸ್ಪರ ಸಹಕಾರವಿರಲಿದ್ದು, ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಆರ್ಥಿಕವಾಗಿ ಏಳಿಗೆ ಕಾಣಲು ಸತತ ಪರಿಶ್ರಮಪಡಬೇಕಾದೀತು. ವಿದ್ಯಾರ್ಥಿಗಳಿಗೆ ಓದಿಗೆ ಅಡಚಣೆಗಳು ಕಂಡುಬಂದೀತು. ಕುಲದೇವರ ಪ್ರಾರ್ಥನೆ ನಡೆಸುವುದು ಉತ್ತಮ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಲಿದ್ದೀರಿ.

ವೃಶ್ಚಿಕ: ಆತುರದಲ್ಲಿ ನಿರ್ಧಾರ ಕೈಗೊಳ್ಳಲು ಹೋದರೆ ತೊಂದರೆ ಎದುರಾದೀತು. ಹೊಸದಾಗಿ ಉದ್ಯೋಗ ಆರಂಭಿಸಿದ್ದರೆ ಸವಾಲುಗಳಿರಲಿವೆ. ಸಂಗಾತಿಯ ಸಲಹೆಗಳು ಉಪಯುಕ್ತವೆನಿಸಲಿದೆ. ಹಿರಿಯರೊಂದಿಗೆ ಸಂಘರ್ಷ ಬೇಡ.

ಧನು: ವೈಚಾರಿಕವಾಗಿ ಭಿನ್ನ ಅಭಿಪ್ರಾಯಗಳಿದ್ದರೂ ಅನಿವಾರ್ಯವಾಗಿ ಅಂತಹ ಜನರೊಂದಿಗೆ ಕೈಜೋಡಿಸುವ ಸಂದರ್ಭ ಎದುರಾದೀತು. ಮಕ್ಕಳ ಜೀವನದ ಬಗ್ಗೆ ಅನಗತ್ಯ ಚಿಂತೆ ಬೇಡ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ.

ಮಕರ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚವಾಗಲಿದೆ. ಅನ್ಯರ ಚಾಡಿ ಮಾತುಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಆಸ್ತಿ ಖರೀದಿ-ವಿಕ್ರಯ ವಿಚಾರಗಳಲ್ಲಿ ಮುನ್ನಡೆ ಕಂಡುಬಂದೀತು.

ಕುಂಭ: ಮಹಿಳೆಯರಿಗೆ ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಲಿದ್ದೀರಿ. ವಾಹನ ಆಸ್ತಿ-ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನದ ಯೋಗ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ತಾಳ್ಮೆಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸರಸ್ವತಿ ಕವಚ ಸ್ತೋತ್ರ ಕನ್ನಡದಲ್ಲಿ ಮತ್ತು ಓದುವುದರ ಫಲವೇನು

ದೇವಿ ಮಹಾತ್ಮ್ಯಂ ಮಂಗಳಂ ನೀರಾಜಣಂ ಸ್ತೋತ್ರ

ತಪ್ಪುಗಳಿಗೆ ಕ್ಷಮಾಪಣೆ ಸಿಗಬೇಕೆಂದರೆ ಶಿವನ ಈ ಸ್ತೋತ್ರ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಪಠಣದ ಅದ್ಭುತ ಪ್ರಯೋಜನಗಳು

ಮಹಾಲಕ್ಷ್ಮಿ ಅಷ್ಟಕಂ ಮತ್ತು ಅದರ ಸರಳ ಅರ್ಥ ಇಲ್ಲಿದೆ

ಮುಂದಿನ ಸುದ್ದಿ
Show comments