ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 25 ಮೇ 2022 (08:05 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟ ಭೀತಿ ಕಾಡಲಿದೆ. ಆರ್ಥಿಕವಾಗಿ ಭವಿಷ್ಯದ ಬಗ್ಗೆ ಯೋಜನೆ ರೂಪಿಸಬೇಕಾಗುತ್ತದೆ. ಬಹುದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ.

ವೃಷಭ: ನಿಮ್ಮ ವಿವೇಚನಾ ಶಕ್ತಿಯಿಂದ ಕೆಟ್ಟ ಸಂಗದಿಂದ ದೂರವಿರಲಿದ್ದೀರಿ. ವ್ಯವಹಾರದಲ್ಲಿ ಅಡೆತಡೆಗಳಿದ್ದರೂ ನಿಮ್ಮ ಮುನ್ನಡೆಯನ್ನು ಯಾರೂ ತಡೆಯಲಾಗದು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ತಾಳ್ಮೆ, ಸಂಯಮವಿರಲಿ.

ಮಿಥುನ: ಇಂದು ನೀವು ಕೈಗೊಳ್ಳುವ ನಿರ್ಧಾರಗಳು ನಿಮ್ಮ ಮುಂದಿನ ಭವಿಷ್ಯಕ್ಕೆ ಪೂರಕವಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರಿ ವರ್ಗದವರಿಗೆ ಹಿತ ಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ.

ಕರ್ಕಟಕ: ಕಾರ್ಯರಂಗದಲ್ಲಿ ನಿಮ್ಮ ಏಳಿಗೆ ಹಿರಿಯರ ಸಂತೋಷಕ್ಕೆ ಕಾರಣವಾಗಲಿದೆ. ದಾಯಾದಿ ಕಲಹಗಳಿಗೆ ಪರಿಹಾರ ಸಿಗಲಿದೆ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ವಾಹನ ಖರೀದಿಗೆ ಮುಂದಾಗಲಿದ್ದೀರಿ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಗೆ ದಾರಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ಪಾಲಿಗೆ ಬಂದಿದ್ದನ್ನು ಪಂಚಾಮೃತ ಎಂದು ಸ್ವೀಕರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಬಯಸಿದ ವಿಷಯ ಸಿಗಲು ಪರಿಶ್ರಮ ಪಡಬೇಕಾಗುತ್ತದೆ.

ಕನ್ಯಾ: ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸದ ವೈಖರಿ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗಲಿದೆ.

ತುಲಾ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ನಿಮ್ಮ ಕೆಲಸ ಕಾರ್ಯಗಳು ಸಂಗಾತಿಗೆ ಅಸಮಾಧಾನ ತಂದೀತು. ತಾಳ್ಮೆಯಿಂದ ನಿಭಾಯಿಸಬೇಕು. ದೇವತಾ ಪ್ರಾರ್ಥನೆ ಮರೆಯದಿರಿ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಕಿರಿ ಕಿರಿಯಿಂದಾಗಿ ಬದಲಾವಣೆಗೆ ಮನಸ್ಸು ಮಾಡಲಿದ್ದೀರಿ. ನಿಮ್ಮ ಕೆಲಸ ಕಾರ್ಯಗಳಿಗೆ ಸಂಗಾತಿಯ ಸಹಕಾರ ಸಿಗುವುದು. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು.

ಧನು: ಇಂದಿನ ನೀವು ಕೈಗೊಳ್ಳುವ ಕೆಲಸಗಳಲ್ಲಿ ನೀವೇ ರಾಜನಂತೆ ಮೆರೆಯಲಿದ್ದೀರಿ. ಕೌಟುಂಬಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಮಾತಿನ ಮೇಲೆ ಹಿಡಿತವಿರಲಿ.

ಮಕರ: ಅತಿಯಾಗಿ ಇನ್ನೊಬ್ಬರ ಮೇಲೆ ಅವಲಂಬನೆ ದುಃಖಕ್ಕೆ ಕಾರಣವಾದೀತು. ಸಹೋದ್ಯೋಗಿಗಳ ಕಷ್ಟಕ್ಕೆ ನೆರವಾಗಲಿದ್ದೀರಿ. ವಿವಾಹಾಕಾಂಕ್ಷಿಗಳು ದೇವರ ಮೊರೆ ಹೋಗಲಿದ್ದಾರೆ. ಕಿರು ಸಂಚಾರ ಮಾಡುವಿರಿ.

ಕುಂಭ: ವೈಯಕ್ತಿಕವಾಗಿ ಕೆಲವು ನಷ್ಟಗಳಾದರೂ ಕುಟುಂಬದ ಹಿತದೃಷ್ಟಿಯಿಂದ ಒಳಿತಾಗಲಿದೆ. ಸರಕಾರಿ ಉದ್ಯೋಗಿಗಳಿಗೆ ಕೊಂಚ ಆರಾಮದಾಯಕ ದಿನಗಳು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಚಿಂತೆ ಬೇಡ.

ಮೀನ: ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಳ್ಳುವ ನಿಮ್ಮ ಸ್ವಭಾವ ಎಲ್ಲರಿಗೂ ಇಷ್ಟವಾಗಲಿದೆ. ಸನ್ಮಿತ್ರರ ಸಹಕಾರ ನಿಮ್ಮ ಉತ್ಸಾಹ ಇಮ್ಮಡಿಗೊಳಿಸಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ಸಂತೋಷವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments