Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 26 ಮೇ 2022 (08:05 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಇಲ್ಲಸಲ್ಲದ ವಿಚಾರಕ್ಕೆ ಆತ್ಮೀಯರ ಜೊತೆಗೆ ಮನಸ್ತಾಪ ಮಾಡಿಕೊಳ್ಳಬೇಡಿ. ಮನೆಗೆ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಇಷ್ಟ ಮಿತ್ರರ ಕಷ್ಟಗಳಿಗೆ ನೆರವಾಗಲಿದ್ದೀರಿ. ಮನೆ ರಿಪೇರಿ ಕೆಲಸಗಳಿಗೆ ಖರ್ಚಾಗಲಿದೆ.

ವೃಷಭ: ನಿಮ್ಮ ಮಾತುಗಾರಿಕೆಯಿಂದ ಇತರರನ್ನು ಮೋಡಿ ಮಾಡಲಿದ್ದೀರಿ. ಸರಕಾರಿ ಕೆಲಸಗಳಲ್ಲಿ ಜಯ ಸಿಗಲಿದೆ. ಆರ್ಥಿಕವಾಗಿ ಲಾಭವಿದ್ದಷ್ಟೇ ಖರ್ಚೂ ಇರಲಿದೆ. ಎಲ್ಲವನ್ನೂ ಸಮ ಮನಸ್ಸಿನಿಂದ ಸ್ವೀಕರಿಸುವುದು ಉತ್ತಮ.

ಮಿಥುನ: ಸಣ್ಣ ಪುಟ್ಟ  ವಿಚಾರಗಳಿಗೆ ಸಂಗಾತಿ ಜೊತೆ ಸಿಡುಕಿ ಮನಸ್ತಾಪ ಮಾಡಿಕೊಳ್ಳಬೇಡಿ. ಮಾತಿನ ಮೇಲೆ ನಿಗಾ ಇರಲಿ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಅಧಿಕವಾಗಲಿದೆ. ಕಾರ್ಯನಿಮಿತ್ತ ಪರವೂರಿಗೆ ಸಂಚಾರ ಮಾಡಬೇಕಾದೀತು.

ಕರ್ಕಟಕ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ತಾಳ್ಮೆಯಿರಲಿ.

ಸಿಂಹ: ಹಿಂದೆ ಆಗಿದ್ದ ಮನಸ್ತಾಪಗಳನ್ನು ಮರೆತು ಆತ್ಮೀಯರೊಂದಿಗೆ ರಾಜೀ ಸಂಧಾನ ಮಾಡಲಿದ್ದೀರಿ. ಗುರುಹಿರಿಯರ ಪ್ರೋತ್ಸಾಹದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆಬರಲಿದೆ.

ಕನ್ಯಾ: ನೀವು ಬಹಳ ದಿನಗಳಿಂದ ನಿರೀಕ್ಷಿಸಿದ್ದ ಕೆಲಸಗಳು ಸುಗಮವಾಗಿ ನೆರವೇರಲಿದೆ. ದೂರ ಪ್ರಯಾಣದಿಂದ ದೇಹಾಯಾಸವಾದೀತು. ಮಕ್ಕಳಿಂದ ಸಂತೋಷ ಸಿಗಲಿದೆ. ಹಿರಿಯರ ಸಲಹೆ ಉಪಯೋಗಕ್ಕೆ ಬರಲಿದೆ.

ತುಲಾ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಅನಗತ್ಯ ಚಿಂತೆ ಬಿಡಿ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ವಂಚನೆಗೊಳಗಾಗುವ ಭೀತಿಯಿದೆ. ಎಚ್ಚರಿಕೆಯಿಂದಿರುವುದು ಮುಖ್ಯ.

ವೃಶ್ಚಿಕ: ಹೊಸದಾದ ಜಾಗ, ವ್ಯಕ್ತಿಗಳ ಭೇಟಿ ನಿಮ್ಮ ಉತ್ಸಾಹ ಇಮ್ಮಡಿಗೊಳಿಸಲಿದೆ. ಸಾಮಾಜಿಕವಾಗಿ ಉನ್ನತ ಸ್ಥಾನಕ್ಕೇರುವ ಯೋಗ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಧನು: ಉದ್ಯೋಗ ಕ್ಷೇತ್ರದಲ್ಲಿ ಉತ್ತರ ಕೊಡಬೇಕಾದ ಸ್ಥಾನದಲ್ಲಿ ನೀವಿರುತ್ತೀರಿ. ಕ್ರಿಯಾತ್ಮಕವಾಗಿ ಯೋಚಿಸುವುದು ಉತ್ತಮ. ವಿದ್ಯಾರ್ಥಿಗಳಿಗೆ ಆರಂಭದಲ್ಲಿ ಕಷ್ಟವೆನಿಸಿದರೂ ಬಳಿಕ ಯಶಸ್ಸು ಸಮಾಧಾನ ಕೊಡಲಿದೆ. ಅನಗತ್ಯ  ಚಿಂತೆ ಬೇಡ.

ಮಕರ: ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ವೈಯಕ್ತಿಕ ದೇಹಾರೋಗ್ಯದಲ್ಲಿ ಏರುಪೇರಾದೀತು. ಆರ್ಥಿಕ ಸಂಕಷ್ಟಕ್ಕೆ ಸಂಗಾತಿಯಿಂದ ಪರಿಹಾರ ಸಿಗಲಿದೆ.

ಕುಂಭ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ವೃತ್ತಿರಂಗದಲ್ಲಿ ಅಡಚಣೆಗಳು ಎದುರಾದರೂ ಕಾರ್ಯಸಿದ್ಧಿಯಾಗಲಿದೆ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಮನಸ್ಸು ಹಾತೊರೆಯಲಿದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ದೇವರ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ