ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 17 ಜೂನ್ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವೈವಾಹಿಕ ವಿಚಾರದಲ್ಲಿ ಪ್ರಗತಿ ಕಂಡುಬರಲಿದೆ. ಆಪ್ತರನ್ನು ಭೇಟಿಯಾಗಲಿದ್ದು ಮನಸ್ಸಿಗೆ ಸಂತೋಷ ಸಿಗಲಿದೆ. ಉನ್ನತಾಧಿಕಾರಿಗಳಿಗೆ ಜವಾಬ್ಧಾರಿ ಹೆಚ್ಚೀತು. ಆರ್ಥಿಕವಾಗಿ ಜಾಗರೂಕತೆಯಿಂದ ಖರ್ಚು ವೆಚ್ಚ ಮಾಡಿದರೆ ಉತ್ತಮ.

ವೃಷಭ: ಅನಿವಾರ್ಯ ಕಾರಣಗಳಿಗೆ ನಿಮ್ಮ ದೈನಂದಿನ ಚಟುವಟಿಕೆಗಳಲ್ಲಿ ಕೆಲವು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಪರರ ನಿಂದನೆಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಸಂಗಾತಿಯ ವಿಶ್ವಾಸಕ್ಕೆ ಪಾತ್ರರಾಗಲಿದ್ದೀರಿ.

ಮಿಥುನ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನ ನಡೆಸಲಿದ್ದೀರಿ. ಕೈಗೊಂಡ ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ ಕಂಡುಬರಲಿದೆ. ವಾಣಿಜ್ಯೋದ್ಯಮಿಗಳಿಗೆ ಮುನ್ನಡೆ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ತಕ್ಕ ಪ್ರತಿಫಲ.

ಕರ್ಕಟಕ: ಕಾರ್ಯರಂಗದಲ್ಲಿ ಮುನ್ನಡೆ ಸಿಗಬೇಕಾದರೆ ಇನ್ನಷ್ಟು ಪರಿಶ್ರಮ ಪಡಬೇಕಾಗುತ್ತದೆ. ಸಂಗಾತಿಯ ಕೆಲವೊಂದು ಸಲಹೆಗಳು ಉಪಯೋಗಕ್ಕೆ ಬರಲಿದೆ. ಮಕ್ಕಳಿಂದ ನಿಮ್ಮ ಬಲವರ್ಧನೆಯಾಗಲಿದೆ. ಅನಗತ್ಯ ಚಿಂತೆ ಬೇಡ.

ಸಿಂಹ: ವೃತ್ತಿರಂಗದಲ್ಲಿ ನಿಮ್ಮ ಕಾರ್ಯಚತುರತೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಹಿರಿಯರು ದೇಹಾರೋಗ್ಯದ ಬಗ್ಗೆ ಅಲಕ್ಷಿಸದಿರುವುದು ಉತ್ತಮ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ತಾಳ್ಮೆಯಿರಲಿ.

ಕನ್ಯಾ: ಕೌಟುಂಬಿಕವಾಗಿ ಅಭಿವೃದ್ಧಿಯಿದ್ದರೂ ಕಾರ್ಯರಂಗದಲ್ಲಿ ಅಡೆತಡೆಗಳುಂಟಾದೀತು. ನಿಮ್ಮ ತಾಳ್ಮೆ ಪರೀಕ್ಷೆ ನಡೆಯುವ ಕಾಲ. ಸಂಗಾತಿಯ ಸಹಕಾರ ಸಿಗಲಿದೆ. ಮಕ್ಕಳಿಂದ ಸಂತೋಷದ ವಾರ್ತೆ ಆಲಿಸುವ ಯೋಗ ನಿಮ್ಮದಾಗಲಿದೆ.

ತುಲಾ: ಹಿರಿಯರಿಗೆ ತೀರ್ಥಯಾತ್ರೆಗೆ ತೆರಳುವ ಯೋಗ ಕೂಡಿಬರುವುದು. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ವಿಶೇಷ ವ್ಯಕ್ತಿಗಳನ್ನು ಭೇಟಿಯಾಗಲಿದ್ದೀರಿ.

ವೃಶ್ಚಿಕ: ವ್ಯವಸ್ಥಿತವಾಗಿ ಕೆಲಸ ಕಾರ್ಯ ಮಾಡುವುದರಿಂದ ತೊಂದರೆಯಾಗದು. ನಿಮ್ಮ ಕಾರ್ಯವೈಖರಿಯಿಂದ ಇತರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ದಾಂಪತ್ಯದಲ್ಲಿ ಮಧ್ಯಮ ಸುಖ. ಕಿರು ಸಂಚಾರ ಮಾಡಲಿದ್ದೀರಿ.

ಧನು: ಮಾನಸಿಕವಾಗಿ ಬದಲಾವಣೆ ಬಯಸಲಿದ್ದೀರಿ. ಪರವೂರಿಗೆ ಸಂಚಾರ ಮಾಡುವ ಯೋಗ. ನೆರೆಹೊರೆಯವರೊಂದಿಗೆ ಸಂಬಂಧ ಸುಧಾರಿಸಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ದೇವತಾ ಪ್ರಾರ್ಥನೆ ಮರೆಯದಿರಿ.

ಮಕರ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಕಷ್ಟಕ್ಕೆ ನೆರವಾಗಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಾತೃ ಸಮಾನರ ಸೇವೆ ಮಾಡಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಕುಂಭ: ಮನಸ್ಸಿನಲ್ಲಿರುವ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಉದ್ಯೋದಲ್ಲಿ ಸ್ಥಾನ ಪಲ್ಲಟ ಭೀತಿ ಎದುರಾಗಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ. ಅನಗತ್ಯ ಚಿಂತೆ ಬೇಡ.

ಮೀನ: ಕುಟುಂಬದವರ ಕ್ಷೇಮಕ್ಕಾಗಿ ವೈಯಕ್ತಿಕ ಸುಖ ತ್ಯಾಗ ಮಾಡಬೇಕಾಗಿ ಬಂದೀತು. ವೃತ್ತಿರಂಗದಲ್ಲಿ ಏಳು ಬೀಳುಗಳು ಸಾಮಾನ್ಯ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ತಾಳ್ಮೆ ರೂಢಿಸಿಕೊಳ್ಳಬೇಕು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸರಸ್ವತಿ ಅಷ್ಟೋತ್ತರ ಶತನಾಮಾವಳಿ

ಮಂಗಳಗೌರಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಸೋಮವಾರ ಶಿವ ಪಂಚಾಕ್ಷರಿ ಸ್ತೋತ್ರ ಪಠಿಸಿ

ಶನಿ ಅಮಾವಾಸ್ಯೆ: ಮಹತ್ವ, ಆಚರಣೆ ಮತ್ತು ಶನಿದೇವನ ಕೃಪೆಗೆ ಸರಳ ಪರಿಹಾರಗಳು

ವಿವಾಹಾದಿ, ಸಂತಾನ ಸಮಸ್ಯೆಗಳ ನಿವಾರಣೆಗೆ ಓದಬೇಕಾದ ಸುಬ್ರಹ್ಮಣ್ಯ ಸ್ತೋತ್ರ

ಮುಂದಿನ ಸುದ್ದಿ
Show comments