ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 20 ಜೂನ್ 2022 (08:05 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಕಾರ್ಯವೈಖರಿಯಿಂದ ಇತರರ ಗಮನ ಸೆಳೆಯಲಿದ್ದೀರಿ. ಕಾರ್ಯರಂಗದಲ್ಲಿ ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ತಾಳ್ಮೆಯಿರಲಿ.

ವೃಷಭ: ನಿಮ್ಮ ಹೊಸ ಯೋಜನೆಗಳಿಗೆ ಹಣಕಾಸು ಹೊಂದಿಸುವುದು ಕಷ್ಟವಾದೀತು. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ವ್ಯಾವಹಾರಿಕ ಸಂಬಂಧಗಳಲ್ಲಿ ತೊಂದರೆ ಕಾಣಿಸಿಕೊಂಡೀತು. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಮನಸ್ಸಿನಲ್ಲಿರುವ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಪ್ರೇಮಿಗಳಿಗೆ ಶುಭದಿನವಾಗಿರಲಿದೆ.

ಕರ್ಕಟಕ: ವೃತ್ತಿರಂಗದಲ್ಲಿ ನಿಮಗೆ ಎದುರಾಗುವ ವಿಘ್ನಗಳಿಗೆ ಕ್ರಿಯಾತ್ಮಕವಾಗಿ ಯೋಚಿಸಿ ಪರಿಹಾರ ಕಂಡುಕೊಳ್ಳಲಿದ್ದೀರಿ. ಮಹಿಳೆಯರಿಂದ ನಿಮಗೆ ಲಾಭವಾದೀತು. ಕಾರ್ಯಸಾಧನೆಗೆ ತಕ್ಕ ಪರಿಶ್ರಮ ಪಡಬೇಕಾಗುತ್ತದೆ. ಚಿಂತೆ ಬೇಡ.

ಸಿಂಹ: ಸದುದ್ದೇಶಕ್ಕಾಗಿ ಮಾಡುವ ಕೆಲಸಗಳಲ್ಲಿ ಉನ್ನತಿ ಕಂಡುಬರಲಿದೆ. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಜನೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ಹೊಸ ಜನರ ಭೇಟಿಯಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ವೈಯಕ್ತಿಕವಾಗಿ ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ಕೊಂಚ ನಿವಾರಣೆಯಾಗಲಿದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ.

ತುಲಾ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಹೊಸ ಬಗೆಯ ವಸ್ತು ಖರೀದಿಸಲು ಮುಂದಾಗಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಪ್ರೀತಿ ಪಾತ್ರರ ವಿಚಾರದಲ್ಲಿ ಅಸಡ್ಡೆ ಬೇಡ. ಕೌಟುಂಬಿಕವಾಗಿ ಕೆಲವೊಂದು ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಕಾರ್ಯರಂಗದಲ್ಲಿ ಮುನ್ನಡೆಯಿದ್ದರೂ, ಹಿತಶತ್ರುಗಳ ಬಗ್ಗೆ ಎಚ್ಚರಿಕೆ ಅಗತ್ಯ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಧನು: ವ್ಯಾಪಾರೀ ವರ್ಗದವರಿಗೆ ಸಾಲ ಪಾವತಿ ಚಿಂತೆ ಕಾಡೀತು. ಧನಗಳಿಕೆಗೆ ನಾನಾ ಮೂಲಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬಂದೀತು. ದೇವತಾ ಪ್ರಾರ್ಥನೆ ಮಾಡಿ.

ಮಕರ: ಮನಸ್ಸಿಗೆ ಉಲ್ಲಾಸ ಕೊಡುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಕ್ರಿಯಾತ್ಮಕವಾಗಿ ಯೋಚಿಸುವುದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ವಿದ್ಯಾರ್ಥಿಗಳಿಗೆ ಆಲಸ್ಯ ಮನೋಭಾವ ಕಂಡುಬರಲಿದೆ.

ಕುಂಭ: ಉದ್ಯೋಗದಲ್ಲಿ ಬಡ್ತಿ ನಿಮಿತ್ತ ಮೇಲಧಿಕಾರಿಗಳ ಕೃಪಾಕಟಾಕ್ಷ ಪಡೆಯಲು ಪ್ರಯತ್ನಿಸಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಭಿಸಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬಂದೀತು.

ಮೀನ: ಸರಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಮುನ್ನಡೆ ಕಂಡುಬಂದೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದ್ದು, ವಿನೋದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಓದಲೇಬೇಕಾದ ಹನುಮಾನ್ ಸುಪ್ರಭಾತಮ್

ಲಲಿತಾ ಪಂಚರತ್ನಂ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ನಿಮ್ಮ ಈ ತಪ್ಪು ದಾರಿದ್ರ್ಯಕ್ಕೆ ಕಾರಣವಾಗಬಹುದು

ದೇವಿ ಅಪಾರಜಿತ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments