Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 21 ಜೂನ್ 2022 (08:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ನಿಮ್ಮ ವ್ಯವಹಾರಗಳ ಬಗ್ಗೆ ಬೇರೆಯವರು ಸಂಶಯ ಪಟ್ಟುಕೊಳ್ಳಬಹುದು. ಕೈಗೊಳ್ಳುವ ಕಾರ್ಯಗಳಲ್ಲಿ ದೃಢತೆಯಿರಲಿ. ಗೃಹರಿಪೇರಿ ಕೆಲಸಗಳಿಗಾಗಿ ಸಣ್ಣ ಪುಟ್ಟ ಖರ್ಚುಗಳಾಗುವ ಸಾಧ್ಯತೆಯಿದೆ.

ವೃಷಭ: ವೃತ್ತಿರಂಗದಲ್ಲಿ ಮೊದಲೇ ಸಮಸ್ಯೆ ಅರಿತು ಪರಿಹಾರ ಕಂಡುಕೊಳ್ಳುವ ಜಾಣ್ಮೆ ಪ್ರದರ್ಶಿಸಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲಿದ್ದೀರಿ. ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ.

ಮಿಥುನ: ಉದ್ಯೋಗ, ವ್ಯವಹಾರಗಳಲ್ಲಿ ಪೈಪೋಟಿ ಎದುರಾಗಲಿದೆ. ಗುರುಹಿರಿಯರಿಂದ ಲಾಭವಾಗಲಿದೆ. ಕೌಟುಂಬಿಕವಾಗಿ ಸುಖ, ನೆಮ್ಮದಿ ದೊರೆಯಲಿದೆ. ಸಂಗಾತಿಯ ಹಿತವಚನಗಳು ಉಪಯೋಗಕ್ಕೆ ಬರಲಿವೆ.

ಕರ್ಕಟಕ: ನಿಮ್ಮ ಮಾತಿನ ಚತುರತೆಯಿಂದ ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ಯೋಗ. ಸಂಗಾತಿಯೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಮಕ್ಕಳ ಭವಿಷ್ಯದ ನಿಟ್ಟಿನಲ್ಲಿ ಹೊಸ ಯೋಜನೆ ಹಾಕಿಕೊಳ್ಳಲಿದ್ದೀರಿ. ತಾಳ್ಮೆಯಿರಲಿ.

ಸಿಂಹ: ಸಂಪತ್ತು  ವೃದ್ಧಿಗೆ ನಾನಾ ದಾರಿಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಮನೆಗೆ ಹೊಸ ವಸ್ತು ಖರೀದಿ ಮಾಡಲು ಖರ್ಚು ವೆಚ್ಚಗಳಾದೀತು. ಮಕ್ಕಳ ಪ್ರೀತಿ ಸಂಪಾದನೆ ಮಾಡಲಿದ್ದೀರಿ. ಹಿರಿಯರಿಗೆ ದೇವಾಲಯ ಸಂದರ್ಶನ ಯೋಗ.

ಕನ್ಯಾ: ಬಹಳ ದಿನಗಳ ನಂತರ ಆಪ್ತ ಮಿತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.

ತುಲಾ: ನಿಮ್ಮ ಸಾಹಸ, ಬುದ್ಧಿವಂತಿಕೆಯಿಂದ ಇತರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರವುದು. ಚಿಂತೆ ಬೇಡ.

ವೃಶ್ಚಿಕ: ಮನಸ್ಸಿನಲ್ಲಿರುವ ಮಾತುಗಳನ್ನು ಪ್ರೀತಿ ಪಾತ್ರರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಪ್ರೇಮಿಗಳಿಗೆ ಶುಭ ದಿನವಾಗಲಿದೆ. ನಿರುದ್ಯೋಗಿಗಳಿಗೆ ಕುಲದೇವರ ಪ್ರಾರ್ಥನೆ ಮಾಡಿದರೆ ಯಶಸ್ಸು ಸಿಗಲಿದೆ. ತಾಳ್ಮೆಯಿರಲಿ.

ಧನು: ಪರಿಸ್ಥಿತಿಗೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಲಿದೆ. ದಾಂಪತ್ಯದಲ್ಲಿ ತೃಪ್ತಿಕರ ವಾತಾವರಣವಿರಲಿದೆ. ಮಕ್ಕಳ ಸಂತೋಷದಲ್ಲಿ ಭಾಗಿಯಾಗಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿಯಾಗುವುದು.

ಮಕರ: ಮಹಿಳೆಯರು ಉದ್ಯೋಗ ಕ್ಷೇತ್ರದಲ್ಲಿ ಏಳಿಗೆ ಕಾಣಲಿದ್ದಾರೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ದೂರದ ಮಿತ್ರರಿಂದ ಸಹಾಯವೊದಗಿಬರಲಿದೆ. ವೈಯಕ್ತಿಕವಾಗಿ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಅನಿವಾರ್ಯ ಕಾರಣಗಳಿಗೆ ಅನ್ಯ ಊರಿಗೆ ಪ್ರಯಾಣ ಮಾಡುವ ಅನಿವಾರ್ಯತೆ ಎದುರಾಗಲಿದೆ. ಪ್ರೀತಿ ಪಾತ್ರರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ವಿಶೇಷ ವ್ಯಕ್ತಿಗಳ ಭೇಟಿ ಸಾಧ‍್ಯತೆ.

ಮೀನ: ಇಂದು ನೀವು ಮುಟ್ಟಿದ್ದೆಲ್ಲಾ ಚಿನ್ನ ಎನ್ನುವ ಸ್ಥಿತಿಯಾಗಿರಲಿದೆ. ಉದ್ಯೋಗ,ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಸರಕಾರಿ ನೌಕರರಿಗೆ ಮುಂಬಡ್ತಿ ಯೋಗ. ದೈಹಿಕವಾಗಿ ಶ್ರಮವಿದ್ದರೂ ಅದಕ್ಕೆ ಫಲ ಸಿಗುವುದರಿಂದ ನೆಮ್ಮದಿಯಾಗಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments