Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 22 ಜೂನ್ 2022 (07:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಅಥವಾ ಕೌಟುಂಬಿಕವಾಗಿ ತಾಳ್ಮೆಯೇ ನಿಮ್ಮ ಅಸ್ತ್ರವಾಗಬೇಕು. ಸತತವಾಗಿ ಪಟ್ಟ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕೇ ಸಿಗುತ್ತದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.

ವೃಷಭ: ಹಿಂದೆ ನಿಮ್ಮ ಕಷ್ಟಗಳಿಗೆ ನೆರವಾದವರಿಗೆ ಪ್ರತ್ಯುಪಕಾರ ಮಾಡುವ ಅವಕಾಶ ನಿಮ್ಮದಾಗಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ತೊಂದರೆ ಕಾಣಿಸೀತು. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಲಿದ್ದೀರಿ.

ಮಿಥುನ: ವೈಯಕ್ತಿಕ ಜೀವನದಲ್ಲಿ ಎಷ್ಟೇ ಕಷ್ಟಗಳಿದ್ದರೂ ಔದ್ಯೋಗಿಕ ಜೀವನದಲ್ಲಿ ಯಶಸ್ಸು ಸಾಧಿಸಲಿದ್ದೀರಿ. ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷ ಬೇಡ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಶತ್ರುಗಳು ಹುಟ್ಟಿಕೊಳ್ಳಲಿದ್ದಾರೆ. ಆತ್ಮವಿಶ್ವಾಸದಿಂದ ಎಲ್ಲವನ್ನೂ ಎದುರಿಸಬೇಕಾಗುತ್ತದೆ. ದಾಂಪತ್ಯದಲ್ಲಿ ಸಾಮರಸ್ಯಕ್ಕೆ ಕೊರತೆಯಿರದು. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಪಶ್ಚಾತ್ತಾಪ ಪಡುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಸಮಸ್ಯೆಗಳಿಗೆ ಕ್ರಿಯಾತ್ಮಕವಾಗಿ ಯೋಚಿಸಿ ಪರಿಹಾರ ಕಂಡುಕೊಳ್ಳಬೇಕಾಗುತ್ತದೆ. ಮಹಿಳೆಯರಿಗೆ ತವರಿನ ಕಡೆಯ ಶುಭ ಕಾರ್ಯದಲ್ಲಿ ಭಾಗಿಯಾಗುವ ಯೋಗ.

ಕನ್ಯಾ: ಮಕ್ಕಳ ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದ್ದು, ಮನಸ್ಸಿಗೆ ಕೊಂಚ ನೆಮ್ಮದಿಯಾಗಲಿದೆ. ಲಾಭಾಪೇಕ್ಷೆಯಿಲ್ಲದೇ ಮಾಡುವ ಕೆಲಸಗಳಲ್ಲಿ ಮುನ್ನಡೆ ಕಂಡುಬರಲಿದೆ. ಚಿಂತೆ ಬೇಡ.

ತುಲಾ: ಪಾಲುದಾರಿಕೆ ವ್ಯವಹಾರಗಳು ಕೈ ಹಿಡಿಯಲಿದ್ದು, ಆರ್ಥಿಕವಾಗಿ ಸುಧಾರಣೆ ಕಂಡುಬರಲಿದೆ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಭವಿಷ್ಯದ ಬಗ್ಗೆ ಚಿಂತೆಯಾದೀತು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಶ್ಚಿಕ: ವೈಯಕ್ತಿಕ ಜೀವನದಲ್ಲಿ ಕೆಲವು ಗಮನಾರ್ಹ ಬದಲಾವಣೆಗಳಾದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ. ಅನಗತ್ಯ ಚಿಂತೆ ಬೇಡ.

ಧನು: ಮನಸ್ಸಿನಲ್ಲಿರುವ ಮಾತುಗಳನ್ನು ಇನ್ನೊಬ್ಬರ ಮುಂದೆ ಹೇಳುವ ಮುನ್ನ ಯೋಚಿಸುವುದು ಉತ್ತಮ. ಸಂಗಾತಿಯೊಂದಿಗೆ ತಾಳ್ಮೆ, ಸಂಯಮದಿಂದಿರಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ.

ಮಕರ: ವಿಶೇಷ ವ್ಯಕ್ತಿಗಳನ್ನು ಇಂದು ನೀವು ಭೇಟಿ ಮಾಡಲಿದ್ದು, ನಿಮ್ಮ ಜೀವನದಲ್ಲಿ ಮಹತ್ತರ ಬದಲಾವಣೆಗಳಾದೀತು. ನಾಲಿಗೆ ಚಪಲದಿಂದ ಉದರ ಸಂಬಂಧೀ ಆರೋಗ್ಯ ಸಮಸ್ಯೆಯಾದೀತು. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಕುಂಭ: ಉದ್ಯೋಗ, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರ.

ಮೀನ: ನಿರುದ್ಯೋಗಿಗಳು ಬಯಸಿದ್ದು ಸಿಗದೇ ನಿರಾಸೆ ಅನುಭವಿಸಲಿದ್ದೀರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಮಹಿಳೆಯರಿಗೆ ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಎಚ್ಚರಿಕೆಯಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ