ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 28 ಜೂನ್ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಮುನ್ನಡೆ ಕಂಡುಬರಲಿದೆ. ವೈಯಕ್ತಿಕ ದೇಹಾರೋಗ್ಯದ ಕಡೆಗೆ ಗಮನವಿರಲಿ. ಸಂಗಾತಿಯ ಕೆಲವೊಂದು ಸಲಹೆಗಳನ್ನು ಪಾಲಿಸುವುದು ಉತ್ತಮ. ದಿನದಂತ್ಯಕ್ಕೆ ಶುಭ ಸುದ್ದಿ ಆಲಿಸುವಿರಿ.

ವೃಷಭ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಸಕಾಲ. ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಮೇಲಧಿಕಾರಿಗಳ ಪ್ರಶಂಸೆ ಸಿಗಲಿದೆ. ಮಹಿಳೆಯರೊಂದಿಗೆ ಎಚ್ಚರಿಕೆಯಿಂದ ವರ್ತಿಸಿ. ತಾಳ್ಮೆಯಿರಲಿ.

ಮಿಥುನ: ವೃತ್ತಿರಂಗದಲ್ಲಿ ಎದುರಾಗುವ ಸಮಸ್ಯೆಗಳಿಗೆ ಸಹೋದ್ಯೋಗಿಗಳ ನೆರವು ಪಡೆಯಲಿದ್ದೀರಿ. ವೈಯಕ್ತಿಕ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ.

ಕರ್ಕಟಕ: ನಿಮ್ಮ ಬದುಕಿನಲ್ಲಿ ಇಂದು ನೀವು ತೆಗೆದುಕೊಳ್ಳುವ ನಿರ್ಧಾರಗಳು ಹೊಸ ತಿರುವಿಗೆ ಕಾರಣವಾಗಲಿದೆ. ಗುರುಹಿರಿಯರೊಂದಿಗೆ ಅನಗತ್ಯ ವಾದ ಬೇಡ. ತಾಂತ್ರಿಕ ವೃತ್ತಿಯವರಿಗೆ ಮುಂಬಡ್ತಿಯ ಯೋಗವಿದೆ.

ಸಿಂಹ: ಮನೆಯ ವಿಚಾರದಲ್ಲಿ ಯಾವುದೇ ತೀರ್ಮಾನ ಕೈಗೊಳ್ಳುವ ಮುನ್ನ ಆಪ್ತರೊಂದಿಗೆ ಪರಾಮರ್ಶೆ ನಡೆಸಿದರೆ ಉತ್ತಮ. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡಲಿದ್ದೀರಿ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇಟ್ಟುಕೊಳ್ಳಿ.

ಕನ್ಯಾ: ಮನೆಯಲ್ಲಿ ಸಣ್ಣ ಪುಟ್ಟ ಸಂಘರ್ಷಗಳಾದೀತು. ತಾಳ್ಮೆ, ಸಂಯಮದಿಂದ ವ್ಯವಹರಿಸಿ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಪ್ರೀತಿ ಪಾತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.

ತುಲಾ: ಬಯಸಿದ್ದನ್ನು ಪಡೆಯಲು ಹೋರಾಟವೇ ಮಾಡಬೇಕಾಗಿ ಬಂದೀತು. ಯಾವುದೇ ಕಾರಣಕ್ಕೂ ತಾಳ್ಮೆ ಕಳೆದುಕೊಳ್ಳಬೇಡಿ. ಮನೆಯಲ್ಲಿ ಧಾರ್ಮಿಕ ಕಾರ್ಯ ನೆರವೇರಿಸಲು ತಯಾರಿ ನಡೆಸಲಿದ್ದೀರಿ.

ವೃಶ್ಚಿಕ: ವಸ್ತು ಸ್ಥಿತಿ ಅರಿತು ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ಸಂಗಾತಿಯೊಂದಿಗೆ ಅನಗತ್ಯ ವಾದ-ವಿವಾದ ಬೇಡ. ಬೇರೆಯವರ ವೈಯಕ್ತಿಕ ಜೀವನದಲ್ಲಿ ಅನಗತ್ಯವಾಗಿ ಮೂಗು ತೂರಿಸಲು ಹೋಗಬೇಡಿ. ದುಂದು ವೆಚ್ಚ ಬೇಡ.

ಧನು: ನಿಮಗೆ ಅತ್ಯಂತ ಪ್ರಿಯವಾದ ವಸ್ತು ಕಳೆದುಕೊಳ್ಳುವ ಭೀತಿ ಎದುರಾಗಲಿದೆ. ಮನಸ್ಸಿನಲ್ಲಿರುವ ವಿಚಾರಗಳನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳಲಿದ್ದೀರಿ. ಬಂಧು ಮಿತ್ರರ ಭೇಟಿ ಸಾಧ‍್ಯತೆ. ಕಿರು ಪ್ರಯಾಣ ಮಾಡುವಿರಿ.

ಮಕರ: ಹಲವು ದಿನಗಳ ನಂತರ ಪ್ರೀತಿ ಪಾತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗುವುದು. ವಿವೇಚನೆಯಿಂದ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಕುಂಭ: ಕೆಲಸ ಕಾರ್ಯಗಳ ನಿಮಿತ್ತ ದೂರ ಪ್ರಯಾಣ ಮಾಡುವ ಅನಿವಾರ್ಯತೆ ಎದುರಾದೀತು. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಅವಿವಾಹಿತ ಕನ್ಯೆಯರಿಗೆ ಶುಭ ಫಲಗಳು ದೊರೆಯಲಿವೆ.

ಮೀನ: ಕೆಲಸದಲ್ಲಿ ನಿಮ್ಮ ತಲ್ಲೀನತೆ, ಆಸಕ್ತಿ ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರವಾಗಲಿದೆ. ಗೃಹ, ಆಸ್ತಿ ಖರೀದಿ ವಿಚಾರದಲ್ಲಿ ಆಸಕ್ತಿ ಕಂಡುಬರಲಿದೆ. ದಾಂಪತ್ಯದಲ್ಲಿ ಮಧ್ಯಮ ಸುಖ ಕಂಡುಬರುವುದು. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಕವಚ ಸ್ತೋತ್ರವನ್ನು ಓದುವ ಸರಿಯಾದ ಕ್ರಮ ಹೀಗೆ

ವಾಸವೀ ಕನ್ನಿಕಾ ಪರಮೇಶ್ವರಿ ದೇವಿ ಸ್ತೋತ್ರ

ಗುರುವಾರ ಮಹಾವಿಷ್ಣುವಿನ ಮೂಲ ಮಂತ್ರ ಪಠಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ತಿಳಿದುಕೊಳ್ಳಿ

ಶ್ರೀ ಗಣೇಶ ಕವಚಂ ಸ್ತೋತ್ರ ಪಠಣದ ಅದ್ಭುತ ಪ್ರಯೋಜನಗಳು

ಲಲಿತಾ ಸಹಸ್ರನಾಮ ಓದುವುದರ ಫಲ ತಿಳಿಯಿರಿ, ಯಾವೆಲ್ಲಾ ಸಮಸ್ಯೆಗೆ ಮುಕ್ತಿ ಗೊತ್ತಾ

ಮುಂದಿನ ಸುದ್ದಿ
Show comments