Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 1 ಜುಲೈ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಮಾನಸಿಕವಾಗಿ ವಿಶ್ರಾಂತಿ ಪಡೆಯಲು ಮನಸ್ಸು ಬಯಸಲಿದೆ. ಉದ್ಯೋಗ ಬದಲಾವಣೆಗೆ ನೀವು ಮಾಡುವ ಪ್ರಯತ್ನಕ್ಕೆ ಫಲ ಸಿಗಲಿದೆ. ಕೈಲಾಗದವರಿಗೆ ನಿಮ್ಮಿಂದಾದ ಸಹಾಯ ಮಾಡಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ

ವೃಷಭ: ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಉನ್ನತಿಯ ಯೋಗ. ವಿಶೇಷ ವ್ಯಕ್ತಿಗಳ ಭೇಟಿಯಿಂದ ಕನಸು ನನಸಾಗಲಿದೆ. ಬಂಧುಮಿತ್ರರಿಂದ ಪ್ರೋತ್ಸಾಹ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಪ್ರಗತಿ ಕಂಡುಬರಲಿದೆ.

ಮಿಥುನ: ವೃತ್ತಿರಂಗದಲ್ಲಿ ನಿಮಗೆ ಆಗಿಬರದ ವ್ಯಕ್ತಿಗಳಿಂದ ತೊಂದರೆಗಳು ಎದುರಾದೀತು. ಸರಕಾರಿ ಲೆಕ್ಕಪತ್ರಗಳ ಬಗ್ಗೆ ಎಚ್ಚರಿಕೆ ವಹಿಸಬೇಕಾಗುತ್ತದೆ. ಅಪರಿಚಿತ ವ್ಯಕ್ತಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರುವುದು ಉತ್ತಮ.

ಕರ್ಕಟಕ: ನಿಮ್ಮ ಕನಸಿನ ಯೋಜನೆಗೆ ಯಾವುದೇ ಅಡ್ಡಿ ಆತಂಕಗಳು ಎದುರಾಗದು. ಆದರೆ ಸಾಲಗಾರರ ಕಾಟದಿಂದ ಮುಕ್ತಿ ಪಡೆಯಲು ಹೊಸ ದಾರಿ ಕಂಡುಕೊಳ್ಳಬೇಕಾಗುತ್ತದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಸಿಂಹ: ಪಾಲುದಾರಿಕೆ ವ್ಯವಹಾರಗಳಲ್ಲಿ ಅಭಿವೃದ್ಧಿ ಕಂಡುಬರುವುದು. ಇಲ್ಲಸಲ್ಲದ ವಿಚಾರಕ್ಕೆ ತಲೆಕೆಡಿಸಿಕೊಳ್ಳುವುದು ಬೇಡ. ಹೊಸ ಉದ್ಯೋಗಕ್ಕೆ ಪ್ರಯತ್ನ ಪಡಲಿದ್ದೀರಿ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಮಕ್ಕಳ ವಿಚಾರದಲ್ಲಿ ಅನಗತ್ಯ ವಿವಾದ ಬೇಡ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಧಾರ್ಮಿಕ ಕಾರ್ಯಗಳಿಗೆ ಮುಂದಾಳತ್ವ ವಹಿಸಲಿದ್ದೀರಿ. ಹಣಕಾಸಿನ ಆದಾಯಕ್ಕೆ ಕೊರತೆಯಾಗದು. ಚಿಂತೆ ಬೇಡ.

ತುಲಾ: ಸಹೋದರ ಸಮಾನರಿಂದ ಪ್ರೋತ್ಸಾಹ ಕಂಡುಬರಲಿದೆ. ಧನಾದಾಯ ವೃದ್ದಿಯಾಗಲಿದೆ. ಆಸ್ತಿವಿಚಾರಗಳಲ್ಲಿ ಆತುರದ ತೀರ್ಮಾನ ಬೇಡ. ಕಾರ್ಯಸಫಲತೆಗೆ ಗುರುಹಿರಿಯರ ಪ್ರೋತ್ಸಾಹ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಶ್ಚಿಕ: ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ಧಾರಿಗಳು ಹೆಗಲಿಗೇರಲಿವೆ. ಮಹಿಳೆಯರಿಗೆ ಉನ್ನತ ಸ್ಥಾನಕ್ಕೇರುವ ಯೋಗ. ಅನಗತ್ಯ ಮಾತುಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ.

ಧನು:  ಬೇರೆಯವರ ಮಾತನ್ನು ಅತಿಯಾಗಿ ಕಿವಿಗೆ ಹಾಕಿಕೊಳ್ಳುವ ಅಗತ್ಯವಿಲ್ಲ. ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ‍್ಳಲಿದ್ದೀರಿ. ಇಷ್ಟಮಿತ್ರರೊಂದಿಗೆ ಇಷ್ಟಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಚಿಂತೆ ಬೇಡ.

ಮಕರ: ಹೊಸದಾಗಿ ವಸ್ತುಗಳನ್ನು ಖರೀದಿ ಮಾಡಲು ಖರ್ಚು ವೆಚ್ಚಗಳಾದೀತು. ನಿಮ್ಮ ಚಿಂತನೆಗಳನ್ನು ಇತರರ ಮೇಲೆ ಹೇರಲು ಹೋಗಬೇಡಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಸಹೋದರರಿಂದ ಸಹಕಾರ ಸಿಗಲಿದೆ.

ಕುಂಭ: ಹಿಂದೆ ನಡೆದು ಹೋದ ವಿಚಾರಗಳ ಬಗ್ಗೆ ಅನಗತ್ಯ ಚಿಂತೆ ಮಾಡುವ ಅಗತ್ಯವಿಲ್ಲ. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗುವ ಸಂಭವ. ಅನಿರೀಕ್ಷಿತ ಖರ್ಚು ವೆಚ್ಚಗಳಾದೀತು. ಕಾರ್ಯನಿಮಿತ್ತ ಪರವೂರಿಗೆ ಪ್ರಯಾಣ ಮಾಡಬೇಕಾದೀತು.

ಮೀನ: ಆತುರದ ಬುದ್ಧಿಯಿಂದ ತೀರ್ಮಾನ ತೆಗೆದುಕೊಂಡು ಪಶ್ಚಾತ್ತಾಪ ಪಡುವ ಸ್ಥಿತಿ ನಿಮ್ಮದಾಗಲಿದೆ. ರಾಜಕೀಯ ರಂಗದಲ್ಲಿ ಮುನ್ನಡೆ ಕಂಡುಬರಲಿದೆ. ಹಣಕಾಸಿನ ಏರಿಳಿತಗಳು ಸಾಮಾನ್ಯ. ಮಕ್ಕಳಿಂದ ಸಂತೋಷ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗಂಡ-ಹೆಂಡತಿ ಸಂಬಂಧ ಚೆನ್ನಾಗಿರಬೇಕೆಂದರೆ ಬೆಡ್ ರೂಂನಲ್ಲಿ ಈ ಚಿತ್ರ ಹಾಕಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments