ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 15 ಜುಲೈ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕನಸಿನ ಬೆನ್ನೇರಿ ಹೊರಡುವಾಗ ಕೆಲವೊಂದು ಅಡೆತಡೆಗಳು ಸಾಮಾನ್ಯ. ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ನಿಮ್ಮ ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಷಭ: ಸಂದರ್ಭೋಚಿತ ಸಲಹೆಗಳು ನಿಮಗೆ ಕಷ್ಟಕಾಲದಲ್ಲಿ ನೆರವಿಗೆ ಬರಲಿದೆ. ಸಾಂಸಾರಿಕವಾಗಿ ಮಧ್ಯಮ ಸುಖ ಕಂಡುಬರಲಿದೆ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಕೌಟುಂಬಿಕವಾಗಿ ಸುಖ ಸಮೃದ್ಧಿ ಕಂಡುಬರಲಿದೆ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನವಾಗುವ ಸಾಧ್ಯತೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ಉದ್ಯೋಗ ಸಂಬಂಧವಾದ ಸಮಸ್ಯೆಗಳಿಂದ ಮನೆಯಲ್ಲೂ ಅಶಾಂತಿ ಮೂಡೀತು. ಸಂಗಾತಿಯೊಂದಿಗೆ ತಾಳ್ಮೆಯಿಮದ ವ್ಯವಹರಿಸಿ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಬೇಕಾಗುತ್ತದೆ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಹೊಸ ಅವಕಾಶಗಳು ಬರಲಿವೆ. ನಿರುದ್ಯೋಗಿಗಳು ಪಾಲಿಗೆ ಬಂದಿದ್ದೇ ಪಂಚಾಮೃತ ಎಂದುಕೊಳ್ಳಬೇಕು. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.

ಕನ್ಯಾ: ಬಂಧು ಮಿತ್ರರ ಸಹಕಾರದಿಂದ ಉದ್ಯೋಗ ರಂಗದಲ್ಲಿ ಯಶಸ್ಸು ಕಂಡುಬರಲಿದೆ. ಆಸ್ತಿ ವಿಚಾರದಲ್ಲಿ ಸಹೋದರಾದಿ ಸಂಬಂಧಿಗಳೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಕುಲದೇವರ ಪ್ರಾರ್ಥನೆ ಮಾಡಿ.

ತುಲಾ: ಹಣಕಾಸಿನ ಆದಾಯಕ್ಕೆ ಹೆಚ್ಚಳಕ್ಕೆ ನಾನಾ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ. ನಿಮ್ಮ ಚಾಕಚಕ್ಯತೆಯಿಂದ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ತಾಳ್ಮೆಯಿರಲಿ.

ವೃಶ್ಚಿಕ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ನಿಮ್ಮ ಆಪ್ತರ ಕಷ್ಟಕ್ಕೆ ನೆರವಾಗಲಿದ್ದೀರಿ. ಹಿರಿಯರಿಗೆ ದೇವತಾ ಕಾರ್ಯಗಳಿಂದ ನೆಮ್ಮದಿ ದೊರೆಯಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ನಿಮ್ಮ ಮನಸ್ಸಿನ ಮಾತುಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಮಕ್ಕಳ ಜೀವನದಲ್ಲಿ ಅಭಿವೃದ್ಧಿ ಕಂಡು ಸಂತೋಷವಾಗಲಿದೆ. ದಾಂಪತ್ಯದಲ್ಲಿ ತೃಪ್ತಿಕರ ವಾತಾವರಣವಿರಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಮಕರ: ಹಲವು ಚಟುವಟಿಕೆಗಳಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳಲಿದ್ದೀರಿ. ಹಳೆಯ ಮಿತ್ರರ ಪುನರ್ಮಿಲನವಾಗಲಿದೆ. ಪಾಲು ಬಂಡವಾಳ ಹೂಡಿಕೆಗೆ ಇದು ಸಕಾಲ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.

ಕುಂಭ: ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸಿಗೆ ಕೆಲವೊಂದು ವಿಘ್ನಗಳು ಎದುರಾದೀತು. ವಿದ್ಯಾರ್ಥಿಗಳಿಗೆ ಕಠಿಣ ಹಾದಿ ಮುಂದಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಮೀನ: ಹೊಸ ಜನರ ಭೇಟಿಯಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಮನೆಯಲ್ಲಿ ಶುಭ ಮಂಗಲ ಕಾರ್ಯನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಅನಗತ್ಯ ಚಿಂತೆ ಬೇಡ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments