Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 12 ಆಗಸ್ಟ್ 2022 (07:42 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಇಂದು ನಿಮ್ಮ ಪಾಲಿಗೆ ಓಡಾಟದ ದಿನವಾಗಿರಲಿದೆ. ಕೌಟುಂಬಿಕವಾಗಿ ಜವಾಬ್ಧಾರಿಗಳಿಗೆ ಹೆಗಲು ಕೊಡಬೇಕಾಗುತ್ತದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಸಂಗಾತಿಯೊಂದಿಗೆ ಸಮಾಧಾನದಿಂದ ವರ್ತಿಸಿ. ತಾಳ್ಮೆಯಿರಲಿ.

ವೃಷಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆಯಾದೀತು. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ದಿನದ ಮೊದಲಾರ್ಧ ದುಃಖವಿದ್ದರೆ ನಂತರ ನೆಮ್ಮದಿ ಸಿಗಲಿದೆ. ಚಿಂತೆ ಬೇಡ.

ಮಿಥುನ: ಕಾರ್ಯರಂಗದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಕೆಳ ಹಂತದ ನೌಕರರಿಗೆ ಮುಂಬಡ್ತಿ ಪಡೆಯುವ ಯೋಗ. ನಿರುದ್ಯೋಗಿಗಳು ಪಾಲಿಗೆ ಬಂದಿದ್ದನ್ನು ಪಂಚಾಮೃತ ಎಂದು ತಿಳಿದು ಮುನ್ನಡೆಯಬೇಕು.

ಕರ್ಕಟಕ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರೀ ವರ್ಗದವರಿಗೆ ಸಾಲದ ಹೊರೆಯಿಂದ ಮುಕ್ತಿ ಸಿಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ದೊರೆಯಲಿವೆ. ಅನಗತ್ಯ ಚಿಂತೆ ಬೇಡ.

ಸಿಂಹ: ಮನೆಯ ಆಗು ಹೋಗುಗಳಲ್ಲಿ ನೀವೂ ಭಾಗಿಗಳಾಗಬೇಕಾಗುತ್ತದೆ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾದೀತು. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾದೀತು. ವೈಯಕ್ತಿಕ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸಂಗಾತಿಯ ಸಲಹೆ ಉಪಯೋಗಕ್ಕೆ ಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ತಾಳ್ಮೆ ಅಗತ್ಯ.

ತುಲಾ: ಎಷ್ಟೋ ದಿನಗಳಿಂದ ಅರ್ಧಕ್ಕೇ ನಿಂತಿದ್ದ ಕೆಲಸಗಳನ್ನು ಪೂರ್ತಿ ಮಾಡಲು ಪ್ರಯತ್ನಿಸಲಿದ್ದೀರಿ. ಮಹಿಳೆಯರಿಗೆ ಅನಿರೀಕ್ಷಿತ ಧನಲಾಭದ ಸಾಧ‍್ಯತೆ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ಆರೋಗ್ಯದಲ್ಲಿ ಸುಧಾರಣೆ.

ವೃಶ್ಚಿಕ: ಉದ್ಯೋಗ, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದ್ದು, ಹಣಕಾಸಿನ ಮುಗ್ಗಟ್ಟುಗಳು ದೂರವಾಗಲಿದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಮುಚ್ಚಿಟ್ಟ ಗುಟ್ಟುಗಳು ಬಯಲಾಗುವ ಸಂಭವ.

ಧನು: ಸಂಗಾತಿಯ ಬಹುದಿನಗಳ ಆರೋಗ್ಯ ಸಮಸ್ಯೆಗೆ ಪರಿಹಾರ ಸಿಗಲಿದೆ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಉದಾಸೀನ ಪ್ರವೃತ್ತಿ ಕಂಡುಬಂದೀತು. ಕಾರ್ಯದೊತ್ತಡ ಅಧಿಕವಾಗಲಿದೆ.

ಮಕರ: ವೈಯಕ್ತಿಕ ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಕಾರ್ಯರಂಗದಲ್ಲಿ ನಿಮ್ಮ ನಿರ್ಧಾರಗಳು ಇತರರ ಅಸಮಾಧಾನಕ್ಕೆ ಗುರಿಯಾದೀತು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಕುಂಭ: ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಹಿರಿಯರಿಗೆ ಆರೋಗ್ಯ ನಿಮಿತ್ತ ಆಸ್ಪತ್ರೆಗೆ ಅಲೆದಾಡಬೇಕಾದೀತು. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ.

ಮೀನ: ಸರ್ಕಾರಿ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಕೌಟುಂಬಿಕವಾಗಿ ನಿರ್ಧಾರ ತೆಗೆದುಕೊಳ್ಳುವ ಸ್ಥಾನದಲ್ಲಿ ನೀವಿರಲಿದ್ದೀರಿ. ಕಿರು ಓಡಾಟ ನಡೆಸಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಅನುಗ್ರಹಕ್ಕಾಗಿ ಆನಂದ ಲಹರಿ ಪಠಿಸಿ: ಕನ್ನಡದಲ್ಲಿ ಇಲ್ಲಿದೆ

ಶನಿದೋಷ ಪರಿಹಾರಕ್ಕಾಗಿ ಶನಿ ಸಹಸ್ರನಾಮವನ್ನು ಇಂದು ತಪ್ಪದೇ ಓದಿ

Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ

Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ

Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments