Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 13 ಆಗಸ್ಟ್ 2022 (07:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅಧ್ಯಯನ ನಿರತರಿಗೆ ಅನುಕೂಲಕರ ವಾತಾವರಣವಿರಲಿದೆ. ಯೋಗ್ಯ ವಯಸ್ಕರಿಗೆ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಬಂಧು ಮಿತ್ರರೊಂದಿಗೆ ಕಾಲ ಕಳೆಯುವ ಅವಕಾಶ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಅತಿಯಾಗಿ ವಿನಯ ತೋರುವವರೊಂದಿಗೆ ಎಚ್ಚರಿಕೆಯಿಂದಿರಿ. ಕೋರ್ಟು ಕಚೇರಿ ಕಲಾಪಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಕೌಟುಂಬಿಕವಾಗಿ ನಿಮ್ಮ ಕೆಲಸಗಳಿಗೆ ಮನೆಯವರ ಸಾಥ್ ಸಿಗಲಿದೆ. ಅನಗತ್ಯ ಚಿಂತೆ ಬೇಡ.

ಮಿಥುನ: ಕೈಗೊಂಡ ಕೆಲಸಗಳಲ್ಲಿ ಯಶಸ್ಸು ಸಿಗಬೇಕಾದರೆ ಅತಿಯಾದ ಪರಿಶ್ರಮ ಅಗತ್ಯ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಮಾನ ಸುಧಾರಣೆಯಾಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.

ಕರ್ಕಟಕ: ಇದ್ದದ್ದನ್ನು ಇದ್ದ ಹಾಗೆ ಹೇಳಿ ಇತರರ ನಿಷ್ಠುರಕ್ಕೆ ಕಾರಣವಾಗಲಿದ್ದೀರಿ. ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಸಾಧಿಸಿದ ನೆಮ್ಮದಿ ನಿಮ್ಮದಾಗುವುದು. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಬೇರೆಯವರು ನಿಮ್ಮ ಬಗ್ಗೆ ಹೇಳುವ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಅನುಕೂಲಕರ ವಾತಾವರಣ ಸಿಗಲಿದೆ. ಚಿಂತೆ ಬೇಡ.

ಕನ್ಯಾ: ಆಪ್ತೇಷ್ಟರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಮಕ್ಕಳ ವಿಚಾರದಲ್ಲಿ ಅನಗತ್ಯ ತೊಂದರೆ ಮೈಮೇಲೆಳೆದುಕೊಳ್ಳಬೇಡಿ. ಸಂಗಾತಿಯ ಸಲಹೆಗಳಿಗೆ ಕಿವಿಗೊಡುವುದು ಉತ್ತಮ. ತಾಳ್ಮೆಯಿರಲಿ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಇಷ್ಟು ದಿನ ನೀವು ಕಾಯುತ್ತಿದ್ದ ಫಲ ನಿಮಗೆ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ವೃಶ್ಚಿಕ: ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಯೋಗ ನಿಮ್ಮದಾಗಲಿದೆ. ಸ್ವಯಂ ವ್ಯಾಪಾರಿಗಳಿಗೆ ಉನ್ನತಿಯ ಯೋಗ. ಚಿಂತೆ ಬೇಡ.

ಧನು: ಮಕ್ಕಳ ಜೀವನದಲ್ಲಿ ಅನಗತ್ಯ ಮೂಗು ತೂರಿಸಲು ಹೋಗಬೇಡಿ. ಸಂಗಾತಿಯೊಂದಿಗೆ ಘರ್ಷಣೆಗಳಾಗದಂತೆ ಎಚ್ಚರಿಕೆ ವಹಿಸಿ. ವ್ಯಾವಹಾರಿಕವಾಗಿ ಉತ್ತಮ ಫಲಗಳು ದೊರೆಯಲಿವೆ. ವಿದ್ಯಾರ್ಥಿಗಳಿಗೆ ಮುನ್ನಡೆ ಕಂಡುಬರಲಿದೆ.

ಮಕರ: ವೃತ್ತಿರಂಗದಲ್ಲಿ ನಿಮಗೆ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಪ್ರೀತಿ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ದೇವರ ಪ್ರಾರ್ಥನೆ ಮಾಡಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಬಿಡುವಿನ ಖುಷಿ ಸಿಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಮಕ್ಕಳಿಂದ ಸಂತೋಷ ಸಿಗುವುದು.

ಮೀನ: ಸರಿಯಾದ ಸಂದರ್ಭದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳುವುದರಿಂದ ಸಂಭಾವ್ಯ ಸಮಸ್ಯೆಯಿಂದ ದೂರವಾಗಲಿದ್ದೀರಿ. ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ದಾನ ಧರ್ಮಾದಿಗಳಿಂದ ನೆಮ್ಮದಿ ದೊರೆಯುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಈ ಒಂದು ವಸ್ತು ತಂದಿಟ್ಟರೆ ಲಕ್ಷ್ಮಿ ನಿಮ್ಮ ಮನೆಗೆ ಬರುತ್ತಾಳೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರು ಗ್ರಹ ದೋಷ ನಿವಾರಣೆಗೆ ಏನು ಮಾಡಬೇಕು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಕ್ಕಳಿಗೆ ವಿದ್ಯೆ ತಲೆಗೆ ಹತ್ತದಿರಲು ಯಾವ ದೋಷ ಕಾರಣ

ಮುಂದಿನ ಸುದ್ದಿ
Show comments