Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 15 ಆಗಸ್ಟ್ 2022 (07:35 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಅಧಿಕಾರದ ದುರ್ಬಳಕೆಯಾಗದಂತೆ ನೋಡಿಕೊಳ್ಳಿ. ಸಹೋದರಾದಿ ವರ್ಗದವರಿಗೆ ಸಹಾಯ ಮಾಡಲಿದ್ದೀರಿ. ನಿಮ್ಮ ಭವಿಷ್ಯದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ‍್ಳಲಿದ್ದೀರಿ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದು ಮನಸ್ಸಿಗೆ ನೆಮ್ಮದಿಯಾಗಲಿದೆ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾಗಲಿದೆ. ಇಷ್ಟಮಿತ್ರರನ್ನು ಭೇಟಿಯಾಗಲಿದ್ದು, ಸಂತೋಷದಿಂದ ಕಾಲ ಕಳೆಯಲಿದ್ದೀರಿ.

ಮಿಥುನ: ಎಷ್ಟೇ ಕಷ್ಟವಿದ್ದರೂ ಬೇರೆಯವರಿಗೆ ಸಹಾಯ ಮಾಡಿದ ಸಂತೃಪ್ತಿ ನಿಮ್ಮದಾಗುವುದು. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗಲಿದೆ. ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಲಾಭ ಕಂಡುಬರಲಿದೆ.

ಕರ್ಕಟಕ: ಸಾಂಸಾರಿಕವಾಗಿ ಸುಖ ಸಂತೋಷ ಕಂಡುಬರಲಿದೆ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ಕೊಡಲಿದ್ದೀರಿ. ಕೂಡಿಟ್ಟ ಹಣ ಅನಿವಾರ್ಯ ಕಾರಣಗಳಿಗೆ ಖರ್ಚು ಮಾಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಉಂಟಾದೀತು.

ಸಿಂಹ: ಬಹಳ ಕಾಲದಿಂದ ಅಂದುಕೊಂಡಿದ್ದ ಕೆಲಸ ಪೂರ್ತಿ ಮಾಡಲು ಪ್ರಯತ್ನ ಮಾಡಲಿದ್ದೀರಿ. ನಿಮ್ಮಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತೆಗೆಯಲು ಅವಕಾಶಗಳು ಸಿಗಲಿದೆ. ಹಿತಶತ್ರುಗಳಿಂದ ದೂರವಿದ್ದರೇ ಉತ್ತಮ.

ಕನ್ಯಾ: ಹಣಕಾಸಿನ ವಿಚಾರದಲ್ಲಿ ಅಜಾಗರೂಕತೆ ಸಲ್ಲದು. ಕೌಟುಂಬಿಕವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಎಲ್ಲರ ಅಭಿಪ್ರಾಯಗಳಿಗೆ ಬೆಲೆಕೊಡಬೇಕು. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ.

ತುಲಾ: ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡಲಿದ್ದೀರಿ. ಮಾನಸಿಕವಾಗಿ ಉಲ್ಲಾಸದಾಯಕ ವಾತಾವರಣವಿರಲಿದೆ. ಹಾಗಿದ್ದರೂ ದೈಹಿಕವಾಗಿ ಆಯಾಸವಾದೀತು. ದಾಂಪತ್ಯದಲ್ಲಿ ಅನಗತ್ಯ ಚರ್ಚೆಗಳಿಗೆ ಅವಕಾಶ ಕೊಡಬೇಡಿ.

ವೃಶ್ಚಿಕ: ನಿಮ್ಮ ಹೊಸ ಯೋಜನೆಗಳಿಗೆ ಗುರುಹಿರಿಯರ ಬೆಂಬಲ ಸಿಗಲಿದೆ. ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಪಾಲು ಬಂಡವಾಳ ಹೂಡಿಕೆ ವ್ಯವಹಾರಗಳು ಲಾಭ ತಂದುಕೊಡಲಿದೆ.

ಧನು: ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮಕರ: ವಿಶೇಷ ವ್ಯಕ್ತಿಗಳು ನೀಡುವ ಸಲಹೆಯಿಂದಾಗಿ ನಿಮ್ಮ ಜೀವನದಲ್ಲಿ ಇಂದು ಮಹತ್ವದ ತೀರ್ಮಾನ ಕೈಗೊಳ್ಲಲಿದ್ದೀರಿ.  ಆಸ್ತಿ, ವಾಹನ ಖರೀದಿಗೆ ಯೋಜನೆ ಹಾಕಿಕೊಳ್ಳಲಿದ್ದೀರಿ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ.

ಕುಂಭ: ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಮನಸ್ಸಿನ ಮಾತು ಹೇಳಿಕೊಳ್ಳಲು ಅವಕಾಶ ಸಿಗಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಕುಲದೇವರ ಪ್ರಾರ್ಥನೆ ಮಾಡಿ.

ಮೀನ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ನಿಮ್ಮ ಜೀವನದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳುವ ದಿನವಿದು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?