Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 16 ಆಗಸ್ಟ್ 2022 (06:54 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರತರಲು ಪ್ರಯತ್ನಿಸಿ. ಸಂಗಾತಿಯೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ದೈನಂದಿನ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ. ಮೇಲಧಿಕಾರಿಗಳ ಕೃಪಾಕಟಾಕ್ಷೆ ಪಡೆಯಲು ಯತ್ನಿಸುವಿರಿ.

ವೃಷಭ: ಪ್ರೀತಿ ಪಾತ್ರರಿಗೆ ಉಡುಗೊರೆಗಳ ಮೂಲಕ ಖುಷಿ ನೀಡಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ್ಯತೆ. ಅನಿವಾರ್ಯ ಕಾರಣಗಳಿಗೆ ಸಂಚಾರ ಮಾಡಬೇಕಾಗುತ್ತದೆ.

ಮಿಥುನ: ನಿಮ್ಮ ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬಂದೀತು. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.

ಕರ್ಕಟಕ: ಇನ್ನೊಬ್ಬರ ವಿಚಾರದಲ್ಲಿ ಅನಗತ್ಯ ಮೂಗು ತೂರಿಸಲು ಹೋಗಿ ವಿವಾದ ಮೈಮೇಲೆಳದುಕೊಳ್ಳಬೇಡಿ. ಹಿಂದೆ ಮಾಡಿದ ಕೆಲಸದ ಫಲ ಇಂದು ಅನುಭವಿಸಬೇಕಾದೀತು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ.

ಸಿಂಹ: ಕೆಲಸ ಕಾರ್ಯಗಳಲ್ಲಿ ವಿಘ್ನಗಳು ಎದುರಾದರೂ ಅಂತಿಮ ಜಯ ನಿಮ್ಮದಾಗಲಿದೆ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ತಾಳ್ಮೆಯಿರಲಿ.

ಕನ್ಯಾ: ನಿಮ್ಮ ಕನಸಿನ ಯೋಜನೆಗೆ ಚಾಲನೆ ನೀಡಲಿದ್ದೀರಿ. ಮಕ್ಕಳಿಂದ ಸಂತೋಷ ಸಿಗಲಿದೆ. ಬಹಳ ದಿನಗಳ ನಂತರ ಆಪ್ತರ ಭೇಟಿ ಸಂತೋಷ ತರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಚಿಂತೆ ಬೇಡ.

ತುಲಾ: ದೇವತಾ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಉದರ ಸಂಬಂಧೀ ಆರೋಗ್ಯ ಸಮಸ್ಯೆಯಾದೀತು, ಎಚ್ಚರಿಕೆ ಅಗತ್ಯ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ ಸಂಭವ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೃಶ್ಚಿಕ: ವೃತ್ತಿರಂಗದಲ್ಲಿ ನಿಮ್ಮ ಹಿತಶತ್ರುಗಳಿಂದ ಸಮಸ್ಯೆಗಳು ಎದುರಾದೀತು. ಪ್ರಭಾವೀ ವ್ಯಕ್ತಿಗಳ ಸಹಾಯ ಪಡೆಯಲಿದ್ದೀರಿ. ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ತಾಳ್ಮೆಯಿರಲಿ.

ಧನು: ನಿಮ್ಮ ಕೈಯಲ್ಲಿದ್ದುದನ್ನು ಇನ್ನೊಬ್ಬರಿಗೆ ದಾನ ಮಾಡುವ ಸಂತೃಪ್ತಿ ನಿಮ್ಮದಾಗಲಿದೆ. ಸಾಮಾಜಿಕವಾಗಿ ನಿಮ್ಮ ಕೆಲಸ ಕಾರ್ಯಗಳಿಗೆ ಮೆಚ್ಚುಗೆ ಸಿಗಲಿದೆ. ಸಂಗಾತಿಯೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಕಟ್ಟಡ, ನಿವೇಶನ ಖರೀದಿಗೆ ಯೋಜನೆ ರೂಪಿಸಿದ್ದರೆ ಸೂಕ್ತ ಫಲ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಇಷ್ಟಮಿತ್ರರನ್ನು ಭೇಟಿಯಾಗಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕುಂಭ: ಸರಕಾರಿ ಕೆಲಸಗಳಲ್ಲಿ ಜಯ, ಉನ್ನತಾಧಿಕಾರದ ಯೋಗ. ಕೌಟುಂಬಿಕವಾಗಿ ಹೊಸ ನಿರ್ಧಾರಗಳನ್ನು ಕೈಗೊಳ್ಳುವಾಗ ಸಂಗಾತಿಯೊಂದಿಗೆ ಪರಾಮರ್ಶಿಸಿ. ಹಿರಿಯರಿಗೆ ದೇವತಾ ಕ್ಷೇತ್ರಗಳ ಸಂದರ್ಶನ ಯೋಗ.

ಮೀನ: ಕಾರ್ಯರಂಗದಲ್ಲಿ ಮೇಲಧಿಕಾರಿಗಳ ವಿಶ್ವಾಸ ಗಳಿಸಲಿದ್ದೀರಿ. ಸರಕಾರಿ ಉದ್ಯೋಗಸ್ಥರಿಗೆ ಬಿಡುವಿಲ್ಲದ ಕೆಲಸ. ಮನಸ್ಸಿನಲ್ಲಿ ಕಾಡುವ ಗೊಂದಲಗಳಿಗೆ ಆಪ್ತರ ಸಲಹೆ ಪಡೆಯಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ