ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 16 ಆಗಸ್ಟ್ 2022 (06:54 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರತರಲು ಪ್ರಯತ್ನಿಸಿ. ಸಂಗಾತಿಯೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ದೈನಂದಿನ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ. ಮೇಲಧಿಕಾರಿಗಳ ಕೃಪಾಕಟಾಕ್ಷೆ ಪಡೆಯಲು ಯತ್ನಿಸುವಿರಿ.

ವೃಷಭ: ಪ್ರೀತಿ ಪಾತ್ರರಿಗೆ ಉಡುಗೊರೆಗಳ ಮೂಲಕ ಖುಷಿ ನೀಡಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ್ಯತೆ. ಅನಿವಾರ್ಯ ಕಾರಣಗಳಿಗೆ ಸಂಚಾರ ಮಾಡಬೇಕಾಗುತ್ತದೆ.

ಮಿಥುನ: ನಿಮ್ಮ ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬಂದೀತು. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.

ಕರ್ಕಟಕ: ಇನ್ನೊಬ್ಬರ ವಿಚಾರದಲ್ಲಿ ಅನಗತ್ಯ ಮೂಗು ತೂರಿಸಲು ಹೋಗಿ ವಿವಾದ ಮೈಮೇಲೆಳದುಕೊಳ್ಳಬೇಡಿ. ಹಿಂದೆ ಮಾಡಿದ ಕೆಲಸದ ಫಲ ಇಂದು ಅನುಭವಿಸಬೇಕಾದೀತು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ.

ಸಿಂಹ: ಕೆಲಸ ಕಾರ್ಯಗಳಲ್ಲಿ ವಿಘ್ನಗಳು ಎದುರಾದರೂ ಅಂತಿಮ ಜಯ ನಿಮ್ಮದಾಗಲಿದೆ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ತಾಳ್ಮೆಯಿರಲಿ.

ಕನ್ಯಾ: ನಿಮ್ಮ ಕನಸಿನ ಯೋಜನೆಗೆ ಚಾಲನೆ ನೀಡಲಿದ್ದೀರಿ. ಮಕ್ಕಳಿಂದ ಸಂತೋಷ ಸಿಗಲಿದೆ. ಬಹಳ ದಿನಗಳ ನಂತರ ಆಪ್ತರ ಭೇಟಿ ಸಂತೋಷ ತರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಚಿಂತೆ ಬೇಡ.

ತುಲಾ: ದೇವತಾ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಉದರ ಸಂಬಂಧೀ ಆರೋಗ್ಯ ಸಮಸ್ಯೆಯಾದೀತು, ಎಚ್ಚರಿಕೆ ಅಗತ್ಯ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ ಸಂಭವ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೃಶ್ಚಿಕ: ವೃತ್ತಿರಂಗದಲ್ಲಿ ನಿಮ್ಮ ಹಿತಶತ್ರುಗಳಿಂದ ಸಮಸ್ಯೆಗಳು ಎದುರಾದೀತು. ಪ್ರಭಾವೀ ವ್ಯಕ್ತಿಗಳ ಸಹಾಯ ಪಡೆಯಲಿದ್ದೀರಿ. ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ತಾಳ್ಮೆಯಿರಲಿ.

ಧನು: ನಿಮ್ಮ ಕೈಯಲ್ಲಿದ್ದುದನ್ನು ಇನ್ನೊಬ್ಬರಿಗೆ ದಾನ ಮಾಡುವ ಸಂತೃಪ್ತಿ ನಿಮ್ಮದಾಗಲಿದೆ. ಸಾಮಾಜಿಕವಾಗಿ ನಿಮ್ಮ ಕೆಲಸ ಕಾರ್ಯಗಳಿಗೆ ಮೆಚ್ಚುಗೆ ಸಿಗಲಿದೆ. ಸಂಗಾತಿಯೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ಕಟ್ಟಡ, ನಿವೇಶನ ಖರೀದಿಗೆ ಯೋಜನೆ ರೂಪಿಸಿದ್ದರೆ ಸೂಕ್ತ ಫಲ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಇಷ್ಟಮಿತ್ರರನ್ನು ಭೇಟಿಯಾಗಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕುಂಭ: ಸರಕಾರಿ ಕೆಲಸಗಳಲ್ಲಿ ಜಯ, ಉನ್ನತಾಧಿಕಾರದ ಯೋಗ. ಕೌಟುಂಬಿಕವಾಗಿ ಹೊಸ ನಿರ್ಧಾರಗಳನ್ನು ಕೈಗೊಳ್ಳುವಾಗ ಸಂಗಾತಿಯೊಂದಿಗೆ ಪರಾಮರ್ಶಿಸಿ. ಹಿರಿಯರಿಗೆ ದೇವತಾ ಕ್ಷೇತ್ರಗಳ ಸಂದರ್ಶನ ಯೋಗ.

ಮೀನ: ಕಾರ್ಯರಂಗದಲ್ಲಿ ಮೇಲಧಿಕಾರಿಗಳ ವಿಶ್ವಾಸ ಗಳಿಸಲಿದ್ದೀರಿ. ಸರಕಾರಿ ಉದ್ಯೋಗಸ್ಥರಿಗೆ ಬಿಡುವಿಲ್ಲದ ಕೆಲಸ. ಮನಸ್ಸಿನಲ್ಲಿ ಕಾಡುವ ಗೊಂದಲಗಳಿಗೆ ಆಪ್ತರ ಸಲಹೆ ಪಡೆಯಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮಂಗಳವಾರ ದೇವಿಯ ಅನುಗ್ರಹಕ್ಕಾಗಿ ನವರತ್ನ ಮಾಲಿಕಾ ಸ್ತೋತ್ರ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments