Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 21 ಆಗಸ್ಟ್ 2022 (06:19 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕೆಲಸದ ವಿಚಾರದಲ್ಲಿ ಕೊಂಚವೂ ರಾಜಿಯಿಲ್ಲದ ನಿಮ್ಮ ಗುಣ ಇತರರ ಮೆಚ್ಚುಗೆಗೆ ಪಾತ್ರವಾಗಲಿದೆ. ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ‍್ಳುವರೋ ಎಂಬ ಕೀಳರಿಮೆ ಬೇಡ. ಈ ಕ್ಷಣದ ಸಂತೋಷವನ್ನು ಅನುಭವಿಸಿ.

ವೃಷಭ: ಕೌಟುಂಬಿಕವಾಗಿ ಅಭಿವೃದ್ಧಿ ನೆಮ್ಮದಿ ಕಂಡುಬರಲಿದೆ. ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಕಂಡುಬರುವುದು. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಆರ್ಥಿಕವಾಗಿ ಧನಗಳಿಕೆಗೆ ನಾನಾ ಮಾರ್ಗಗಳು ಕಂಡುಬರಲಿವೆ.

ಮಿಥುನ: ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ ನಿಮ್ಮದಾಗುವುದು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಕಿರು ಸಂಚಾರ ಮಾಡುವಿರಿ.

ಕರ್ಕಟಕ: ನಿಮ್ಮ ಹಳೆಯ ಮಿತ್ರರನ್ನು ಮತ್ತೆ ಭೇಟಿಯಾಗುವ ಯೋಗ. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಮಹಿಳೆಯಿರಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ.

ಸಿಂಹ: ಬೇರೆಯವರು ನಿಮ್ಮ ಬಗ್ಗೆ ತಪ್ಪು ತಿಳಿದುಕೊಳ‍್ಳುವ ಸಂಭವ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವಿಶೇಷವಾದ ಭೋಜನ ಸವಿಯುವ ಯೋಗ. ನೆಂಟರಿಷ್ಟರ ಆಗಮನ ಸಾಧ‍್ಯತೆ.

ಕನ್ಯಾ: ಕೌಟುಂಬಿಕವಾಗಿ ಸಂತೋಷದಾಯಕವಾಗಿ ಕಾಲ ಕಳೆಯುವ ಯೋಗ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಯೋಗ.

ತುಲಾ: ವಿದ್ಯಾರ್ಥಿಗಳು ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳುವುದು ಉತ್ತಮ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಅವಿವಾಹಿತರಿಗೆ ವಿವಾಹಾದಿ ಸಂಬಂಧಗಳು ಕೂಡಿಬರಲಿವೆ.

ವೃಶ್ಚಿಕ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಹಿಂದೆ ಮಾಡಿದ ತಪ್ಪುಗಳು ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಿ. ಪಾಲು ಬಂಡವಾಳ ಹೂಡಿಕೆ ವ್ಯವಹಾರದಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ಅನಗತ್ಯ ಚಿಂತೆ ಬೇಡ.

ಧನು: ನಿಮ್ಮ ಮಾತುಗಳು ಇತರರಿಗೆ ಅಪಾರ್ಥಕ್ಕೆ ಎಡೆಮಾಡಿ ಕೊಟ್ಟೀತು. ಮಕ್ಕಳ ಜೀವನದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಮುನ್ನಡೆಯಿರಲಿದೆ.

ಮಕರ: ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟವಾಗುವ ಭೀತಿ ಎದುರಾದೀತು. ಕಾರ್ಯರಂಗದಲ್ಲಿ ನಿಮ್ಮ ಕ್ರಿಯಾತ್ಮಕತೆಯಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ಹಿತ ಶತ್ರುಗಳ ಕಾಟದಿಂದ ಮುಕ್ತಿ ಸಿಗುವುದು.

ಕುಂಭ: ಭವಿಷ್ಯದ ಕನಸಿಗೆ ಬುನಾದಿ ಹಾಕಲಿದ್ಧೀರಿ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ‍್ಯತೆ. ಪ್ರೀತಿ ಪಾತ್ರರಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಮನಸ್ಸಿನ ಮಾತು ಕೇಳಿ ನಿರ್ಧಾರ ಮಾಡುವುದು ಉತ್ತಮ. ಪ್ರೀತಿ ಪಾತ್ರರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ