Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 24 ಆಗಸ್ಟ್ 2022 (07:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟಮಿತ್ರರೊಂದಿಗೆ ಸಮಯ ಕಳೆಯುವ ಅವಕಾಶ ಸಿಗುವುದು. ಕಾರ್ಯನಿಮಿತ್ತ ಓಡಾಟ ನಡೆಸಬೇಕಾದೀತು.

ವೃಷಭ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಸ್ವ ಸಾಮರ್ಥ್ಯದಿಂದ ಧನಾರ್ಜನೆಯಾಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ.

ಮಿಥುನ: ಮಾನಸಿಕವಾಗಿ ಕಾಡುತ್ತಿದ್ದ ಗೊಂದಲಗಳಿಗೆ ಉತ್ತರ ಕಂಡುಕೊಳ್ಳಲು ಪ್ರಯತ್ನಿಸಲಿದ್ದೀರಿ. ವಿಶೇಷವಾದ ವ್ಯಕ್ತಿಗಳಿಂದ ನಿಮಗೆ ಸಹಾಯವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ನಿಮ್ಮದಾಗಲಿದೆ.

ಕರ್ಕಟಕ: ರಾಜಕೀಯ ರಂಗದಲ್ಲಿರುವವರಿಗೆ ಉನ್ನತ ಸ್ಥಾನ ಮಾನ ಸಿಗಲಿದೆ. ಉದ್ಯೋಗ, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ಬೇರೆಯವರು ನಿಮ್ಮನ್ನು ಹಗುರವಾಗಿ ಕಾಣಲು ಅವಕಾಶ ಕೊಡಬೇಡಿ. ತಾಳ್ಮೆಯಿರಲಿ.

ಸಿಂಹ: ನಿಮ್ಮಲ್ಲಿರುವ ಹೊಸ ಯೋಚನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಪ್ರೇಮಿಗಳಿಗೆ ಮನಸ್ಸಿನಲ್ಲಿರುವುದನ್ನು ಹೇಳಿಕೊಳ್ಳಲು ಅವಕಾಶ ಸಿಗಲಿದೆ. ಉದ್ದೇಶಿತ ಕೆಲಸಗಳಿಗೆ ಹಣಕಾಸಿನ ಖರ್ಚು ವೆಚ್ಚಗಳು ಕಂಡುಬಂದೀತು.

ಕನ್ಯಾ: ಸಕಾಲದಲ್ಲಿ ಸನ್ಮಿತ್ರರ ಸಹಾಯ ದೊರೆಯುವುದರಿಂದ ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ಸಾಂಸಾರಿಕವಾಗಿ ನೆಮ್ಮದಿ ಕಂಡುಕೊಳ್ಳಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ತುಲಾ: ನಿಮ್ಮ ಕಾರ್ಯಸಾಧನೆಗಾಗಿ ವಾಕ್ಚತುರತೆಯಿಂದ ವ್ಯವಹರಿಸಬೇಕು. ಹೊಸದಾಗಿ ಉದ್ದಿಮೆ ಆರಂಭಿಸಲು ಇದು ಸಕಾಲ. ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆ ಉಂಟಾದೀತು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ಮಕ್ಕಳ ವಿಚಾರದಲ್ಲಿ ಹೊಸ ನಿರ್ಧಾರಗಳನ್ನು ಕೈಗೊಳ್ಳಲಿದ್ದೀರಿ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ್ಯತೆಯಿದ್ದು, ಖರ್ಚು ವೆಚ್ಚಗಳು ಹೆಚ್ಚಾದೀತು. ದೂರದ ವ್ಯವಹಾರಗಳಿಂದ ಆದಾಯ ವೃದ್ಧಿಯಾಗಲಿದೆ.

ಧನು: ದೈವಾನುಗ್ರಹದಿಂದ ಇಂದು ನೀವು ಕೈಗೊಳ್ಳಲಿರುವ ಕಾರ್ಯಗಳು ಸಫಲವಾಗಲಿದೆ. ದೀರ್ಘ ಪ್ರಯಾಣದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ.

ಮಕರ: ನಿಮ್ಮದಲ್ಲದ ತಪ್ಪಿಗೆ ತೊಂದರೆ ಅನುಭವಿಸುವ ಪರಿಸ್ಥಿತಿ ಬರಬಹುದು. ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟವಾಗುವ ಭೀತಿ ಎದುರಾಗಲಿದೆ. ಸ್ವ ಸಾಮರ್ಥ್ಯದಿಂದ ಏಳಿಗೆ ಕಂಡುಬರಲಿದೆ. ಅನಗತ್ಯ ಚಿಂತೆ ಬೇಡ.

ಕುಂಭ: ಸರಕಾರೀ ಉದ್ಯೋಗಸ್ಥರಿಗೆ ಉನ್ನತ ಸ್ಥಾನ ಮಾನದ ಯೋಗ. ಆರ್ಥಿಕವಾಗಿ ಬಲ ವರ್ಧನೆಯಾಗಲಿದೆ. ಕಟ್ಟಡ ಕಾಮಗಾರಿ ಕೆಲಸಗಳಲ್ಲಿ ಪ್ರತಿ ಕಂಡುಬರಲಿದೆ. ಮಹಿಳೆಯರಿಗೆ ಮಕ್ಕಳಿಂದ ಸಂತೋಷ ಸಿಗುವುದು.

ಮೀನ: ಏನೇ ತಾಪತ್ರಯಗಳಿದ್ದರೂ ನಿಮ್ಮ ಕಾರ್ಯಸಾಧನೆ ಮಾಡಲು ಪ್ರಯತ್ನ ಮುಂದುವರಿಸಲಿದ್ದೀರಿ. ಕೋರ್ಟು ಕಚೇರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರು ಗ್ರಹ ದೋಷ ನಿವಾರಣೆಗೆ ಏನು ಮಾಡಬೇಕು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಕ್ಕಳಿಗೆ ವಿದ್ಯೆ ತಲೆಗೆ ಹತ್ತದಿರಲು ಯಾವ ದೋಷ ಕಾರಣ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಮುಂಭಾಗದಲ್ಲಿ ಈ ಕೆಲವು ಗಿಡಗಳಿದ್ದರೆ ದರಿದ್ರ ತಪ್ಪಿದ್ದಲ್ಲ

ಮುಂದಿನ ಸುದ್ದಿ
Show comments