ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 29 ಆಗಸ್ಟ್ 2022 (07:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನೂತನ ಮಿತ್ರರ ಸಮಾಗವಾಗಲಿದ್ದು, ಮಾನಸಿಕವಾಗಿ ಸಂತೋಷ ಸಿಗುವುದು. ವ್ಯಾಪಾರ, ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಕೂಡಿಟ್ಟ ಧನ ಸಂಪತ್ತು ಅನಿವಾರ್ಯ ಕಾರಣಗಳಿಗೆ ಖರ್ಚಾಗಲಿದೆ.

ವೃಷಭ: ನಿಮ್ಮ ಮನೋಭಾವ, ಧೋರಣೆ ಕೆಲವರಿಗೆ ಇಷ್ಟವಾಗದೇ ಇರಬಹುದು. ಆದರೆ ಯಾವುದಕ್ಕೂ ತಲೆಕೆಡಿಸಿಕೊಳ್ಳುವ ಗುಣ ನಿಮ್ಮದಲ್ಲ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ತಲ್ಲೀನತೆ ಹೆಚ್ಚಾಗುವುದು. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಸಾಮಾಜಿಕವಾಗಿ ಗೌರವ ಸಂಪಾದಿಸುವ ಯೋಗ ನಿಮ್ಮದಾಗುವುದು. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಸಾಕು ಪ್ರಾಣಿಗಳಿಂದ ತೊಂದರೆಯಾಗುವ ಸಂಭವ. ವಾಹನ ಸಂಚಾರ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ನಿತ್ಯ ಕರ್ಮಗಳಿಗೆ ಕೊಂಚ ಅಡೆತಡೆಗಳು ಬಂದೀತು. ಮಾನಸಿಕವಾಗಿ ಕಾಡುತ್ತಿದ್ದ ಸಮಸ್ಯೆಗಳಿಗೆ ಆಪ್ತರಿಂದ ಪರಿಹಾರ ಕಂಡುಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಸಿಂಹ: ನಿಮ್ಮ ಇದಮಿತ್ತಂ ಎನ್ನುವ ನಿರ್ಧಾರಗಳು ಕುಟುಂಬ ಸದಸ್ಯರ ಅಸಮಾಧಾನಕ್ಕೆ ಕಾರಣವಾದೀತು. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರಲಿದೆ. ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಿ.

ಕನ್ಯಾ: ಕುಟುಂಬಸ್ಥರ ಅಭಿಪ್ರಾಯಗಳಿಗೆ ಬೆಲೆಕೊಟ್ಟು ನಿರ್ಧಾರ ತೆಗೆದುಕೊಳ್ಳುವುದು ಸೂಕ್ತ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರುವುದು. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಹೊಣೆಗಾರಿಕೆ ಹೆಗಲಿಗೇರಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ತಾಳ್ಮೆಯಿರಲಿ.

ವೃಶ್ಚಿಕ: ಯಾವುದೇ ವಿಚಾರವನ್ನೂ ಕಾರ್ಯರೂಪಕ್ಕೆ ತರದೇ ಮನಸ್ಸಿಗೆ ನೆಮ್ಮದಿಯಾಗದು. ಸಂಗಾತಿಯೊಂದಿಗೆ ಪರಾಮರ್ಶಿಸಿ ಮುನ್ನಡೆಯುವುದು ಉತ್ತಮ. ಹಿರಿಯರಿಗೆ ಪುಣ್ಯ ಕ್ಷೇತ್ರಗಳಿಗೆ ಭೇಟಿ ಕೊಡುವ ಭಾಗ್ಯ.

ಧನು: ಯಾವುದೇ ಕೆಲಸಕ್ಕೆ ಕೈ ಹಾಕುವ ಮೊದಲೇ ಸೋಲು ಒಪ್ಪಿಕೊಳ್ಳುವಂತಾಗುವಿರಿ. ಮಕ್ಕಳ ವಿಚಾರದಲ್ಲಿ ಅನಗತ್ಯ ತಲೆಕೆಡಿಸಿಕೊಳ್ಳುವುದು ಬೇಡ. ಇಷ್ಟಮಿತ್ರರ ಭೇಟಿಯಾಗಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಮಕರ: ಬಹುದಿನಗಳಿಂದ ನಿಮ್ಮನ್ನು ಕಾಡುತ್ತಿದ್ದ ದೇಹಾರೋಗ್ಯದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ಧೀರಿ. ವ್ಯಾಪಾರೀ ವರ್ಗದವರು ಸಾಲಗಳಿಂದ ಮುಕ್ತರಾಗಲಿದ್ದಾರೆ.

ಕುಂಭ: ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ವ್ಯವಹಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ಸನ್ಮಿತ್ರರ ಸಹಕಾರ ಕಂಡುಬರಲಿದೆ. ಗುರುಹಿರಿಯರ ಸಲಹೆಗಳು ಉಪಯೋಗಕ್ಕೆ ಬರಲಿವೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಸಕಾಲದಲ್ಲಿ ಸಿಗುವ ನೆರವಿನಿಂದ ಸಂಭಾವ್ಯ ಅಪಾಯಗಳಿಂದ ಪಾರಾಗಲಿದ್ದೀರಿ. ಸಾಂಸಾರಿಕವಾಗಿ ಮಧ‍್ಯಮ ಸುಖ ಕಂಡುಬರುವುದು. ಪಾಲುದಾರಿಕೆ ಕ್ಷೇತ್ರದಲ್ಲಿ ದುಡುಕಿನ ನಿರ್ಧಾರ ಮಾಡಬೇಡಿ. ಕಿರು ಸಂಚಾರ ಮಾಡುವಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಬುಧವಾರ ಗಣೇಶನ ಅನುಗ್ರಹಕ್ಕೆ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments