Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 30 ಆಗಸ್ಟ್ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅಭಿವೃದ್ಧಿ  ವಿಚಾರಗಳಲ್ಲಿ ಹಠವಾದೀ ಮನೋಭಾವ ಬಿಟ್ಟು ಕೆಲಸ ಮಾಡಬೇಕಾಗುತ್ತದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಮನೆ ವಿಚಾರಕ್ಕೆ ಮೂರನೆಯವರು ತಲೆ ಹಾಕಲು ಅವಕಾಶ ಕೊಡಬೇಡಿ.

ವೃಷಭ: ನೀವು ಇದುವರೆಗೆ ಹೇಳದೇ ಉಳಿದಿದ್ದ ಗುಟ್ಟೊಂದು ಆಪ್ತರ ಎದುರು ಬಯಲಾಗಲಿದೆ. ಕಾರ್ಯಕ್ಷೇತ್ರದಲ್ಲಿ ಅಧಿಕ ಓಡಾಟ ನಡೆಸಬೇಕಾದೀತು. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದಿನದಂತ್ಯಕ್ಕೆ ನೆಮ್ಮದಿ.

ಮಿಥುನ: ಎಷ್ಟೇ ತೊಂದರೆಗಳಿದ್ದರೂ ಕುಟುಂಬ ಸದಸ್ಯರ ಸಹಕಾರವಿರುವುದರಿಂದ ಆತ್ಮವಿಶ್ವಾಸ ಬರುವುದು. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ಕರ್ಕಟಕ: ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪರವೂರಿಗೆ ಪ್ರಯಾಣ ಬೆಳೆಸುವ ಅನಿವಾರ್ಯತೆ ಎದುರಾಗಲಿದೆ. ಕುಟುಂಬ ಸದಸ್ಯರ ಪ್ರೋತ್ಸಾಹ, ಸಹಕಾರ ಸಿಗಲಿದೆ. ಹಿರಿಯರು ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ.

ಸಿಂಹ: ಮಹಿಳೆಯರಿಗೆ ಅಡುಗೆ ಮನೆ ಕೆಲಸದ ನಡುವೆ ಸಣ್ಣ ಪುಟ್ಟ ಅಪಘಾತಗಳಾದೀತು. ಉದ್ಯೋಗ ಕ್ಷೇತ್ರದಲ್ಲಿ ಮೇಲ್ವರ್ಗದ ಅಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ.

ಕನ್ಯಾ: ನಿಮ್ಮ ಕೈಲಾಗದು ಎಂದುಕೊಂಡಿದ್ದ ಕೆಲಸ ಇಂದು ಸುಗಮವಾಗಿ ನೆರವೇರಿದ ಖುಷಿ ನಿಮ್ಮದಾಗುವುದು. ಯಂತ್ರೋಪಕರಣಗಳ ರಿಪೇರಿ ಕೆಲಸಗಳಿಗಾಗಿ ಖರ್ಚು ವೆಚ್ಚಗಳಾದೀತು. ಅನಗತ್ಯ ಚಿಂತೆ ಬೇಡ.

ತುಲಾ: ನಿಮ್ಮಲ್ಲಿರುವ ಸುಪ್ತ ಪ್ರತಿಭೆಗಳು ಅನಾವರಣಗೊಳ್ಳಲಿದೆ. ಕಲೆ, ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹಾಯಾಸವಾದೀತು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ವೃಶ್ಚಿಕ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ದೂರದ ಮಿತ್ರರ ಸಮಾಗಮವಾಗಲಿದೆ. ಹಣಕಾಸಿನ ಆದಾಯಕ್ಕೆ ತೊಂದರೆಯಾಗದು. ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬರಲಿದೆ.

ಧನು: ಮನಸ್ಸಿನಲ್ಲಿರುವ ಯೋಚನೆಗಳು ಚಿಂತೆಗೆ ಕಾರಣವಾದೀತು. ಸಂಗಾತಿಯೊಂದಿಗೆ ಸಮಾಲೋಚನೆ ನಡೆಸಿ. ಮಕ್ಕಳ ವಿಚಾರದಲ್ಲಿ ಸಂತೋಷದ ವಾರ್ತೆ ಕೇಳಿಬರುವುದು. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಚಿಂತೆ ಬೇಡ.

ಮಕರ: ಕಚೇರಿ ಕೆಲಸಗಳ ನಿಮಿತ್ತ ಓಡಾಟ ನಡೆಸಬೇಕಾದೀತು. ಮಹಿಳೆಯರಿಗೆ ಮಂಗಲ ವಸ್ತ್ರ ಖರೀದಿ ಯೋಗ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದುಂದು ವೆಚ್ಚಗಳಿಗೆ ಕಡಿವಾಣವಿರಲಿ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಹೊಸ ಅಭಿವೃದ್ಧಿ ಕೆಲಸಗಳಿಗೆ ಕೈಹಾಕಲು ಇದು ಸಕಾಲ. ಇಷ್ಟಮಿತ್ರರನ್ನು ಬಹಳ ದಿನಗಳ ನಂತರ ಭೇಟಿಯಾದ ಸಂತೋಷ ಸಿಗಲಿದೆ. ಪ್ರೇಮಿಗಳ ಪಾಲಿಗೆ ಶುಭ ದಿನವಾಗಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಮೀನ: ನಿಮ್ಮ ಬಗ್ಗೆ ಪ್ರೀತಿ, ಕಾಳಜಿ ಮಾಡುವವರ ಮನಸ್ಸಿಗೆ ನೋವುಂಟು ಮಾಡುವ ಕೆಲಸ ಮಾಡಬೇಡಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ

Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments