Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 9 ಸೆಪ್ಟಂಬರ್ 2022 (07:44 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅನಗತ್ಯ  ವಿಚಾರಗಳ ಬಗ್ಗೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ಆರ್ಥಿಕವಾಗಿ ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಆಪ್ತರ ಕಷ್ಟಗಳಲ್ಲಿ ಸಹಭಾಗಿಯಾಗಲಿದ್ದೀರಿ. ತಾಳ್ಮೆಯಿರಲಿ.

ವೃಷಭ: ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಗುರುಹಿರಿಯರ ಸಲಹೆ ಪಡೆದು ಮುನ್ನಡೆಯಿರಿ. ಎಷ್ಟೋ ದಿನದಿಂದ ಬಾಕಿಯಿದ್ದ ಹಣ ಸಂದಾಯವಾಗಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.

ಮಿಥುನ: ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲು ಅವಕಾಶ ಸಿಗಲಿದೆ. ವ್ಯವಹಾರದಲ್ಲಿ ನಿಮಗೆ ಎದುರಾಳಿಯಾಗಿದ್ದವರಿಂದ ಪೈಪೋಟಿಗಳು ಎದುರಾದೀತು. ಕೌಟುಂಬಿಕವಾಗಿ ನೆಮ್ಮದಿ ಕಂಡುಬರಲಿದೆ.

ಕರ್ಕಟಕ: ಯಾವುದೇ ಕೆಲಸ ಮಾಡುವುದಕ್ಕೂ ಮುನ್ನ ಸಾಕಷ್ಟು ಪರಾಮರ್ಶೆ ನಡೆಸಿ ಮುನ್ನಡೆಯುವುದು ಉತ್ತಮ. ಮೇಲಧಿಕಾರಿಗಳಿಂದ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಕಿರು ಸಂಚಾರ ಮಾಡಬೇಕಾಗುತ್ತದೆ.

ಸಿಂಹ: ನಿಮ್ಮಿಂದ ಹಿಂದೆ ಸಹಾಯ ಪಡೆದವರಿಂದ ಇಂದು ನಿಮಗೆ ಪ್ರತ್ಯುಪಕಾರವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ಅವಕಾಶ ಸಿಗಲಿದೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕನ್ಯಾ: ಮನಸ್ಸಿನಲ್ಲಿರುವ ಮಾತುಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಪ್ರೇಮಿಗಳಿಗೆ ಶುಭ ದಿನವಾಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಚಿಂತೆಯಾದೀತು. ಹಿರಿಯರಿಂದ ಸಮಾಧಾನದ ಮಾತು ಸಿಗಲಿದೆ. ಚಿಂತೆ ಬೇಡ.

ತುಲಾ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ಕ್ರಿಯಾತ್ಮಕ ಕೆಲಸಗಳಿಂದ ಇತರರ ಮೆಚ್ಚುಗೆಗೆ ವ್ಯಕ್ತವಾಗಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ಸುಧಾರಣೆಯಾಗಲಿದೆ. ದಿನದಂತ್ಯಕ್ಕೆ ನೆಮ್ಮದಿ.

ವೃಶ್ಚಿಕ: ಮಾತಿನಲ್ಲೇ ಇತರರಿಗೆ ಮೋಡಿ ಮಾಡಲಿದ್ದೀರಿ. ಕಾರ್ಯರಂಗದಲ್ಲಿ ಭಿನ್ನಾಬಿಪ್ರಾಯಕ್ಕೆ ದಾರಿ ಮಾಡಿಕೊಡಬೇಡಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಕೌಟುಂಬಿಕವಾಗಿ ಅತಿಥಿಗಳ ಆಗಮನಕ್ಕೆ ಸಿದ್ಧರಾಗಿ.

ಧನು: ಕುಟುಂಬ ವಿಚಾರದಲ್ಲಿ ಸಂಗಾತಿಯ ಸಲಹೆ ಪಡೆದೇ ಹೊಸ ನಿರ್ಧಾರ ತೆಗೆದುಕೊಳ್ಳುವುದು ಸೂಕ್ತ. ಮಕ್ಕಳಿಗೆ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಅನಗತ್ಯವಾಗಿ ಸಾಲದ ಕೂಪಕ್ಕೆ ಬೀಳಬೇಡಿ. ತಾಳ್ಮೆಯಿರಲಿ.

ಮಕರ: ಹಿರಿಯರಿಗೆ ಸಾಮಾಜಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕಾರ್ಯರಂಗದಲ್ಲಿ ಎಷ್ಟೇ ಒತ್ತಡವಿದ್ದರೂ ನಿಮ್ಮ ಕೆಲಸ ಸಾಧನೆ ಮಾಡಿಕೊಳ್ಳಲಿದ್ದೀರಿ. ಕೆಳ ಹಂತದ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ ಸಂಭವ.

ಕುಂಭ: ಎಷ್ಟೇ ಕಾರ್ಯದೊತ್ತಡವಿದ್ದರೂ ಕುಟುಂಬಕ್ಕಾಗಿ ಸಮಯ ಮೀಸಲಿಡುವುದನ್ನು ಮರೆಯಬೇಡಿ. ಸರಕಾರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಕಿರು ಸಂಚಾರ ಮಾಡಲಿದ್ದೀರಿ.

ಮೀನ: ಹಿಂದೆ ಮಾಡಿದ ತಪ್ಪುಗಳನ್ನು ನೆನೆದು ಪಶ್ಚಾತ್ತಾಪಪಡುವುದರಲ್ಲಿ ಅರ್ಥವಿಲ್ಲ. ಸಂಗಾತಿಯ ಸಾಂತ್ವನ ಮನಸ್ಸಿಗೆ ನೆಮ್ಮದಿ ಕೊಡಲಿದೆ. ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ. ಸ್ವಯಂ ವೃತ್ತಿಯವರಿಗೆ ಮುನ್ನಡೆಯ ಯೋಗ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

Shani Mantra: ಶನಿ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ಇಂದು ತಪ್ಪದೇ ಓದಿ

Lucky number: ಹುಟ್ಟಿದ ದಿನಾಂಕಕ್ಕೆ ಅನುಸಾರವಾಗಿ ನಿಮ್ಮ ಅದೃಷ್ಟ ಸಂಖ್ಯೆ ಲೆಕ್ಕ ಹಾಕುವುದು ಹೇಗೆ ನೋಡಿ

ಮುಂದಿನ ಸುದ್ದಿ
Show comments