Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 14 ಸೆಪ್ಟಂಬರ್ 2022 (07:42 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಧಾರ್ಮಿಕ ಚಟುವಟಿಕೆಗಳ ನೇತೃತ್ವ ವಹಿಸಿಕೊಳ್ಳಲಿದ್ದೀರಿ. ಹಲವು ವಿಚಾರಗಳು ನಿಮ್ಮ ಮನಸ್ಸು ಕೊರೆಯುತ್ತಿದ್ದು, ದೈನಂದಿನ ಕೆಲಸಗಳಿಗೆ ಅಡ್ಡಿಯಾಗಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ತಾಳ್ಮೆಯಿರಲಿ.

ವೃಷಭ: ಕೌಟುಂಬಿವಕಾಗಿ ಹೊಸ ಜವಾಬ್ಧಾರಿಗಳನ್ನು ಹೆಗಲಿಗೇರಿಸಿಕೊಳ್ಳಬೇಕಾಗುತ್ತದೆ. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ನಿಮ್ಮ ಮೆಚ್ಚಿನ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಮನಸ್ಸಿಗೆ ಹತ್ತಿರವಾದವರ ಬಳಿ ನಿಮ್ಮ ಮನದಾಳ ಬಿಚ್ಚಿಡಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಆರೋಗ್ಯದಲ್ಲಿ ಚೇತರಿಕೆಯಾಗಲಿದೆ.

ಕರ್ಕಟಕ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಒಳಿತಾಗಲಿದೆ. ವ್ಯಾಪಾರೀ ವರ್ಗದವರಿಗೆ ಹಿತ ಶತ್ರಗುಳಿಂದ ತೊಂದರೆ ಸಾಧ್ಯತೆ.

ಸಿಂಹ: ಗುರುಹಿರಿಯರ ಆಶೀರ್ವಾದದೊಂದಿಗೆ ನಿಮ್ಮ ಕೆಲಸ ಕಾರ್ಯ ನೆರವೇರಿಸಲಿದ್ದೀರಿ. ತಾಂತ್ರಿಕ ಕೆಲಸದಲ್ಲಿರುವವರಿಗೆ ಮುನ್ನಡೆ ಕಂಡುಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಚಿಂತೆ ಬೇಡ.

ಕನ್ಯಾ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಗೃಹ, ವಾಹನಾದಿ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ. ದೀರ್ಘ ಪ್ರಯಾಣದಿಂದ ದೇಹಾಯಾಸವಾದೀತು. ಇಷ್ಟಮಿತ್ರರ ಭೇಟಿಯಾಗುವ ಯೋಗ.

ತುಲಾ: ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಖರ್ಚು ಮಾಡುವುದು ಉತ್ತಮ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ವೃಶ್ಚಿಕ: ವ್ಯಾಪಾರೀ ವರ್ಗದವರಿಗೆ ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಮಾನ ವೃದ್ಧಿಯಾಗಲಿದೆ. ಸಹೋದ್ಯೋಗಿಗಳಿಂದ ಸಹಕಾರ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ನಿಮ್ಮ ಕೆಲವೊಂದು ಮಾತುಗಳು ಸಂಗಾತಿಯ ಮನಸ್ಸಿಗೆ ನೋವುಂಟು ಮಾಡೀತು. ಕಾರ್ಯಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಿ. ವ್ಯವಸಾಯದಲ್ಲಿ ತೊಡಗಿಸಿಕೊಂಡವರಿಗೆ ಮುನ್ನಡೆಯ ಯೋಗ. ತಾಳ್ಮೆಯಿರಲಿ.

ಮಕರ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬಂದೀತು. ಕ್ರಿಯಾತ್ಮಕ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಕ್ಕಾಗಿ ಕೆಲವು ದಿನ ಕಾಯುವುದು ಉತ್ತಮ.

ಕುಂಭ: ಕಾರ್ಯರಂಗದಲ್ಲಿ ಶತ್ರುಪೀಡೆ ನಾಶವಾಗಲಿದೆ. ಕೌಟುಂಬಿಕವಾಗಿ ಸುಖ, ಸಮೃದ್ಧಿಯಿರಲಿದೆ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಪರವೂರಿಗೆ ಸಂಚರಿಸಬೇಕಾದೀತು.

ಮೀನ: ಬಹಳ ದಿನಗಳಿಂದ ಮಾಡಬೇಕೆಂದುಕೊಂಡಿದ್ದ ಕೆಲಸ ಕಾರ್ಯಗಳನ್ನು ಪೂರ್ತಿ ಮಾಡಲಿದ್ದೀರಿ. ಸಂಗಾತಿಯ ಪ್ರೀತ್ಯಾದರಗಳಿಗೆ ಪಾತ್ರರಾಗಲಿದ್ದೀರಿ. ನಿರುದ್ಯೋಗಿಗಳಿಗೆ ಕನಸಿನ ಉದ್ಯೋಗ ಶೀಘ್ರದಲ್ಲೇ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments