Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 26 ಸೆಪ್ಟಂಬರ್ 2022 (07:25 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮಗೆ ವಂಚನೆ ಮಾಡಿದವರಿಗೆ ತಕ್ಕ ಏಟು ಕೊಡುವ ಪ್ರತೀಕಾರದ ಮನೋಭಾವ ನಿಮ್ಮಲ್ಲಿ ಬೆಳೆಯಲಿದೆ. ಸಂಗಾತಿಯ ಹಿತವಚನಗಳಿಗೆ ಕಿವಿಗೊಡುವುದು ಉತ್ತಮ. ವಿದ್ಯಾರ್ಥಿಗಳಿಗೆ ಮುನ್ನಡೆ ಕಂಡುಬರಲಿದೆ.

ವೃಷಭ: ಉದ್ಯೋಗಸ್ಥ ಮಹಿಳೆಯರಿಗೆ ಮುಂಬಡ್ತಿಯ ಕನಸಿಗೆ ಅಡ್ಡಿ ಆತಂಕಗಳು ಎದುರಾಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ವಿಶೇಷ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ. ಅನ್ಯರ ವಿಚಾರಗಳಿಗೆ ಅನಗತ್ಯವಾಗಿ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರ. ಪ್ರೀತಿ ಪಾತ್ರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ.

ಕರ್ಕಟಕ: ನಿಮ್ಮಲ್ಲಿರುವ ವಿಶೇಷ ಗುಣಗಳು ಇತರರ ಗಮನ ಸೆಳೆಯಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಸಾಕು ಪ್ರಾಣಿಗಳಿಂದ ತೊಂದರೆ ಎದುರಾದೀತು. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ.

ಸಿಂಹ: ನಿಮ್ಮ ಇಷ್ಟಾನುಸಾರ ನಿರ್ಧಾರ ತೆಗೆದುಕೊಳ್ಳಲು ಹೋದರೆ ಕುಟುಂಬ ಸದಸ್ಯರ ಕೋಪಕ್ಕೆ ಗುರಿಯಾಗಬೇಕಾದೀತು. ಪ್ರೇಮಿಗಳು ಮನದಾಳ ಹಂಚಿಕೊಳ್ಳಲಿದ್ದೀರಿ. ಬ್ಯಾಂಕ್ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರುವುದು.

ಕನ್ಯಾ: ಎಷ್ಟೇ ಪರಿಶ್ರಮ ಪಟ್ಟರೂ ಅದಕ್ಕೆ ತಕ್ಕ ಫಲ ಸಿಗುತ್ತಿಲ್ಲ ಎಂಬ ಬೇಸರ ಕಾಡಲಿದೆ. ಬ್ಯಾಂಕ್ ಲೋನ್ ಗಳನ್ನು ತೀರಿಸುವ ಚಿಂತೆ ಕಾಡೀತು. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ತಾಳ್ಮೆಯಿರಲಿ.

ತುಲಾ: ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ. ಶಯನ ಸುಖಕ್ಕೆ ಕೊರತೆಯಿರದು. ಚಿಂತೆ ಬೇಡ.

ವೃಶ್ಚಿಕ: ಮನಸ್ಸಿನಲ್ಲಿ ಅಂದುಕೊಂಡಂತೇ ಎಲ್ಲವೂ ಆಗದು ಎಂಬುದನ್ನು ಅರ್ಥ ಮಾಡಿಕೊಳ್ಳಲಿದ್ಧೀರಿ. ವಾಹನ ಖರೀದಿ ಯೋಗ ಕೂಡಿಬರಲಿದೆ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿರಲಿ. ಅಪರಿಚಿತರಿಂದಲೂ ಸಹಾಯವಾಗಲಿದೆ.

ಧನು: ಹೊಸದಾಗಿ ಆರಂಭಿಸಿದ್ದ ಉದ್ದಿಮೆ ಕೈ ಹಿಡಿಯಲಿದೆ. ಸಂಗಾತಿಯ ಪ್ರೀತಿಗೆ ಪಾತ್ರರಾಗಲಿದ್ದೀರಿ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರುವುದು. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಆರೋಗ್ಯದಲ್ಲಿ ಚೇತರಿಕೆ.

ಮಕರ: ಕೌಟುಂಬಿಕವಾಗಿ ಕೆಲವು ಆತಂಕಕ್ಕೆ ಎಡೆ ಮಾಡಿಕೊಡುವಂತಹ ವಾರ್ತೆ ಕೇಳಿಬಂದೀತು. ಧಾರ್ಮಿಕ ಕಾರ್ಯಗಳ ನೇತೃತ್ವ ವಹಿಸಲಿದ್ದೀರಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಯೋಜನೆಗಳು ಹೊಳೆಯಲಿವೆ.

ಕುಂಭ: ಕೆಳ ಹಂತದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾದೀತು. ಕ್ರಿಯಾತ್ಮಕವಾಗಿ ಯೋಚಿಸಬೇಕಾಗುತ್ತದೆ. ವೈದ್ಯ ವೃತ್ತಿಯಲ್ಲಿರುವವರಿಗೆ ಕಾರ್ಯದೊತ್ತಡ ಹೆಚ್ಚಲಿದೆ. ತಾಳ್ಮೆಯಿರಲಿ.

ಮೀನ: ದೈವಾನುಗ್ರಹದಿಂದ ಇಂದು ನೀವು ಕೈಗೊಳ್ಳುವ ಕೆಲಸಗಳು ಯಶಸ್ವಿಯಾಗಲಿದೆ. ವ್ಯಾವಹಾರಿಕವಾಗಿ ಲಾಭ ಮಾಡಿಕೊಳ್ಳಲಿದ್ದೀರಿ. ದೂರದ ಮಿತ್ರರಿಂದ ಸಹಾಯವಾಗಲಿದೆ. ಇಷ್ಟ ಭೋಜನ ಮಾಡುವ ಯೋಗ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದುರ್ಗಾ ಚಾಲೀಸಾ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಅಕಾಲ ಮೃತ್ಯುಭಯ ಕಾಡುತ್ತಿದ್ದರೆ ಈ ಮಂತ್ರವನ್ನು ಜಪಿಸಿ

ಲಲಿತಾ ಪಂಚರತ್ನ ಸ್ತೋತ್ರ ತಪ್ಪದೇ ಓದಿ

ಇಂದು ಎಲ್ಲೆಲ್ಲೂ ವರಮಹಾಲಕ್ಷ್ಮಿ ಪೂಜೆ ಸಂಭ್ರಮ: ಈ ವೃತಾಚರಣೆಯಿಂದ ವಿಶೇಷ ಫಲ ಪ್ರಾಪ್ತಿ

ವರಮಹಾಲಕ್ಷ್ಮಿ ಹಬ್ಬದ ದಿನ ಹೇಳಬೇಕಾದ ಲಕ್ಷ್ಮೀ ಮಂತ್ರ

ಮುಂದಿನ ಸುದ್ದಿ
Show comments