Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 30 ಸೆಪ್ಟಂಬರ್ 2022 (07:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವ್ಯವಸ್ಥಿತವಾದ ಯೋಜನೆ ಮಾಡುವುದರ ಮೂಲಕ ಭವಿಷ್ಯಕ್ಕೆ ಭದ್ರ ಅಡಿಪಾಯ ಹಾಕಲಿದ್ದೀರಿ. ಸಾಂಸಾರಿಕವಾಗಿ ಪ್ರೀತಿ ಪಾತ್ರರ ಭೇಟಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಹಣಕಾಸಿನ ವಿಚಾರದಲ್ಲಿ ಕಿರಿ ಕಿರಿಯಾದೀತು.

ವೃಷಭ: ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ನೇತೃತ್ವ ವಹಿಸಲಿದ್ದೀರಿ. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಅಂದುಕೊಂಡಂತೇ ಕೆಲಸಗಳು ಸಾಗಲಿದ್ದು, ಮನಸ್ಸಿಗೆ ನೆಮ್ಮದಿಯಾಗಲಿದೆ. ಹೊಸ ಕೆಲಸಗಳನ್ನು ಆರಂಭಿಸಲು ಇದು ಸಕಾಲ. ಕೌಟುಂಬಿಕವಾಗಿ ಪರಸ್ಪರ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ತಾಳ್ಮೆಯಿರಲಿ.

ಕರ್ಕಟಕ: ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲು ಇದು ಸಕಾಲ. ಕಾರ್ಯನಿಮಿತ್ತ ಮೇಲಧಿಕಾರಿಗಳ ಕೃಪಾಕಟಾಕ್ಷ ಪಡೆಯಲು ಪ್ರಯತ್ನಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಸಿಂಹ: ಹೆತ್ತವರ ಪ್ರೋತ್ಸಾಹ ನಿಮ್ಮ ಜೊತೆಗಿರಲಿದ್ದು, ಹೊಸ ಕೆಲಸಗಳಲ್ಲಿ ಯಶಸ್ಸು ಪಡೆಯಲಿದ್ದೀರಿ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ಕೊಡಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಮುನ್ನಡೆ ಕಂಡುಬರಲಿದೆ.

ಕನ್ಯಾ: ಉದ್ಯೋಗ ನಿಮಿತ್ತ ಪರವೂರಿಗೆ ಸಂಚರಿಸುವ ಅನಿವಾರ್ಯತೆ ಎದುರಾಗಲಿದೆ. ಕಾರ್ಯನಿರ್ವಹಣೆ ವಿಚಾರದಲ್ಲಿ ನಿಮ್ಮನ್ನು ಮೀರಿಸಲು ಯಾರಿಂದಲೂ ಆಗದು. ಸಂಗಾತಿಯ ಪ್ರೀತ್ಯಾದರಗಳಿಗೆ ಕಾರಣರಾಗಲಿದ್ದೀರಿ.

ತುಲಾ: ನೀವು ಮಾಡುವ ಕೆಲಸಗಳಿಗೆ ಪ್ರಶಂಸೆ ಸಿಗಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ದರಾಗಬೇಕಾಗುದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ವೃಶ್ಚಿಕ: ಕಾರ್ಯರಂಗದಲ್ಲಿ ಹೊಸ ಮಿತ್ರತ್ವ ಗಳಿಸಲಿದ್ದೀರಿ. ನಿಮ್ಮ ಸಂಪಾದನೆಗೆ ಒಂದು ದಾರಿಯಾದರೆ ಖರ್ಚಿಗೆ ನೂರು ದಾರಿಯಾಗಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆಯಿರಲಿ. ಅನಗತ್ಯ ವಿಚಾರಗಳಿಗೆ ವಾದ ಮಾಡಲು ಹೋಗಬೇಡಿ.

ಧನು: ಸಣ್ಣ ಪುಟ್ಟ ವಿಚಾರಗಳಿಗೆ ಸಂಗಾತಿಯೊಂದಿಗೆ ಮನಸ್ತಾಪವಾದೀತು. ಆಪ್ತೇಷ್ಟರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿಸಿದ ಫಲಿತಾಂಶ ಸಿಗಲಿದೆ. ಕಲೆ, ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಪ್ರೋತ್ಸಾಹ ಕಂಡುಬರಲಿದೆ.

ಮಕರ: ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ಸಂಗಾತಿಯ ಸಹಕಾರ ಸಿಗಲಿದೆ. ಮಕ್ಕಳ ವಿಚಾರದಲ್ಲಿ ಅನಾದರಣೆ ಬೇಡ. ಕ್ರಯ-ವಿಕ್ರಯ ವ್ಯವಹಾರಗಳಲ್ಲಿ ಲಾಭ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಕುಂಭ: ಆಸ್ತಿ ವಿಚಾರದಲ್ಲಿ ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳಾಗುವ ಸಾಧ್ಯತೆ. ಮಾತಿನ ಮೇಲೆ ನಿಗಾ ಇರಲಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಕಿರು ಸಂಚಾರ ಮಾಡುವಿರಿ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತ ಬದಲಾವಣೆಗಳಿಗೆ ಹೊಂದಿಕೊಳ್ಳುವುದು ಕಷ್ಟವೆನಿಸೀತು. ಮನಸ್ಸಿನ ದುಃಖವನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಜಾಗ್ರತೆಯಿರಲಿ. ದಿನದಂತ್ಯಕ್ಕೆ ನೆಮ್ಮದಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ಪಂಚಾಂಗ ತಿಳಿಯಿರಿ