Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 1 ಅಕ್ಟೋಬರ್ 2022 (07:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮಗೆ ಆಗುತ್ತಿರುವ ಅನ್ಯಾಯ ಪ್ರಶ್ನಿಸುವ ಧೈರ್ಯ ಮಾಡಲಿದ್ದೀರಿ. ಕೌಟುಂಬಿಕವಾಗಿ ಕೆಲವೊಂದು ಕಿರಿ ಕಿರಿಗಳಾದೀತು. ಪ್ರೀತಿ ಪಾತ್ರರ ಬೆಂಬಲ ನಿಮಗೆ ಸಿಗಲಿದೆ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಷಭ: ಬೇರೆಯವರ ಮಾತಿಗೆ ನೋವಾಗುವಂತಹ ಪ್ರಸಂಗ ಎದುರಾದೀತು. ಹೆಚ್ಚಿನ ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಧಾರ್ಮಿಕ ಕಾರ್ಯಗಳಿಗೆ ನೇತೃತ್ವ ವಹಿಸಬೇಕಾಗುತ್ತದೆ. ತಾಳ್ಮೆಯಿರಲಿ.

ಮಿಥುನ: ಇಷ್ಟಮಿತ್ರರೊಂದಿಗೆ ಪ್ರವಾಸ ಮಾಡುವ ಯೋಗ ನಿಮ್ಮದಾಗಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ತೊಂದರೆ ಎದುರಿಸಬೇಕಾದೀತು. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯ ಯೋಗವಿದೆ.

ಕರ್ಕಟಕ: ನಿಮ್ಮಲ್ಲಿರುವ ಶಕ್ತಿ, ಸಾಮರ್ಥ್ಯ ಪ್ರದರ್ಶಿಸುವ ಸಮಯ. ಕ್ರಿಯಾತ್ಮಕ ಕೆಲಸಗಳಿಂದ ಎಲ್ಲರ ಗಮನಸೆಳೆಯಲಿದ್ದೀರಿ. ಸಾಲಗಾರರಿಂದ ಮುಕ್ತಿ ಸಿಗುವುದು. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ. ತಾಳ್ಮೆಯಿರಲಿ.

ಸಿಂಹ: ಹಲವು ಬೇಡದ ವಿಚಾರಗಳಿಗೆ ಆತ್ಮೀಯರೊಂದಿಗೆ ಸಂಬಂಧ ಹಾಳು ಮಾಡಿಕೊಳ್ಳಬೇಡಿ. ಮಾತಿನ ಮೇಲೆ ನಿಗಾ ಇರಲಿ. ಸಾಮಾಜಿಕ ಕಾರ್ಯಗಳಿಗೆ ನೇತೃತ್ವ ವಹಿಸಲಿದ್ದೀರಿ. ಮಕ್ಕಳ ವಿಚಾರದಲ್ಲಿ ಅಭಿವೃದ್ಧಿ ಕಂಡುಬರುವುದು.

ಕನ್ಯಾ: ವಾಸಸ್ಥಳ ಬದಲಾವಣೆ ಮಾಡಲಿದ್ದೀರಿ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಹೊಸದಾಗಿ ಆರಂಭಿಸಿರುವ ಉದ್ದಿಮೆ ಕೈ ಹಿಡಿಯಲಿದೆ. ತಾಂತ್ರಿಕ ವೃತ್ತಿಯವರಿಗೆ ಬಿಡುವಿನ ಸಮಯ ಸಿಗುವುದು. ಹೊಸ ಕೆಲಸಗಳಿಗೆ ಕೈ ಹಾಕಲು ಇದು ಸಕಾಲ. ಮಧುರ ಮಾತಿನಿಂದ ಇತರರನ್ನು ಒಲಿಸಿಕೊಳ್ಳಲಿದ್ದೀರಿ.

ವೃಶ್ಚಿಕ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ವಾಸ್ತವವನ್ನು ಅರಿತು ನಿರ್ಧಾರ ತೆಗೆದುಕೊಳ‍್ಳುವುದು ಸೂಕ್ತ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಬಗ್ಗೆ ಚಿಂತನೆಗಳು ಬರುವುದು.

ಧನು: ಹಿಂದೆ ಮಾಡಿದ್ದ ಉಳಿತಾಯದ ಹಣ ಉಪಯೋಗಕ್ಕೆ ಬರಲಿದೆ. ಪಾಲು ಬಂಡವಾಳ ಹೂಡಿಕೆಯಲ್ಲಿ ಲಾಭ ಮಾಡಿಕೊಳ್ಳಲಿದ್ದೀರಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಮಕರ: ಯೋಜನಾಬದ್ಧವಾಗಿ ಕೆಲಸ ಮಾಡುವುದರಿಂದ ಯಶಸ್ಸು ಕಾಣಲಿದ್ದೀರಿ. ಅವಿವಾಹಿತರಿಗೆ ಯೋಗ್ಯ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ನೂತ ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ.

ಕುಂಭ: ಸರಕಾರಿ ನೌಕರರಿಗೆ ಪಗಾರ ಹೆಚ್ಚಳ ಸಾಧ್ಯತೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಹಿರಿಯರು ಮಾಡಿದ್ದ ಒಳ್ಳೆಯ ಕೆಲಸಗಳ ಫಲ ಅನುಭವಿಸುವ ಯೋಗ. ಕಿರು ಸಂಚಾರ ಮಾಡುವಿರಿ.

ಮೀನ: ಸ್ವಾಭಿಮಾನಕ್ಕೆ ಧಕ್ಕೆಯಾಗುವಂತಹ ಪ್ರಸಂಗಗಳು ಎದುರಾದೀತು. ಕಷ್ಟದ ಸಮಯದಲ್ಲಿ ಸಂಗಾತಿಯು ಸಾಥ್ ಕೊಡಲಿದ್ದಾರೆ. ಮಹಿಳೆಯರಿಗೆ ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿಗಳು ಹೆಗಲಿಗೇರಲಿವೆ. ದೇವತಾ ಪ್ರಾರ್ಥನೆ ಮಾಡಿ
-Edited by Rajesh Patil

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರು ದೆಶೆ ತಿರುಗಿಬಿದ್ದರೆ ಎಂಥಾ ಕೆಟ್ಟ ಪರಿಣಾಮವಾಗುತ್ತದೆ ನೋಡಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮುಂದಿನ ಸುದ್ದಿ
Show comments