Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 2 ಅಕ್ಟೋಬರ್ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿ ಮಾಡುವ ಸಂತೋಷ ನಿಮ್ಮದಾಗುವುದು. ಆರ್ಥಿಕವಾಗಿ ಹಣಕಾಸಿನ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ಅನಗತ್ಯ ಚಿಂತೆ ಬೇಡ.

ವೃಷಭ: ನಿಮಗನಿಸಿದ್ದನ್ನು ಸ್ಪಷ್ಟವಾಗಿ ಹೇಳಲು ತಡವರಿಸುವ ಪರಿಸ್ಥಿತಿಯಾದೀತು. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಕಾರ್ಯರಂಗದಲ್ಲಿ ನಿಮಗೆ ಪೈಪೋಟಿ ಎದುರಾದೀತು. ಕುಟುಂಬದವರ ಪ್ರೋತ್ಸಾಹ ಕಂಡುಬರಲಿದೆ.

ಮಿಥುನ: ನೂತನ ಮಿತ್ರರ ಸಮಾಗಮವಾಗಲಿದೆ. ಆಹಾರೋದ್ಯಮಿಗಳಿಗೆ ಉನ್ನತಿಯ ಯೋಗ. ಧಾರ್ಮಿಕ ಕಾರ್ಯಗಳ ನೇತೃತ್ವ ವಹಿಸಲಿದ್ದೀರಿ. ಸಂಗಾತಿಯೊಂದಿಗೆ ಅನಗತ್ಯ ವಾದ ವಿವಾದ ಬೇಡ. ತಾಳ್ಮೆಯಿರಲಿ.

ಕರ್ಕಟಕ: ರಾಜಕೀಯ ರಂಗದಲ್ಲಿರುವವರಿಗೆ ಉನ್ನತಿಯ ಯೋಗ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಕುಟುಂಬ ಸದಸ್ಯರೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ.

ಸಿಂಹ: ಹೊಸದಾಗಿ ಆರಂಭಿಸಿರುವ ಕೆಲಸಗಳಿಗೆ ಅಡೆತಡೆಗಳು ಬಂದೀತು. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಮನದಾಳ ತೆರೆದಿಡಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಕನ್ಯಾ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ಸ್ಥಾನ ಸುಧಾರಣೆಗೆ ಪ್ರಯತ್ನ ಪಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ನೆರೆಹೊರೆಯವರೊಂದಿಗೆ ಸಂಬಂಧ ಸುಧಾರಣೆಯಾಗಲಿದೆ. ಚಿಂತೆ ಬೇಡ.

ತುಲಾ: ಮಕ್ಕಳ ಸಂತೋಷಕ್ಕಾಗಿ ಕೆಲವೊಂದು ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭ ಮಾಡಿಕೊಳ್ಳಲು ದಾರಿ ಸಿಗಲಿದೆ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ‍್ಯತೆಯಿದೆ.

ವೃಶ್ಚಿಕ: ಮನೆ, ವಾಹನ ಇತ್ಯಾದಿ ರಿಪೇರಿ ಕೆಲಸಗಳಿಗೆ ಖರ್ಚು ವೆಚ್ಚಗಳಾಗಲಿವೆ. ಮಹಿಳೆಯರಿಗೆ ಚಿನ್ನ, ವಸ್ತ್ರಾಭರಣ ಖರೀದಿ ಮಾಡುವ ಯೋಗ. ವೈವಾಹಿಕ ಜೀವನದಲ್ಲಿ ಸಂಘರ್ಷಗಳು ಸಾಮಾನ್ಯ. ನಾಜೂಕಾಗಿ ನಿಭಾಯಿಸಿ.

ಧನು: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ಸುಧಾರಣೆಯಾಗಲಿವೆ. ಆತ್ಮೀಯರನ್ನು ಭೇಟಿಯಾಗುವ ಸಂತೋಷ ನಿಮ್ಮದಾಗುವುದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಮಕರ: ಪಾಲುದಾರಿಕಾ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಕ್ರಯ-ವಿಕ್ರಯ ಕೆಲಸಗಳಲ್ಲಿ ಲಾಭವಾಗುವುದು. ಬರಬೇಕಾಗಿದ್ದ ಸಾಲ ಮರುಪಾವತಿಯಾಗಲಿದೆ. ನೆಮ್ಮದಿಯಿರಲಿದೆ.

ಕುಂಭ: ಮನೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ವಾಹನ ಖರೀದಿಸುವ ನಿಮ್ಮ ಕನಸು ಕೊಂಚ ಮಟ್ಟಿಗೆ ಮುಂದೂಡಿಕೆಯಾಗಬಹುದು. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಐಡಿಯಾ ಸಿಗಲಿದೆ.

ಮೀನ: ಕಟ್ಟಡ-ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಇದು ಸಕಾಲ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಕಾರ್ಯನಿಮಿತ್ತ ಓಡಾಟ ನಡೆಸಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರು ಗ್ರಹ ದೋಷ ನಿವಾರಣೆಗೆ ಏನು ಮಾಡಬೇಕು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಕ್ಕಳಿಗೆ ವಿದ್ಯೆ ತಲೆಗೆ ಹತ್ತದಿರಲು ಯಾವ ದೋಷ ಕಾರಣ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಮುಂಭಾಗದಲ್ಲಿ ಈ ಕೆಲವು ಗಿಡಗಳಿದ್ದರೆ ದರಿದ್ರ ತಪ್ಪಿದ್ದಲ್ಲ

ಮುಂದಿನ ಸುದ್ದಿ
Show comments