Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 22 ನವೆಂಬರ್ 2022 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ, ವ್ಯವಹಾರದಲ್ಲಿ ಉನ್ನತಿಯ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸಾಂಸಾರಿಕವಾಗಿ ಕೆಲವು ವಿಚಾರದಲ್ಲಿ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳಾದೀತು. ತಾಳ್ಮೆಯಿರಲಿ.

ವೃಷಭ: ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಹಿಂದೆ ಮಾಡಿದ್ದ ಒಳ್ಳೆಯ ಕೆಲಸಗಳು ನಿಮ್ಮ ಕೈ ಹಿಡಿಯಲಿವೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಕಾರ್ಯರಂಗದಲ್ಲಿ ಚರ್ಚೆಗೆ ಆಸ್ಪದ ಕೊಡಬೇಡಿ. ಧನಾರ್ಜನೆಗೆ ಹೊಸ ದಾರಿಗಳು ಕಂಡುಕೊಳ್ಳಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿ ಯೋಗ. ಅಧ್ಯಯನ ಶೀಲರಿಗೆ ವಿಫುಲ ಅವಕಾಶ ಸಿಗಲಿದೆ.

ಕರ್ಕಟಕ: ಮಾತಿನಲ್ಲೇ ಇನ್ನೊಬ್ಬರನ್ನು ಮೋಡಿ ಮಾಡುವ ಗುಣ ನಿಮ್ಮದು. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚಾಗಲಿದೆ. ಅನಗತ್ಯ ಚಿಂತೆ ಬೇಡ.

ಸಿಂಹ: ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಉನ್ನತಿ. ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ಸಿಗುವುದು. ಗುರು ಹಿರಿಯರಿಂದ ಸರಿಯಾದ ಮಾರ್ಗದರ್ಶನ ಸಿಗುವುದು.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟವಾಗುವ ಸಾಧ‍್ಯತೆಯಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿದ್ದರೂ ಅಷ್ಟೇ ಖರ್ಚು ವೆಚ್ಚವಾಗಲಿದೆ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗ.

ತುಲಾ: ಜವಾಬ್ಧಾರಿಯುತ ಕೆಲಸಗಳಿಂದಾಗಿ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಗುರುಹಿರಿಯರ ಸೂಕ್ತ ಸಲಹೆಗಳು ಉಪಯೋಗಕ್ಕೆ ಬರಲಿವೆ.

ವೃಶ್ಚಿಕ: ಕಾರ್ಯನಿಮಿತ್ತ ಪರವೂರಿಗೆ ಪ್ರಯಾಣ ಮಾಡುವ ಅವಕಾಶ ಸಿಗಲಿದೆ. ದಂಪತಿಗಳಲ್ಲಿ ಕೆಲವೊಂದು ವಿಚಾರಕ್ಕೆ ಭಿನ್ನಾಭಿಪ್ರಾಯಗಳು ಬಂದೀತು. ವಿದ್ಯಾರ್ಥಿಗಳು ಇನ್ನೊಬ್ಬರನ್ನು ಅವಲಂಬಿಸುವ ಅನಿವಾರ್ಯತೆ ಎದುರಾಗಲಿದೆ.

ಧನು: ಕಾರ್ಯರಂಗದಲ್ಲಿ ಅತಿಯಾದ ಪೈಪೋಟಿ ಎದುರಾಗಲಿದೆ. ಅನಗತ್ಯ ವಿಚಾರಗಳಿಗೆ ಹೆಚ್ಚು ತಲೆಕೆಡಿಸಿಕೊಳ್ಳುವ ಸಂದರ್ಭ ಎದುರಾದೀತು. ಆಪ್ತರ ಸಲಹೆ ಉಪಯೋಗಕ್ಕೆ ಬರುವುದು. ಕಿರು ಸಂಚಾರ ಮಾಡಲಿದ್ದೀರಿ.

ಮಕರ: ಮನೆಯಲ್ಲಿ ಶುಭ ಮಂಗಲ ಕಾರ್ಯಕ್ಕೆ ಸಿದ್ಧತೆ ನಡೆಸಲಿದ್ದೀರಿ. ಅನಿರೀಕ್ಷಿತ ವ್ಯಕ್ತಿಗಳು ನಿಮ್ಮ ಜೀವನಕ್ಕೆ ತಿರುವು ನೀಡಲಿದ್ದಾರೆ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರಲಿದೆ. ತಾಳ್ಮೆಯಿರಲಿ.

ಕುಂಭ: ನಿಮ್ಮ ಒಂದು ಮರೆವಿನಿಂದ ತೊಂದರೆಗಳು ಎದುರಾದೀತು. ಇಷ್ಟಾರ್ಥ ಸಿದ್ದಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಮಹಿಳೆಯರು ಮಾತಿನಲ್ಲೇ ಇತರರನ್ನು ಮೋಡಿ ಮಾಡಲಿದ್ದೀರಿ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ದೀರ್ಘ ಪ್ರಯಾಣದಿಂದ ದೇಹಾಯಾಸವಾಗುವ ಸಾಧ್ಯತೆಯಿದೆ. ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬರುವುದು. ಸಾಂಸಾರಿಕವಾಗಿ ಮಧ‍್ಯಮ ಸುಖ. ಆರೋಗ್ಯದಲ್ಲಿ ಸುಧಾರಣೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments