ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 24 ನವೆಂಬರ್ 2022 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನೀವು ಅತಿಯಾಗಿ ನಂಬಿದ್ದವರಿಂದಲೇ ನೋವು ಅನುಭವಿಸುವ ಪರಿಸ್ಥಿತಿ ಎದುರಾದೀತು. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಸಿಗುವುದು. ಹೊಸ ಅವಕಾಶಗಳಿಗೆ ನಿಮ್ಮನ್ನು ನೀವು ತೆರೆದುಕೊಳ್ಳಲಿದ್ದೀರಿ.

ವೃಷಭ: ಅಧ್ಯಯನ ಶೀಲರಿಗೆ ಹೊಸ ಅವಕಾಶಗಳು ಕಂಡುಬರಲಿವೆ. ಪಾಲುದಾರಿಕೆ ವ್ಯವಹಾರದಲ್ಲಿ ಏಳು ಬೀಳುಗಳು ಸಾಮಾನ್ಯ. ಸಾಂಸಾರಿಕವಾಗಿ ಸುಖಕ್ಕೆ ಕೊರತೆಯಾಗದು. ಆಘಾತಕಾರಿ ಸುದ್ದಿ ಕೇಳಿಬಂದೀತು. ಎಚ್ಚರಿಕೆಯಿರಲಿ.

ಮಿಥುನ: ಸಾಂಸಾರಿಕವಾಗಿ ಕೆಲವೊಂದು ವಿಚಾರಗಳಿಂದ ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಬೇಕಾದೀತು. ವಾಸ್ತವ ಸ್ಥಿತಿ ಅರಿತು ಮುನ್ನಡೆಯಿರಿ. ನೆರೆಹೊರೆಯವರೊಂದಿಗೆ ಅನಗತ್ಯ ಸಂಘರ್ಷ ಬೇಡ. ದುಂದು ವೆಚ್ಚಕ್ಕೆ ಕಡಿವಾಣವಿರಲಿ.

ಕರ್ಕಟಕ: ವಿದೇಶದಲ್ಲಿ ಕೆಲಸ ಮಾಡುವ ವ್ಯಕ್ತಿಗಳಿಗೆ ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾಗುವ ಯೋಗ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಭಾಗ್ಯ ಕೂಡಿಬರುವುದು. ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ಅಧಿಕ ದನ ಸಂಪಾದನೆಯ ಹಪಹಪಿ ಕಂಡುಬರಲಿದೆ. ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡುವುದು ಮುಖ್ಯವಾಗುತ್ತದೆ. ರಾಜಕೀಯ ರಂಗದಲ್ಲಿರುವರಿಗೆ ಮುನ್ನಡೆ ಕಂಡುಬಂದೀತು. ತಾಳ್ಮೆಯಿರಲಿ.

ಕನ್ಯಾ: ಉದ್ಯೋಗ, ವ್ಯವಹಾರದಲ್ಲಿ ಹೆಚ್ಚಿನ ಜವಾಬ್ಧಾರಿ ನಿಮ್ಮದಾಗಲಿದೆ. ಕ್ರಿಯಾತ್ಮಕ ಯೋಜನೆಗಳಿಂದ ಇತರರ ಗಮನ ಸೆಳೆಯಲಿದ್ದೀರಿ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ತುಲಾ: ಕಟ್ಟಡ ಕಾಮಗಾರಿ ಕೆಲಸಕ್ಕೆ ಕೈ ಹಾಕಿದ್ದರೆ ಅಡಚಣೆಗಳು ಕಂಡುಬಂದೀತು. ವಿಘ್ನೇಶ್ವರನ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ವಿದ್ಯಾರ್ಥಿಗಳಿಗೆ ಅಧ‍್ಯಯನದಲ್ಲಿ ಆಸಕ್ತಿ. ಆರೋಗ್ಯದಲ್ಲಿ ಸುಧಾರಣೆ.

ವೃಶ್ಚಿಕ: ಮನಸ್ಸಿನಲ್ಲಿರುವ ಮಾತುಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಸಂದರ್ಭಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುವುದು ಮುಖ್ಯವಾಗಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಸಾಲ ಪಾವತಿಯಾಗಲಿದೆ.

ಧನು: ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ಸಂಗಾತಿಯ ಮೇಲೆ ಕೋಪ-ತಾಪಗಳು ಕಂಡುಬರುವ ಸಾಧ‍್ಯತೆಯಿದೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಮಾತಿನ ಮೇಲೆ ನಿಗಾ ಇರಲಿ.

ಮಕರ: ನಕಾರಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ನಿಮ್ಮಲ್ಲಿರುವ ಸುಪ್ತಪ್ರತಿಭೆಯನ್ನು ಬೆಳಕಿಗೆ ತರಲು ವೇದಿಕೆ ಸಿಗಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗುವ ಲಕ್ಷಣ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರುವುದು. ದಾಯಾದಿ ಕಲಹಗಳಿಗೆ ಅಂತ್ಯ ಹಾಡಲಿದ್ದೀರಿ. ಮಹಿಳೆಯರಿಗೆ ಮಂಗಲ ವಸ್ತ್ರ ಖರೀದಿ ಯೋಗ. ಅಪರಿಚಿತ ವ್ಯಕ್ತಿಗಳು ನಿಮ್ಮ ವ್ಯವಹಾರಕ್ಕೆ ನೆರವಾಗಲಿದ್ದಾರೆ.

ಮೀನ: ನಿಮ್ಮ ಕ್ಷಮಾಗುಣ ಕುಟುಂಬದವರಿಗೆ ಶ್ರೇಯಸ್ಸು ಉಂಟು ಮಾಡಲಿದೆ. ದೂರದ ಬಂಧುಗಳಿಂದ ಅನುಕೂಲವಾದೀತು. ಅನಿರೀಕ್ಷಿತ ಧನಾಗಮನವಾಗುವ ಯೋಗ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಬುಧವಾರ ಗಣೇಶನ ಅನುಗ್ರಹಕ್ಕೆ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments