ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 27 ನವೆಂಬರ್ 2022 (08:19 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವ್ಯವಹಾರದಲ್ಲಿ ಇತರರ ವಿಶ್ವಾಸಕ್ಕೆ ಪಾತ್ರರಾಗಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಗೆ ಅವಕಾಶ ನೀಡಿ. ಮನರಂಜನಾ ಕ್ಷೇತ್ರದಲ್ಲಿರುವವರಿಗೆ ಮುನ್ನಡೆ. ಆಪ್ತರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಪ್ರಯತ್ನ ಪಡಲಿದ್ದೀರಿ. ಅವಿವಾಹಿತರಿಗೆ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಗೃಹ ವಾಹನಾದಿ ಸೌಕರ್ಯಗಳು ನಿಮ್ಮದಾಗಲಿವೆ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಸಂದರ್ಭಕ್ಕೆ ತಕ್ಕಂತೆ ಜಾಣತನ ಪ್ರದರ್ಶನ ನೀಡುವುದರಿಂದ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ವಾಹನಾದಿ ಖರೀದಿಗೆ ಮುಂದಾಗಲಿದ್ದೀರಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಸಿಗಲಿವೆ.

ಕರ್ಕಟಕ: ಧಾರ್ಮಿಕ ಕಾರ್ಯಗಳ ನೇತೃತ್ವ ವಹಿಸಲಿದ್ದೀರಿ. ಯಂತ್ರೋಪಕರಣಗಳಿಂದ ತೊಂದರೆಗಳಾಗುವ ಸಾಧ್ಯತೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಕೌಟುಂಬಿಕವಾಗಿ ಸುಖ, ಸಮೃದ್ಧಿಯಿರಲಿದೆ.

ಸಿಂಹ: ಹಿರಿಯರಿಗೆ ದೇವತಾ ಸ್ಥಳಗಳ ಸಂದರ್ಶನ ಮಾಡಿದ ತೃಪ್ತಿ ಸಿಗುವುದು. ವ್ಯವಹಾರದಲ್ಲಿ ಉಳಿತಾಯಕ್ಕೆ ಪ್ರಾಮುಖ್ಯತೆ ನೀಡಲಿದ್ದೀರಿ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ. ದೂರ ಸಂಚಾರದಿಂದ ದೇಹಾಯಾಸವಾದೀತು.

ಕನ್ಯಾ: ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ‍್ಯತೆ. ಕೌಟುಂಬಿಕವಾಗಿ ಸಂತೋಷವಿರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಭೀತಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಅನಗತ್ಯ ಚಿಂತೆ ಬೇಡ.

ತುಲಾ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಅಡಚಣೆಗಳು ಬಂದೀತು. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗುವುದು. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ.

ವೃಶ್ಚಿಕ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಅತಿಯಾದ ಯೋಚನೆ ಬೇಡ. ಮನಸ್ಸಿನಲ್ಲಿದ್ದ ಯೋಜನೆಗಳನ್ನು ಕಾರ್ಯಗತಗೊಳಿಸಲು ಪ್ರಯತ್ನಿಸಲಿದ್ದೀರಿ. ಮಾತಿನ ಮೇಲೆ ನಿಗಾ ಇರಲಿ.

ಧನು: ಗುರುಹಿರಿಯರೊಂದಿಗೆ ಚರ್ಚಿಸಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದು ಸೂಕ್ತ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ. ಬಂಧು ಮಿತ್ರರನ್ನು ಭೇಟಿಯಾದ ಸಂತೋಷ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ದೂರದ ಮಿತ್ರರಿಂದ ಸಹಾಯ ಸಿಗುವುದು. ಹಣಕಾಸಿನ ವಿಚಾರದಲ್ಲಿ ಆಪ್ತರೊಂದಿಗೆ ಸಂಘರ್ಷವಾಗುವ ಸಾಧ‍್ಯತೆ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಪ್ರಾಪ್ತಿಯಾಗುವ ಸಾಧ್ಯತೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಕುಂಭ: ಕೋರ್ಟು ಕಚೇರಿ ವ್ಯವಹಾರಗಳಿಗೆ ಸಿದ್ಧತೆ ನಡೆಸಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ವಸ್ತು ಸ್ಥಿತಿ ಅರಿತು ನಿರ್ಧಾರ ತೆಗೆದುಕೊಳ್ಳುವುದು ಸೂಕ್ತ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ.

ಮೀನ: ವೈಯಕ್ತಿಕ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ಪೂರ್ವಾಪರ ವಿಚಾರಿಸಿ ಅಪರಿಚಿತರೊಂದಿಗೆ ವ್ಯವಹಾರ ನಡೆಸುವುದು ಉತ್ತಮ. ಭೂಮಿ, ವಾಹನಾದಿ ಖರೀದಿ ವಿಚಾರದಲ್ಲಿ ಮುನ್ನಡೆ. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೌಭಾಗ್ಯ ಲಕ್ಷ್ಮೀ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಗುರು ಪಾದುಕಾ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಈ ಮಂತ್ರ ಓದಿ

ಕುಜ ದೋಷವಿದ್ದರೆ ಇಂದು ಈ ಸ್ತೋತ್ರವನ್ನು ಓದಿ

ಸೋಮವಾರ ರುದ್ರಾಷ್ಟಕಂ ಮಂತ್ರವನ್ನು ತಪ್ಪದೇ ಜಪಿಸಿ

ಮುಂದಿನ ಸುದ್ದಿ
Show comments