ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 2 ಡಿಸೆಂಬರ್ 2022 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಹೋದರ ಸಮಾನರಿಗೆ ಸಹಾಯ ಮಾಡಲಿದ್ದೀರಿ. ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ನಿಷ್ಠೆಗೆ ತಕ್ಕ ಫಲ ಸಿಗಲಿದೆ. ದಂಪತಿಗಳಲ್ಲಿ ಪರಸ್ಪರ ಹೊಂದಾಣಿಕೆಯ ಕೊರತೆ ಕಂಡುಬಂದೀತು. ದೇವತಾ ಪ್ರಾರ್ಥನೆ ಮಾಡಿದರೆ ಉತ್ತಮ.

ವೃಷಭ: ಮಾತಿನಲ್ಲಿ ಎಷ್ಟೇ ನಯವಾಗಿದ್ದರೂ ನಿಮ್ಮ ಕೆಲವೊಂದು ನಡೆಗಳು ಆಪ್ತರ ಅಸಮಾಧಾನಕ್ಕೆ ಗುರಿಯಾದೀತು. ಅನಿರೀಕ್ಷಿತವಾಗಿ ಖರ್ಚು ವೆಚ್ಚವಾಗುವ ಸಾಧ‍್ಯತೆ. ಕಾರ್ಯನಿಮಿತ್ತ ಪರವೂರಿಗೆ ಸಂಚರಿಸಲಿದ್ದೀರಿ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಪಾರದರ್ಶಕತೆಯಿರಲಿ. ಸಾಮಾಜಿಕವಾಗಿ ಗೌರವ ಪ್ರಾಪ್ತಿಯಾಗಲಿದೆ. ಬಂಧು ಮಿತ್ರರನ್ನು ಭೇಟಿಯಾಗುವ ಯೋಗ. ಆರ್ಥಿಕವಾಗಿ ಪರಿಸ್ಥಿತಿ ಸುಧಾರಿಸಲಿದೆ. ದಿನದಂತ್ಯಕ್ಕೆ ನೆಮ್ಮದಿಯಿರಲಿ.

ಕರ್ಕಟಕ: ಅಪರಿಮಿತ ಕೆಲಸದಿಂದ ದೇಹಾಯಾಸವಾದೀತು. ಹೊಸದಾಗಿ ಪರಿಚಯವಾಗಿದ್ವರಿಂದ ನಿಮ್ಮ ಕೆಲಸಗಳಿಗೆ ಅನುಕೂಲವಾದೀತು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ತಾಳ್ಮೆಯಿರಲಿ.

ಸಿಂಹ: ಕಾರ್ಯಕ್ಷೇತ್ರದಲ್ಲಿ ಅನಗತ್ಯ ಸಮಸ್ಯೆಗಳನ್ನು ಮೈಮೇಲೆಳೆದುಕೊಳ್ಳಬೇಡಿ. ಇನ್ನೊಬ್ಬರೊಂದಿಗೆ ವಾದ ವಿವಾದ ಬೇಡ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಬೇರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಡಿ.

ಕನ್ಯಾ: ಪರರಿಗೆ ಹಣಕಾಸಿನ ನೆರವು ನೀಡುವ ಮೊದಲು ಸರಿಯಾಗಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. ಕೌಟುಂಬಿಕವಾಗಿ ಅಭಿವೃದ್ಧಿ, ನೆಮ್ಮದಿ ಕಂಡುಬರಲಿದೆ. ಸಂಗಾತಿಯ ಸಲಹೆಯನ್ನು ಪಾಲಿಸುವುದು ಉತ್ತಮ. ತಾಳ್ಮೆಯಿರಲಿ.

ತುಲಾ: ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಹೊಸ ವ್ಯವಹಾರಕ್ಕೆ ಕೈ ಹಾಕುವ ಮುನ್ನ ಹಿರಿಯರ ಸಲಹೆ ಪಡೆಯಿರಿ. ದಿನದಂತ್ಯಕ್ಕೆ ನೆಮ್ಮದಿ.

ವೃಶ್ಚಿಕ: ಸರಕಾರಿ ನೌಕರರಿಗೆ ಪಗಾರ ಹೆಚ್ಚಳ, ಬಡ್ತಿ ಸಾಧ‍್ಯತೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ನಿಮ್ಮ ಮಾತಿನಿಂದ ಇತರರ ಮನಸ್ಸು ನೋಯಿಸದಿರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆಯಿರಲಿದೆ.

ಧನು: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಬಂಧು ಮಿತ್ರರ ಭೇಟಿ ಮನಸ್ಸಿನ ಸಂತೋಷ ಹೆಚ್ಚಿಸಲಿದೆ. ಗೃಹೋಪಯೋಗಿ ವಸ್ತುಗಳನ್ನು ಖರೀದಿ ಮಾಡಲು ಖರ್ಚು ವೆಚ್ಚ ಮಾಡಬೇಕಾಗುತ್ತದೆ.

ಮಕರ: ಕೋರ್ಟು ಕಚೇರಿ ಕಲಾಪಗಳಿಗೆ ಸಿದ್ಧತೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ತೋರಿಬರಲಿವೆ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಕುಂಭ: ಕಾರ್ಯಕ್ಷೇತ್ರದಲ್ಲಿ ನಿಮ್ಮ ನಿಷ್ಠೆಗೆ ತಕ್ಕ ಫಲ ಸಿಗಲಿದೆ. ಸಾಂಸಾರಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಹಿರಿಯರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ವಾಹನ, ಭೂಮಿ ಖರೀದಿ ವಿಚಾರದಲ್ಲಿ ಮುನ್ನಡೆ.

ಮೀನ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಇಷ್ಟಮಿತ್ರರನ್ನು ಭೇಟಿಯಾಗಲಿದ್ದೀರಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆಯಾದೀತು. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಾಸವೀ ಕನ್ನಿಕಾ ಪರಮೇಶ್ವರಿ ದೇವಿ ಸ್ತೋತ್ರ

ಗುರುವಾರ ಮಹಾವಿಷ್ಣುವಿನ ಮೂಲ ಮಂತ್ರ ಪಠಿಸುವುದರಿಂದ ಎಷ್ಟೆಲ್ಲಾ ಲಾಭವಿದೆ ತಿಳಿದುಕೊಳ್ಳಿ

ಶ್ರೀ ಗಣೇಶ ಕವಚಂ ಸ್ತೋತ್ರ ಪಠಣದ ಅದ್ಭುತ ಪ್ರಯೋಜನಗಳು

ಲಲಿತಾ ಸಹಸ್ರನಾಮ ಓದುವುದರ ಫಲ ತಿಳಿಯಿರಿ, ಯಾವೆಲ್ಲಾ ಸಮಸ್ಯೆಗೆ ಮುಕ್ತಿ ಗೊತ್ತಾ

ನವಗ್ರಹ ಪೂಜಾ ಫಲ: ಒಂಬತ್ತು ಗ್ರಹಗಳ ಅನುಗ್ರಹ ಮತ್ತು ಅದ್ಭುತ ಪ್ರಯೋಜನಗಳು

ಮುಂದಿನ ಸುದ್ದಿ
Show comments