Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 28 ಡಿಸೆಂಬರ್ 2022 (08:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಮಾತೃಸಮಾನರಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ಆದರೆ ಸಾಂಸಾರಿಕವಾಗಿ ನೀವು ಆಡುವ ಮಾತಿನಿಂದ ನೋವಾಗಬಹುದು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.  ತಾಳ್ಮೆಯಿರಲಿ.

ವೃಷಭ: ಆಸ್ತಿ ಖರೀದಿ ವ್ಯವಹಾರದಲ್ಲಿ ವಂಚನೆಗೊಳಗಾಗುವ ಭೀತಿ. ಹಿರಿಯರ ಸಲಹೆಗಳಿಗೆ ಬೆಲೆ ಕೊಡಬೇಕಾಗುತ್ತದೆ. ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಉದ್ದೇಶಿತ ಕೆಲಸ ಪೂರ್ಣಗೊಂಡ ನೆಮ್ಮದಿಯಿರಲಿದೆ. ನೂತನ ಮಿತ್ರರನ್ನು ಸಂಪಾದಿಸಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.

ಕರ್ಕಟಕ: ಕಾರ್ಯನಿಮಿತ್ತ ಪರವೂರಿಗೆ ಸಂಚರಿಸುವ ಸಾಧ‍್ಯತೆ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆಗೆ ಅವಕಾಶ ಕೊಡಿ. ಗುರುಹಿರಿಯರ ಸಲಹೆಗಳು ಉಪಯೋಗಕ್ಕೆ ಬರಲಿದೆ.

ಸಿಂಹ: ಕಾರ್ಯರಂಗದಲ್ಲಿ ಅನ್ಯರಿಂದ ಉಂಟಾಗುವ ತೊಡಕುಗಳನ್ನು ನಾಜೂಕಾಗಿ ನಿಭಾಯಿಸಬೇಕಾಗುತ್ತದೆ. ಸ್ವಯಂ ವೃತ್ತಿಯವರಿಗೆ ಅನುಕೂಲಕರ ವಾತಾವರಣವಿರಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಕನ್ಯಾ: ಬೇರೆಯವರ ವಿಚಾರಗಳು ನಿಮ್ಮ ಮೇಲೆ ಪ್ರಭಾವ ಬೀರಬಹುದು. ವಿದ್ಯಾರ್ಥಿಗಳಿಗೆ ಕ್ರಿಯಾತ್ಮಕ ಕೆಲಸಗಳಿಂದ ಸಂತೋಷ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ತಾಳ್ಮೆಯಿಂದ ವ್ಯವಹರಿಸಿ. ದೇವತಾ ಪ್ರಾರ್ಥನೆ ಮರೆಯದಿರಿ.

ತುಲಾ: ನಿಮ್ಮಲ್ಲಿರುವ ಒಳ್ಳೆಯತನದ ದುರುಪಯೋಗವಾದೀತು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಕ್ಕೀತು. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ.

ವೃಶ್ಚಿಕ: ಪರೋಪಕಾರದಿಂದ ನಿಮ್ಮ ಗೌರವ, ಸ್ಥಾನ ಮಾನ ಹೆಚ್ಚಾದೀತು. ದೂರದ ವ್ಯವಹಾರಗಳಿಂದ ಲಾಭವಾಗಲಿದೆ. ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ. ನಿಮ್ಮ ಹಿಂದೆ ನಡೆಯುತ್ತಿದ್ದ ವಂಚನೆ ಬಯಲಿಗೆ ಬರಲಿದೆ.

ಧನು: ನಿಮ್ಮ ಕೆಲವೊಂದು ಮಾತಿನಿಂದ ಇನ್ನೊಬ್ಬರು ನೋವು ಅನುಭವಿಸುವಂತಾದೀತು. ಮಾತಿನ ಮೇಲೆ ನಿಗಾ ಇರಲಿ. ದಾಂಪತ್ಯದಲ್ಲಿ ಕಲಹಕ್ಕೆ ಅವಕಾಶ ಕೊಡಬೇಡಿ. ಮಹಿಳೆಯರಿಗೆ ಗೃಹಕೃತ್ಯಗಳ ಒತ್ತಡ ಕಂಡುಬಂದೀತು.

ಮಕರ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಇದು ಸಕಾಲ. ಗುರು ಹಿರಿಯರಿಂದ ಸಂತೋಷ ವೃದ್ಧಿಯಾಗಲಿದೆ. ಶೈಕ್ಷಣಿಕ ರಂಗದಲ್ಲಿ ಕೆಲಸ ಮಾಡುವವರಿಗೆ ಉನ್ನತಿಯ ಯೋಗ. ಕಿರು ಸಂಚಾರ ಮಾಡಲಿದ್ದೀರಿ.

ಕುಂಭ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಮನಸ್ಸಿನ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲು ಅವಕಾಶ ಸಿಗುವುದು. ವೈದ್ಯಕೀಯ ವೃತ್ತಿಯವರಿಗೆ ಉನ್ನತಿಯ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ನಾಲಿಗೆ ಚಪಲದಿಂದಾಗಿ ದೇಹಾರೋಗ್ಯದಲ್ಲಿ ಏರುಪೇರಾಗುವ ಸಂಭವ. ಹಿರಿಯರ ನಿಲುವಿನಲ್ಲಿ ದ್ವಂದ್ವ ಕಾಣಿಸೀತು. ಮಕ್ಕಳ ಭವಿಷ್ಯದ ನಿಮಿತ್ತ ಧನವ್ಯಯವಾಗಲಿದೆ.  ಉದ್ಯೋಗ ಬದಲಾವಣೆಗೆ ಪ್ರಯತ್ನ ಮುಂದುವರಿಸಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Ram Navami 2025: ದಿನಾಂಕ, ಶುಭ ಮುಹೂರ್ತ ಇಲ್ಲಿದೆ

Saraswathi Mantra: ವಿದ್ಯೆ ತಲೆಗೆ ಹತ್ತಬೇಕೆಂದರೆ ಸರಸ್ವತಿಯ ಈ ಸ್ತೋತ್ರ ಓದಿ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

Durga Mantra: ದುರ್ಗಾ ಚಾಲೀಸ ಮಂತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments