Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 1 ಜನವರಿ 2023 (09:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮಗೆ ಪೈಪೋಟಿ ಎದುರಾದೀತು. ಸಾಂಸಾರಿಕವಾಗಿ ವೈಮನಸ್ಯಗಳನ್ನು ಸರಿಪಡಿಸಿಕೊಳ್ಳಲಿದ್ದೀರಿ. ದೂರದ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರುವುದು. ತಾಳ್ಮೆಯಿರಲಿ.

ವೃಷಭ: ಕೆಲಸ ಕಾರ್ಯಗಳು ವಿಘ‍್ನ ತೋರಿಬಂದರೂ ನಿಮ್ಮ ಯಶಸ್ಸು ಯಾರಿಂದಲೂ ತಡೆಯಲಾಗದು. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ಚಿಂತೆ ಬೇಡ.

ಮಿಥುನ: ವೃತ್ತಿಸಂಬಂಧವಾದ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಲು ಕ್ರಿಯಾತ್ಮಕ ದಾರಿಗಳನ್ನು ಹುಡುಕಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಒದಗಿಬರಲಿದೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ.

ಕರ್ಕಟಕ: ನಿಮ್ಮ ಕಷ್ಟದ ಸಮಯದಲ್ಲಿ ಆಪ್ತರ ಸಹಾಯ ಒದಗಿಬರುವುದು. ವಿಶೇಷ ವ್ಯಕ್ತಿಗಳಿಂದ ನಿಮ್ಮ ಜೀವನದಲ್ಲಿ ಹೊಸ ಸಂತೋಷ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಅನಗತ್ಯ ಚಿಂತೆ ಬೇಡ.

ಸಿಂಹ: ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಹಿರಿಯರ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ಕಂಡುಬರುವುದು. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಯೋಜನೆ ರೂಪಿಸಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ತುಲಾ: ಕಾರ್ಯ ನಿಮಿತ್ತ ಅಧಿಕ ಓಡಾಟ ನಡೆಸಬೇಕಾಗುತ್ತದೆ. ವಾಹನ ಸಂಚಾರ ಮಾಡುವಾಗ ಎಚ್ಚರಿಕೆ ಅಗತ್ಯ. ಮನೆಗೆ ಅತಿಥಿಗಳ ಆಗಮನವಾಗಲಿದೆ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.

ವೃಶ್ಚಿಕ: ವೃತ್ತಿರಂಗದಲ್ಲಿ ನಿಮ್ಮ ವೈಯಕ್ತಿಕ ಲಾಭದ ಬಗ್ಗೆ ಚಿಂತನೆ ಮಾಡಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಅತೀವ ಎಚ್ಚರಿಕೆ ಅಗತ್ಯ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರುವುದು. ಇಷ್ಟ ಭೋಜನ ಮಾಡುವ ಯೋಗ.

ಧನು: ನಿಮ್ಮ ಮಾತಿನಿಂದ ಇತರರಿಗೆ ನೋವುಂಟಾಗುವ ಪ್ರಸಂಗಗಳು ಎದುರಾದೀತು. ನೆರೆಹೊರೆಯವರೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ವಿದ್ಯಾರ್ಥಿಗಳಿಗೆ ಉದಾಸೀನ ಪ್ರವೃತ್ತಿ ಸಲ್ಲದು.

ಮಕರ: ನಿಮ್ಮ ಕಠಿಣ ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕೇ ಸಿಗುತ್ತದೆ. ನಿರಾಶೆ ಬೇಡ. ಉನ್ನತಾಧಿಕಾರದಲ್ಲಿರುವವರಿಗೆ ಜವಾಬ್ಧಾರಿಗಳು ಇನ್ನಷ್ಟು ಹೆಚ್ಚಾಗಲಿದೆ. ಕೌಟುಂಬಿಕವಾಗಿ ನಿಮ್ಮ ಕೆಲಸಗಳಿಗೆ ಸಹಕಾರ ಕಂಡುಬರುವುದು.

ಕುಂಭ: ನಿಮ್ಮ ಹೊಸ ಬಗೆಯ ಯೋಚನೆಗಳು ನಿಮ್ಮ ಭವಿಷ್ಯದ ದಿಕ್ಕನ್ನೇ ಬದಲಾಯಿಸಲಿದೆ. ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ಸಂಗಾತಿಯಿಂದ ಸಂತೋಷ ಸಿಗುವುದು. ಚಿಂತೆ ಬೇಡ.

ಮೀನ: ಸಾಮಾಜಿಕವಾಗಿ ಜನಮನ್ನಣೆಗೆ ಪಾತ್ರರಾಗಲಿದ್ದೀರಿ. ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ದಾಂಪತ್ಯ ಸುಖ ವೃದ್ಧಿಯಾಗಲಿದೆ.ಅವಿವಾಹಿತರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಆರೋಗ್ಯದಲ್ಲಿ ಸುಧಾರಣೆಯಿರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?