Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 4 ಜನವರಿ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಬೇರೆಯವರ ಮಾತಿನ ಪ್ರಭಾವಕ್ಕೊಳಗಾಗಿ ಆಪ್ತರೊಂದಿಗೆ ಸಂಘರ್ಷ ಮಾಡಿಕೊಳ್ಳಬೇಡಿ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ. ಆರ್ಥಿಕವಾಗಿ ಹಣಕಾಸಿನ ಗಳಿಕೆಗೆ ಹೊಸ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ.

ವೃಷಭ: ಉದ್ಯೋಗ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಹೊಸ ಅವಕಾಶಗಳು ಕಂಡುಬಂದೀತು. ವೈಯಕ್ತಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಸನ್ಮಿತ್ರರ ಸಹಕಾರದಿಂದ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬರುವುದು.

ಮಿಥುನ: ಕೌಟುಂಬಿಕವಾಗಿ ವಾದ ವಿವಾದವಾಗದಂತೆ ಎಚ್ಚರಿಕೆ ವಹಿಸಿ. ಯಾವುದೇ ತೀರ್ಮಾನ ಕೈಗೊಳ್ಳುವ ಮುನ್ನ ಆಪ್ತರೊಂದಿಗೆ ಸಮಾಲೋಚನೆ ನಡೆಸುವುದು ಉತ್ತಮ. ವಿದ್ಯಾರ್ಥಿಗಳಿಗೆ ಉನ್ನತಿಯ ಯೋಗವಿದೆ.

ಕರ್ಕಟಕ: ಕೌಟುಂಬಿಕವಾಗಿ ಅಭಿವೃದ್ಧಿ, ಸಂತೋಷ ಕಂಡುಬರಲಿದೆ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಭೇಟಿ ಸಾಧ್ಯತೆ. ಹಣಕಾಸಿನ ಹರಿವಿದ್ದರೂ ಅಷ್ಟೇ ಖರ್ಚೂ ಇರಲಿದೆ. ವ್ಯಾಪಾರಿಗಳಿಗೆ ಹಿತ ಶತ್ರುಗಳ ಕಾಟ ಕಂಡುಬಂದೀತು.

ಸಿಂಹ: ಕಾರ್ಯಕ್ಷೇತ್ರದಲ್ಲಿ ನಾಯಕತ್ವ  ವಹಿಸಿಕೊಳ್ಳಬೇಕಾದ ಸಂದರ್ಭ ಬಂದೀತು. ಕ್ರಿಯಾತ್ಮಕ ಕೆಲಸಗಳಿಗೆ ಇತರರಿಂದ ಮೆಚ್ಚುಗೆ ಸಿಗಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕನ್ಯಾ: ಗುರು, ಹಿರಿಯರ ಮಾರ್ಗದರ್ಶನದಿಂದ ಕೈ ಹಿಡಿದ ಕೆಲಸಗಳಲ್ಲಿ ಯಶಸ್ಸು ಸಿಕ್ಕೀತು. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಹಳೆಯ ಮಿತ್ರರನ್ನು ಅನಿರೀಕ್ಷಿತವಾಗಿ  ಭೇಟಿಯಾಗುವ ಯೋಗ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ನಿಮ್ಮ ತಾಳ್ಮೆಯನ್ನು ಇತರರು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ‍್ಯತೆಯಿದೆ. ಮಾತಿನಲ್ಲಿ ಸ್ಪಷ್ಟತೆಯಿರಲಿ. ಮಹಿಳೆಯರಿಂದ ನಿಮಗೆ ಒಳಿತಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ವೃಶ್ಚಿಕ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಕಾರ್ಯರಂಗದಲ್ಲಿ ಇತರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕಾಗುತ್ತದೆ. ವಾಹನ, ಭೂಮಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.

ಧನು: ಮಕ್ಕಳ ಜೀವನದ ಬಗ್ಗೆ ಅನಗತ್ಯ ಯೋಚನೆಗಳಿಂದ ಮನಸ್ಸು ಹೈರಾಣಾಗಲಿದೆ. ವೃಥಾ ಖರ್ಚು ವೆಚ್ಚವಾಗದಂತೆ ಎಚ್ಚರಿಕೆ ವಹಿಸಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಬಂಧು ಮಿತ್ರರ ಭೇಟಿಯಾಗುವ ಸಾಧ‍್ಯತೆ.

ಮಕರ: ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವೈದ್ಯಕೀಯ ವೃತ್ತಿಯವರಿಗೆ ಬಿಡುವಿಲ್ಲದ ಕೆಲಸ. ದೇಹಾರೋಗ್ಯದ ಬಗ್ಗೆ ಗಮನಕೊಡಿ.

ಕುಂಭ: ಕೌಟುಂಬಿಕವಾಗಿ ಸಣ್ಣ ಪುಟ್ಟ ಸಮಸ್ಯೆಗಳಾದರೂ ಉಪೇಕ್ಷೆ ಬೇಡ. ತಾಳ್ಮೆ, ಸಂಯಮ ಅಗತ್ಯ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಕಾರ್ಯನಿಮಿತ್ತ ಪ್ರಯಾಣ ಮಾಡಬೇಕಾಗಿ ಬರಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಮೀನ: ಪರರಿಗೆ ಸಹಾಯ ಮಾಡುವ ಮುನ್ನ ಪೂರ್ವಾಪರ ವಿಚಾರಿಸುವುದು ಉತ್ತಮ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಸಂಗಾತಿಯಿಂದ ಮುಚ್ಚಿಟ್ಟ ವಿಚಾರಗಳು ಹೊರ ಬಂದೀತು. ತಾಳ‍್ಮೆಯಿರಲಿ.

ಸಂಬಂಧಿಸಿದ ಸುದ್ದಿ

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಯಶಸ್ಸು ಸಿಗಬೇಕಾದರೆ ವೈಶಾಖ ಮಾಸದಲ್ಲಿ ಈ ಕೆಲಸ ಮಾಡಬೇಕು

ಮುಂದಿನ ಸುದ್ದಿ
Show comments