Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಸೋಮವಾರ, 9 ಜನವರಿ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವಿದ್ಯಾರ್ಜನೆಗಾಗಿ ದೂರ ಪ್ರಯಾಣ ಮಾಡಬೇಕಾದ ಸ್ಥಿತಿ ಎದುರಾಗಲಿದೆ. ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಕೀರ್ತಿ ಸಂಪಾದಿಸುವ ಯೋಗ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದೀರಿ.

ವೃಷಭ: ಮಕ್ಕಳಿಗೆ ಹೊಸ ವಿಚಾರ ಕಲಿಸುವ ಉತ್ಸಾಹ ತೋರಲಿದ್ದೀರಿ. ಇಷ್ಟ ಮಿತ್ರರನ್ನು ಭೇಟಿಯಾಗುವ ಯೋಗ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಸರಕಾರೀ ಕೆಲಸಗಳಿಗೆ ಓಡಾಟ ನಡೆಸಬೇಕಾಗುತ್ತದೆ.

ಮಿಥುನ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಕಾಡೀತು. ಸಂಗಾತಿಯೊಂದಿಗೆ ಮನಸ್ಸಿನ ಮಾತು ಹಂಚಿಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ಸಮಾನ ಮನಸ್ಕರೊಂದಿಗೆ ಬೆರೆಯಲಿದ್ದೀರಿ. ಉದ್ಯೋಗ, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿದ್ದರೂ ಖರ್ಚಿಗೆ ನಾನಾ ದಾರಿಗಳು ಕಂಡುಬಂದೀತು. ಮಹಿಳೆಯರಿಗೆ ನೆಮ್ಮದಿಯ ದಿನವಾಗಲಿದೆ.

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಎಲ್ಲರೂ ನಿಮ್ಮ ಮಾತು ಕೇಳುವಂತಾಗಲಿದೆ. ಕ್ರಿಯಾತ್ಮಕ ಕೆಲಸಗಳಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಚೇತರಿಕೆ ಕಂಡುಬರಲಿದೆ. ದಂಪಂತಿಗಳ ನಡುವೆ ಅನುರಾಗ  ವೃದ್ಧಿ.

ಕನ್ಯಾ: ನಿಮ್ಮಲ್ಲಿರುವ ಸುಪ್ತ ಪ್ರತಿಭೆಗಳನ್ನು ಪ್ರದರ್ಶಿಸುವ ಕಾಲ ಒದಗಿಬರಲಿದೆ. ಕಷ್ಟ ಕಾಲದಲ್ಲಿ ಆಪ್ತರಿಗೆ ಸಹಾಯ ಮಾಡಲಿಲ್ಲ ಎಂಬ ಕೊರಗು ಕಂಡುಬಂದೀತು. ಸಂಗಾತಿಯ ಮಾತುಗಳು ಸಾಂತ್ವನ ನೀಡಲಿವೆ.

ತುಲಾ: ಉದ್ಯೋಗ ಸಂಬಂಧವಾದ ಸಮಸ್ಯೆಗಳಿಗೆ ಸ್ನೇಹಿತರಿಂದ ಪರಿಹಾರ ಸಿಗಲಿದೆ. ಸಹವಾಸ ದೋಷದಿಂದ ಕೆಲವೊಂದು ಅಭ್ಯಾಸಗಳು ಕಂಡುಬಂದೀತು. ಮಾತಿನ ಮೇಲೆ ನಿಗಾ ಇರಲಿ. ಕಿರು ಸಂಚಾರ ಮಾಡಲಿದ್ದೀರಿ.

ವೃಶ್ಚಿಕ: ಸುದೃವವಶಾತ್ ಎಲ್ಲವೂ ನೀವಂದುಕೊಂಡಂತೆಯೇ ಕೆಲಸ ಕಾರ್ಯಗಳು ನಡೆಯಲಿವೆ. ಪಾಲುದಾರಿಕೆ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.

ಧನು: ನಿಮ್ಮ ಮಾತುಗಳು ಇತರರಿಗೆ ಕಿರಿ ಕಿರಿ ಎನಿಸೀತು. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ. ಮಾತೃ ಸಮಾನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗುವುದು.

ಮಕರ: ನಿಮ್ಮ ಜೊತೆಗೇ ಇದ್ದು ನಿಮಗೇ ವಂಚಿಸುವವರಿರುತ್ತಾರೆ. ಎಚ್ಚರಿಕೆಯಿರಲಿ. ಹಣಕಾಸಿನ ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ. ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ದೇವತಾ ಪ್ರಾರ್ಥನೆ ಮರೆಯದಿರಿ.

ಕುಂಭ: ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಅಡೆತಡೆಗಳು ಕಂಡುಬಂದೀತು. ವಾಹನ, ಭೂಮಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರುವುದು. ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗದಂತೆ ಎಚ್ಚರಿಕೆ ವಹಿಸಿ.

ಮೀನ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬಂದೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ನಿರ್ಧಾರಗಳನ್ನು ಕೈಗೊಳ್ಳುವಾಗ ಚಿತ್ತಚಾಂಚಲ್ಯ ಕಂಡುಬಂದೀತು. ತಾಳ್ಮೆಯಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?