Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 10 ಜನವರಿ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಹಠಮಾರೀ ಮನೋಭಾವದಿಂದ ನಷ್ಟವೇ ಹೆಚ್ಚು. ಪರರ ನಿಂದನೆಯಲ್ಲಿ ಕಾಲ ಹರಣ ಮಾಡಬೇಡಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಎದುರಾಳಿಗಳಿಂದ ಅಡೆತಡೆಗಳು ಕಂಡುಬಂದೀತು. ಎಲ್ಲವನ್ನೂ ನಿಭಾಯಿಸಿಕೊಂಡು ಹೋಗಬೇಕಾಗುತ್ತದೆ. ಸಹೋದರಾದಿ ಸಂಬಂಧಿಗಳೊಂದಿಗೆ ಭಿನ್ನಾಭಿಪ್ರಾಯ ಸರಿಪಡಿಸಿಕೊಳ್ಳಲಿದ್ಧೀರಿ.

ಮಿಥುನ: ಆಸ್ತಿ ಪರಭಾರೆ ವಿಚಾರಗಳಲ್ಲಿ ಹಿರಿಯರ ಸಲಹೆ ಪಡೆಯುವುದು ಉತ್ತಮ. ಸರಕಾರೀ ನೌಕರರಿಗೆ ಮುಂಬಡ್ತಿ ಯೋಗ. ವಿದ್ಯಾರ್ಥಿಗಳಿಗೆ ಹೊಸ ವಿಷಯ ಕಲಿಕೆಗೆ ಅವಕಾಶಗಳು ಒದಗಿಬರಲಿದೆ. ಬಳಸಿಕೊಳ್ಳಿ.

ಕರ್ಕಟಕ: ನಿಮ್ಮ ಎದುರಾಳಿಗಳಿಗಳೂ ಮನಸೋಲುವಂತೆ ಕೆಲಸ ಮಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಆತಂಕ ಬೇಡ.

ಸಿಂಹ: ವೈಯಕ್ತಿಕ ವಿಚಾರದಲ್ಲಿ ಮೂರನೆಯವರು ಮೂಗು ತೂರಿಸುವುದರಿಂದ ನಿಮಗೆ ಕಿರಿ ಕಿರಿ ಎನಿಸೀತು. ಸರಿಯಾಗಿ ವಿಮರ್ಶೆ ನಡೆಸಿ ನಿರ್ಧಾರ ತೆಗೆದುಕೊಳ‍್ಳುವುದು ಸೂಕ್ತ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕನ್ಯಾ: ನಿಮ್ಮ ಎದುರಿಗೇ ನಡೆದ ತಪ್ಪು ಬಗ್ಗೆ ನೆನೆದು ಮನಸ್ಸಿಗೆ ಹಿಂಸೆಯಾದೀತು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಕುಲದೇವರ ಪ್ರಾರ್ಥನೆ ಮಾಡಿ.

ತುಲಾ: ನಿಮ್ಮಿಂದ ಹಿಂದೆ ಸಹಾಯ ಪಡೆದವರಿಂದ ಪ್ರತ್ಯುಪಕಾರ ಲಭಿಸಲಿದೆ. ವ್ಯಾವಹಾರಿಕವಾಗಿ ಹೊಸ ಅವಕಾಶಗಳು ಒದಗಿಬರಲಿದೆ. ಸಂಗಾತಿಗೆ ಅಚ್ಚರಿಯ ಉಡುಗೊರೆ ಮೂಲಕ ಖುಷಿ ನೀಡಲಿದ್ದೀರಿ. ಅನಗತ್ಯ ಚಿಂತೆ ಬೇಡ.

ವೃಶ್ಚಿಕ: ಗಣ್ಯ ವ್ಯಕ್ತಿಗಳ ಸಂಪರ್ಕದಿಂದ ನಿಮ್ಮ ಕೆಲಸ ಕಾರ್ಯಗಳು ಸುಗಮವಾಗಿ ನೆರವೇರಲಿದೆ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬರುವುದು. ಸಂಗಾತಿಯ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಧನು: ಗೃಹಸಂಬಂಧೀ ವಿಚಾರವಾಗಿ ಸಂಗಾತಿಯೊಂದಿಗೆ ಸಂಘರ್ಷಕ್ಕಿಳಿಯಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ವಿದ್ಯಾರ್ಥಿಗಳಿಗೆ ಉತ್ತಮ ಫಲ ದೊರೆಯಲಿದೆ. ತಾಳ್ಮೆಯಿರಲಿ.

ಮಕರ: ಮನಸ್ಸಿಗೆ ಸಂತೋಷ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಕುಂಭ: ನಿಮ್ಮ ಬೆನ್ನ ಹಿಂದೆ ಹುನ್ನಾರ ನಡೆಸುವವರ ಸಂಚು ಬಯಲಾಗಲಿದೆ. ಮನೆಗೆ ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನ ಸಾಧ‍್ಯತೆ. ಹಣಕಾಸಿನ ಹರಿವಿದ್ದರೂ ಖರ್ಚೂ ಅಷ್ಟೇ ಇರಲಿದೆ. ಪ್ರೀತಿ ಪಾತ್ರರಿಂದ ನೆಮ್ಮದಿ.

ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ್ಯತೆ. ಆರ್ಥಿಕವಾಗಿ ಅಡಚಣೆಗಳು ಕಂಡುಬಂದೀತು. ನಿಮಗೆ ಸಿಗಬೇಕಾಗಿದ್ದ ವಸ್ತು ನಿಮ್ಮ ಕೈಗೆ ಬಂದೇ ಬರುತ್ತದೆ. ಭೂಮ್ಯಾದಿ ವ್ಯವಹಾರಗಳಲ್ಲಿ ನಿರ್ಣಾಯಕ ದಿನ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?